AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ನೀಡುವ ವೇಗ ಹೆಚ್ಚಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಅಜಯ್​ಕುಮಾರ್​ ಭಲ್ಲಾ

ಯಾವುದೇ ರಾಜ್ಯದಲ್ಲಿ ಲಾಕ್​ಡೌನ್​ ತೆರವುಗೊಳಿಸುವಾಗ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ, ಕಾರ್ಯತಂತ್ರ ರೂಪಿಸದೆ ತೆಗೆಯುವಂತಿಲ್ಲ. ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಮತ್ತು ವ್ಯಾಕ್ಸಿನೇಶನ್​ ಎಂಬ ನಾಲ್ಕು ಕ್ರಮಗಳನ್ನು ಒಳಗೊಂಡೇ ಲಾಕ್​ಡೌನ್ ತೆರವು ಮಾಡಬೇಕು ಎಂದು ಅಜಯ್​ ಭಲ್ಲಾ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ನೀಡುವ ವೇಗ ಹೆಚ್ಚಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಅಜಯ್​ಕುಮಾರ್​ ಭಲ್ಲಾ
ಅಜಯ್​ ಕುಮಾರ್ ಭಲ್ಲಾ
TV9 Web
| Edited By: |

Updated on: Jun 19, 2021 | 2:51 PM

Share

ಕೊರೊನಾ ಮೊದಲ ಅಲೆ ತುಸು ತಗ್ಗುತ್ತಿದ್ದಂತೆ ದೇಶ ಸಹಜ ಸ್ಥಿತಿಗೆ ಮರಳಿತ್ತು. ಆದರೆ ಆಗಲೇ ಮುಂಬೈ-ಮಹಾರಾಷ್ಟ್ರದಲ್ಲಿ ಎರಡನೇ ಅಲೆ ಎದ್ದಾಗಿತ್ತು. ಆದರೂ ಉಳಿದ ರಾಜ್ಯಗಳು ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಎಲ್ಲ ರೀತಿಯ ಗುಂಪುಗೂಡುವಿಕೆ, ಕಾರ್ಯಚಟುವಟಿಕೆಗಳು ಮುಂದುವರಿದೇ ಇದ್ದವು. ಅದರ ಪರಿಣಾಮ ಕೊವಿಡ್​ 19 ಎರಡನೇ ಅಲೆ ಅದೆಷ್ಟು ಭೀಕರವಾಯಿತೆಂದರೆ ಸೋಂಕಿನ ಪ್ರಸರಣ, ಸಾವಿನ ಸಂಖ್ಯೆಗಳೆಲ್ಲ ಮೊದಲ ಅಲೆಗಿಂತಲೂ ದ್ವಿಗುಣಗೊಂಡವು. ಹಾಗೇ, ಈಗ ಕೊರೊನಾ 2ನೇ ಅಲೆ ತಗ್ಗುತ್ತಿದೆ..ಮತ್ತೆ ಮಹಾರಾಷ್ಟ್ರದಲ್ಲಿ ಮೂರನೇ ಅಲೆ ಎದ್ದ ಬಗ್ಗೆ ವರದಿಯೂ ಆಗುತ್ತಿದೆ. ಇದೇ ಹೊತ್ತಲ್ಲಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್​ ಭಲ್ಲಾ, ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ಇಷ್ಟು ದಿನ ಕೊರೊನಾ ಸೋಂಕಿನ ಪ್ರಸರಣ ಉಲ್ಬಣಗೊಂಡಿದ್ದ ಪರಿಣಾಮ ಬಹುತೇಕ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಾಕ್​ಡೌನ್​, ಕರ್ಫ್ಯೂದಂಥ ನಿಯಮಗಳನ್ನು ಹೇರಲಾಗಿತ್ತು. ಆದರೆ ಈಗ ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿರುವ ಬೆನ್ನಲ್ಲೇ ನಿರ್ಬಂಧಗಳನ್ನು ತೆಗೆಯಲಾಗುತ್ತಿದೆ. ನಿರ್ಬಂಧಗಳನ್ನು ತೆರವುಗೊಳಿಸುವಾಗ ಅಥವಾ ಹೇರುವಾಗ ಆಯಾ ಪ್ರದೇಶಗಳಲ್ಲಿನ ಸಂದರ್ಭವನ್ನು ತಳಮಟ್ಟದಲ್ಲಿ ಪರಿಶೀಲಿಸಬೇಕು ಎಂದು ಪತ್ರದಲ್ಲಿ ಅಜಯ್​ ಭಲ್ಲಾ ತಿಳಿಸಿದ್ದಾರೆ.

ಯಾವುದೇ ರಾಜ್ಯದಲ್ಲಿ ಲಾಕ್​ಡೌನ್​ ತೆರವುಗೊಳಿಸುವಾಗ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ, ಕಾರ್ಯತಂತ್ರ ರೂಪಿಸದೆ ತೆಗೆಯುವಂತಿಲ್ಲ. ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಮತ್ತು ವ್ಯಾಕ್ಸಿನೇಶನ್​ ಎಂಬ ನಾಲ್ಕು ಕ್ರಮಗಳನ್ನು ಒಳಗೊಂಡೇ ಲಾಕ್​ಡೌನ್ ತೆರವು ಮಾಡಬೇಕು ಎಂದು ಅಜಯ್​ ಭಲ್ಲಾ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಕೊರೊನಾ ಸರಪಳಿ ಮುರಿಯಲು ಲಸಿಕೆಯೇ ನಿರ್ಣಾಯಕವಾಗಿದೆ. ಹಾಗಾಗಿ ಎಲ್ಲ ಸರ್ಕಾರಗಳೂ ತಮ್ಮ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಬೇಕು. ಹಾಗೇ, ಎಲ್ಲ ರಾಜ್ಯಗಳೂ ಆಯಾ ಜಿಲ್ಲಾಡಳಿತಗಳು, ಸ್ಥಳೀಯ ಆಡಳಿತಗಳಿಗೆ ಕೊರೊನಾ ನಿಯಂತ್ರಣ ಸಂಬಂಧ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅಜಯ್​ ಭಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್