AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiren Rijiju: ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತ; ಯಾರಿಗೂ ಪ್ರಾಣಾಪಾಯವಿಲ್ಲ

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Kiren Rijiju: ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತ; ಯಾರಿಗೂ ಪ್ರಾಣಾಪಾಯವಿಲ್ಲ
ಕಿರಣ್ ರಿಜಿಜು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 08, 2023 | 8:53 PM

Share

ಮುಖ್ಯಾಂಶಗಳು

  • ಕೇಂದ್ರ ಸಚಿವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ
  • ಕಾರು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ
  • ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ

ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ. ಈ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಇತರರು ಸಂಚರಿಸುತ್ತಿದ್ದರು. ಅಪಘಾತದಲ್ಲಿ ಬುಲೆಟ್‌ಪ್ರೂಫ್ ಕಾರು ಜಖಂಗೊಂಡಿದೆ. ಇಂದು ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಿರಣ್ ರಿಜಿಜು ಅವರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಲಾಗಿದೆ ಎಂದು ರಾಂಬನ್ ಪೊಲೀಸರು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಎಲ್ಲರೂ ಸುರಕ್ಷಿತರಾಗಿದ್ದಾರೆ. ಸಣ್ಣ ಅಪಘಾತವಾಗಿದ್ದು, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಎಡಿಜಿ ಮುಖೇಶ್ ಸಿಂಗ್ ಹೇಳಿದ್ದಾರೆ. ಘಟನೆಯ ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿ ಸಚಿವರ ಕಪ್ಪು ಸ್ಕಾರ್ಪಿಯೊದ ಬಾಗಿಲು ತೆರೆಯಲು ಧಾವಿಸಿ ಜನರನ್ನು ಹೊರಗೆ ಕರೆತರುವುದನ್ನು ಕಾಣುತ್ತದೆ.

ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ ಅಲ್ಲಿ ಸುತ್ತುವರಿದಿದ್ದು ಸಚಿವರು ವಾಹನದಿಂದ ಹೊರಬರುವುದನ್ನು ಚಿತ್ರಗಳು ತೋರಿಸುತ್ತವೆ.

ಇದನ್ನೂ ಓದಿ: ರಾಹುಲ್​​ಗೆ ಮತ್ತೊಂದು ಸಂಕಷ್ಟ; ತನ್ನ ಹೆಸರನ್ನು ಅದಾನಿ ಜತೆ ತಳಕು ಹಾಕಿದ್ದಕ್ಕೆ ನ್ಯಾಯಾಲಯದ ಮೆಟ್ಟಿಲೇರಲು ಹಿಮಂತ ಬಿಸ್ವ ಶರ್ಮಾ ನಿರ್ಧಾರ

ಇಂದು ಬೆಳಗ್ಗೆ ಕಾನೂನು ಸೇವೆಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಜಮ್ಮುವಿನಿಂದ ಉಧಮ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಸಚಿವರು ಪ್ರಯಾಣದುದ್ದಕ್ಕೂ ಸುಂದರವಾದ ರಸ್ತೆ ಪಯಣವನ್ನು ಆನಂದಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.

Published On - 8:30 pm, Sat, 8 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ