AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ
TV9 Web
| Edited By: |

Updated on:Sep 04, 2022 | 1:02 PM

Share

ದೆಹಲಿ: ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ನೀಡಿರುವ ಹೇಳಿಕೆಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಟೀಕಿಸಿದ್ದಾರೆ. ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದ ತುಣುಕನ್ನು ಟ್ವೀಟ್ ಮಾಡಿರುವ ಕಿರಣ್ ರಿಜಿಜು, ‘ಜನಪ್ರಿಯ ಪ್ರಧಾನಿಯನ್ನು ಎಗ್ಗಿಲ್ಲದೆ ಟೀಕಿಸುವ ಇಂಥವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ. ಅಂಥವರು ಕಾಂಗ್ರೆಸ್​ ಪಕ್ಷವು ದೇಶದ ಮೇಲೆ ಹೇರಿದ ತುರ್ತುಪರಿಸ್ಥಿತಿ ಬಗ್ಗೆಯಾಗಲೀ, ದೇಶದ ಕೆಲ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳ ಬಗ್ಗೆಯಾಗಲೀ ಎಂದಿಗೂ ಮಾತನಾಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಂದರ್ಶನದಲ್ಲಿ ಮಾತನಾಡುವಾಗ, ‘ಇಂದು ಕೆಲ ಸಂಗತಿಗಳು ತೀರಾ ಕೆಟ್ಟದಾಗಿವೆ. ನಾನು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿಯ ಮುಖ ನನಗಿಷ್ಟವಿಲ್ಲ ಎಂದು ಹೇಳಿದರೆ ನನ್ನ ಮೇಲೆ ದಾಳಿಯಾಗಬಹುದು. ಯಾವುದೇ ಕಾರಣ ನೀಡದೇ ನನ್ನನ್ನು ಬಂಧಿಸಿ ಜೈಲಿಗೆ ಅಟ್ಟಬಹುದು. ಈ ಪ್ರವೃತ್ತಿಯನ್ನು ದೇಶದ ಎಲ್ಲ ನಾಗರಿಕರು ವಿರೋಧಿಸುತ್ತಿದ್ದೇವೆ’ ಎಂದು ಹೇಳಿದ್ದರು.

ಈ ಹೇಳಿಕೆ ಖಂಡಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಈ ಹೇಳಿಕೆ ನೀಡಿರುವುದು ನಿಜವೇ ಆಗಿದ್ದರೆ, ಅವರು ತಾವು ಸೇವೆ ಸಲ್ಲಿಸಿದ ಸಂಸ್ಥೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದರು.

Published On - 1:01 pm, Sun, 4 September 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ