AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ
TV9 Web
| Edited By: |

Updated on:Sep 04, 2022 | 1:02 PM

Share

ದೆಹಲಿ: ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ನೀಡಿರುವ ಹೇಳಿಕೆಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಟೀಕಿಸಿದ್ದಾರೆ. ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದ ತುಣುಕನ್ನು ಟ್ವೀಟ್ ಮಾಡಿರುವ ಕಿರಣ್ ರಿಜಿಜು, ‘ಜನಪ್ರಿಯ ಪ್ರಧಾನಿಯನ್ನು ಎಗ್ಗಿಲ್ಲದೆ ಟೀಕಿಸುವ ಇಂಥವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ. ಅಂಥವರು ಕಾಂಗ್ರೆಸ್​ ಪಕ್ಷವು ದೇಶದ ಮೇಲೆ ಹೇರಿದ ತುರ್ತುಪರಿಸ್ಥಿತಿ ಬಗ್ಗೆಯಾಗಲೀ, ದೇಶದ ಕೆಲ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳ ಬಗ್ಗೆಯಾಗಲೀ ಎಂದಿಗೂ ಮಾತನಾಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಂದರ್ಶನದಲ್ಲಿ ಮಾತನಾಡುವಾಗ, ‘ಇಂದು ಕೆಲ ಸಂಗತಿಗಳು ತೀರಾ ಕೆಟ್ಟದಾಗಿವೆ. ನಾನು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿಯ ಮುಖ ನನಗಿಷ್ಟವಿಲ್ಲ ಎಂದು ಹೇಳಿದರೆ ನನ್ನ ಮೇಲೆ ದಾಳಿಯಾಗಬಹುದು. ಯಾವುದೇ ಕಾರಣ ನೀಡದೇ ನನ್ನನ್ನು ಬಂಧಿಸಿ ಜೈಲಿಗೆ ಅಟ್ಟಬಹುದು. ಈ ಪ್ರವೃತ್ತಿಯನ್ನು ದೇಶದ ಎಲ್ಲ ನಾಗರಿಕರು ವಿರೋಧಿಸುತ್ತಿದ್ದೇವೆ’ ಎಂದು ಹೇಳಿದ್ದರು.

ಈ ಹೇಳಿಕೆ ಖಂಡಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಈ ಹೇಳಿಕೆ ನೀಡಿರುವುದು ನಿಜವೇ ಆಗಿದ್ದರೆ, ಅವರು ತಾವು ಸೇವೆ ಸಲ್ಲಿಸಿದ ಸಂಸ್ಥೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದರು.

Published On - 1:01 pm, Sun, 4 September 22

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್