AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋಸಾಫ್ಟ್​ಗೆ ಗುಡ್ ಬೈ, ಜೋಹೋ ಮೂಲಕ ಸಂಪುಟ ಸಭೆಯ ಮಾಹಿತಿ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸ್ವದೇಶಿ ಅಭಿಯಾನ

ಜಿಎಸ್​ಟಿ ಪರಿಷ್ಕರಣೆ ಹಾಗೂ ಅಮೆರಿಕ ಭಾರತದ ಆಮದು ವಸ್ತುಗಳ ಮೇಲೆ ಹೆಚ್ಚುವರಿ ಸುಂಕ ಹೇರಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ವದೇಶಿ ವಸ್ತುಗಳ ಬಳಕೆಗೆ ಜನರನ್ನು ಒತ್ತಾಯಿಸುತ್ತಿದೆ. ಖುದ್ದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರೇ ಸ್ವದೇಶಿ ಅಭಿಯಾನದಲ್ಲಿ ಪಾಲ್ಗೊಂಡಿದ್ದು, ಮೈಕ್ರೋಸಾಫ್ಟ್ ಪವರ್ ಪಾಯಿಂಟ್ ಬದಲು ಸ್ವದೇಶಿ ವೇದಿಕೆಯಾದ ಜೋಹೋ ಬಳಸಲು ಕರೆ ನೀಡಿದ್ದಾರೆ.

ಮೈಕ್ರೋಸಾಫ್ಟ್​ಗೆ ಗುಡ್ ಬೈ, ಜೋಹೋ ಮೂಲಕ ಸಂಪುಟ ಸಭೆಯ ಮಾಹಿತಿ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸ್ವದೇಶಿ ಅಭಿಯಾನ
Ashwini Vaishnaw
ಸುಷ್ಮಾ ಚಕ್ರೆ
|

Updated on: Sep 24, 2025 | 9:14 PM

Share

ನವದೆಹಲಿ, ಸೆಪ್ಟೆಂಬರ್ 24: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವದೇಶಿ ಅಭಿಯಾನಕ್ಕೆ ಕರೆನೀಡಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಆ ಕುರಿತಾದ ಬ್ರೀಫಿಂಗ್​​ಗೆ ಅವರು ಪವರ್ ಪಾಯಿಂಟ್ ಬದಲು ಸ್ವದೇಶಿಯಾದ ಜೋಹೋವನ್ನು (Zoho) ಬಳಸಿದ್ದಾರೆ. ಸರ್ಕಾರಿ ವಲಯದಲ್ಲಿ ಈ ಜೋಹೋವನ್ನು ವ್ಯಾಪಕವಾಗಿ ಬಳಸುವ ಮೂಲಕ ಜನರಿಗೂ ಈ ಬಗ್ಗೆ ಆಸಕ್ತಿ ಉಂಟಾಗುವಂತೆ ಮಾಡಲಾಗುತ್ತಿದೆ. ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ದಾಖಲೆಗಳು, ಸ್ಪ್ರೆಡ್‌ಶೀಟ್‌ಗಳು ಮತ್ತು ಪ್ರಸ್ತುತಿಗಳಿಗಾಗಿ ಸ್ವದೇಶಿ ವೇದಿಕೆಯಾದ ಜೋಹೊವನ್ನು ಬಳಸಲು ಪ್ರಾರಂಭಿಸಿದ್ದಾರೆ.

ಅವರು ತಮ್ಮ ಸಚಿವಾಲಯದಲ್ಲಿ ಮೈಕ್ರೋಸಾಫ್ಟ್ ಬದಲು ಜೋಹೋ ಬಳಸಲಾರಂಭಿಸಿದ್ದು, ಇಂದು ಕ್ಯಾಬಿನೆಟ್ ಬ್ರೀಫಿಂಗ್ ಅನ್ನು ಜೋಹೋದಲ್ಲೇ ನೀಡುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೊದಲು ಸೋಮವಾರ (ಸೆಪ್ಟೆಂಬರ್ 22) ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ದಾಖಲೆಗಳು, ಸ್ಪ್ರೆಡ್‌ಶೀಟ್‌ಗಳು ಮತ್ತು ಪ್ರೆಸೆಂಟೇನ್​ಗೆ ಸ್ವದೇಶಿ ವೇದಿಕೆಯಾದ ಜೋಹೋವನ್ನು ಬಳಸಲು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಅವರು “ಸ್ವದೇಶಿ” ಉತ್ಪನ್ನಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವಂತೆ ಭಾರತೀಯರನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಸ್ವದೇಶಿ ಉತ್ಪನ್ನ ಬಳಸಿ; ಜೋಹೋ ಬಳಸುವ ಮೂಲಕ ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಪ್ರಧಾನಿ ಮೋದಿಯವರ ಸ್ವದೇಶಿ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಅಶ್ವಿನಿ ವೈಷ್ಣವ್ ಕರೆನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ Xನಲ್ಲಿ ಪೋಸ್ಟ್ ಮಾಡಿರುವ ಐಟಿ, ರೈಲ್ವೆ, ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, “ನಾನು ದಾಖಲೆಗಳು, ಸ್ಪ್ರೆಡ್‌ಶೀಟ್‌ಗಳು ಮತ್ತು ಪ್ರೆಸೆಂಟೇಷನಿಗಾಗಿ ನಮ್ಮದೇ ಆದ ಸ್ಥಳೀಯ ವೇದಿಕೆ ಜೋಹೊವನ್ನು ಬಳಸುತ್ತಿದ್ದೇನೆ” ಎಂದು ಹೇಳಿದ್ದರು. ಅದರಂತೆಯೇ ಅವರು ನಡೆದುಕೊಂಡಿದ್ದಾರೆ ಕೂಡ.

ಪ್ರಧಾನಿ ನರೇಂದ್ರ ಮೋದಿಯವರ ಸ್ವದೇಶಿ ಕರೆಗೆ ಸೇರಲು ಮತ್ತು ಸ್ಥಳೀಯ ಉತ್ಪನ್ನಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳಲು ಕೇಂದ್ರ ಸಚಿವ ವೈಷ್ಣವ್ ಇತರರಿಗೂ ಕರೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್