AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಹಿಂಸಾಚಾರದಲ್ಲಿ ಮೃತಪಟ್ಟ ಬಿಜೆಪಿ ಮುಖಂಡನ ಮನೆಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಜಯ್​ ಮಿಶ್ರಾ; ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಂತೆ !

ಬಿಜೆಪಿಯ ಮುಖಂಡ ಶ್ಯಾಮ್​ ಸುಂದರ್​ ನಿಶಾದ್​​ ಎಂಬುವರು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದಾರೆ. ಇವರ ಮನೆಗೆ ಭಾನುವಾರ ಕೇಂದ್ರ ಸಚಿವ ಅಜಯ್​ ಮಿಶ್ರಾ ತೇನಿ, ಬಿಜೆಪಿ ನಾಯಕರಾದ ಅರವಿಂದ್ ಸಿಂಗ್​ ಸಂಜಯ್​, ಯೋಗೇಶ್​ ವರ್ಮಾ ಮತ್ತಿತರರು ಭೇಟಿಕೊಟ್ಟಿದ್ದರು.

Lakhimpur Kheri Violence: ಹಿಂಸಾಚಾರದಲ್ಲಿ ಮೃತಪಟ್ಟ ಬಿಜೆಪಿ ಮುಖಂಡನ ಮನೆಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಜಯ್​ ಮಿಶ್ರಾ; ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಂತೆ !
ಕೇಂದ್ರ ಸಚಿವ ಅಜಯ್​ ಮಿಶ್ರಾ
TV9 Web
| Edited By: |

Updated on: Oct 18, 2021 | 8:18 AM

Share

ಲಖಿಂಪುರ ಖೇರಿಯಲ್ಲಿ ಹಿಂಸಾಚಾರ (Lakhimpur Violence) ನಡೆದು ಒಟ್ಟು 8 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ವರು ರೈತರು. ಇನ್ನೂ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಬಂಧಿತರಾಗಿದ್ದಾರೆ. ಇದೀಗ ಘಟನೆ ನಡೆದು ಸುಮಾರು ಒಂದು ವಾರಕ್ಕೂ ಅಧಿಕದಿನಗಳಾದ ನಂತರ ಕೇಂದ್ರ ಸಚಿವ ಅಜಯ್​ ಮಿಶ್ರಾ, ನಿನ್ನೆ ಮೃತ ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 

ಬಿಜೆಪಿಯ ಮುಖಂಡ ಶ್ಯಾಮ್​ ಸುಂದರ್​ ನಿಶಾದ್​​ ಎಂಬುವರು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದಾರೆ. ಇವರ ಮನೆಗೆ ಭಾನುವಾರ ಕೇಂದ್ರ ಸಚಿವ ಅಜಯ್​ ಮಿಶ್ರಾ ತೇನಿ, ಬಿಜೆಪಿ ನಾಯಕರಾದ ಅರವಿಂದ್ ಸಿಂಗ್​ ಸಂಜಯ್​, ಯೋಗೇಶ್​ ವರ್ಮಾ ಮತ್ತಿತರರು ಭೇಟಿಕೊಟ್ಟಿದ್ದರು. ಹಾಗೇ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.  ಅಷ್ಟೇ ಅಲ್ಲ, ಶ್ಯಾಮ್​ ಸುಂದರ್​ ಕುಟುಂಬದವರಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ.

ಇದೇ ಹೊತ್ತಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಲಖಿಂಪುರ ಸರ್ದಾರ್​ ಕ್ಷೇತ್ರದ ಬಿಜೆಪಿ ಶಾಸಕ ಯೋಗೇಶ್​ ವರ್ಮಾ, ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಒಟ್ಟು 37 ಜನರಿಗೆ ಸಮನ್ಸ್​ ನೀಡಲಾಗಿದೆ. ಅವರೆಲ್ಲರ ವಿಚಾರಣೆಯೂ ಶೀಘ್ರವೇ ಶುರುವಾಗಲಿದೆ ಎಂದು ತಮಗೆ ಸ್ಥಳೀಯ ಪೊಲೀಸ್​ ಅಧಿಕಾರಿ ಹೇಳಿದ್ದಾಗಿ ತಿಳಿಸಿದ್ದಾರೆ.

ಅದಾದ ಬಳಿಕ ಪ್ರತಿಕ್ರಿಯೆ ನೀಡಿದ ಅಜಯ್​ ಮಿಶ್ರಾ, ಅಂದು ಲಖಿಂಪುರ ಖೇರಿಯಲ್ಲಿ ಪೊಲೀಸರು, ಸ್ಥಳೀಯ ಆಡಳಿತ ಅಧಿಕಾರಿಗಳೆಲ್ಲ ಇದ್ದರು. ಹಾಗಿದ್ದಾಗ್ಯೂ ಈ ಘಟನೆ ನಡೆದಿದೆ ಎಂದರೆ ಅದಕ್ಕೆ ತೀವ್ರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ.  ಅಷ್ಟೇ ಅಲ್ಲ, ರೈತರು ಪ್ರತಿಭಟನೆ ನಡೆಸುತ್ತಿದ್ದ ರಸ್ತೆಗೆ ಬ್ಯಾರಿಕೇಡ್​ ಯಾಕೆ ಹಾಕಿರಲಿಲ್ಲ ಎಂದೂ ಪ್ರಶ್ನಿಸಿದ್ದಾರೆ. ಇನ್ನು ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೂ ಉತ್ತರಪ್ರದೇಶ ರಾಜ್ಯ ಸರ್ಕಾರ ವಿಚಾರಣೆ ನಡೆಸಲಿದೆ. ಯಾರಾದರೂ ತಪ್ಪಿತಸ್ಥರಿದ್ದಾರೆ ಎಂದರೆ ಸುಮ್ಮನೆ ಬಿಡುವುದಿಲ್ಲ ಎಂಬ ಭರವಸೆಯನ್ನೂ ಬಿಜೆಪಿ ನಾಯಕರು ನೀಡಿದ್ದಾರೆ.

ಇದನ್ನೂ ಓದಿ: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ICC Mens T20 World Cup: ಟಿ20 ವಿಶ್ವಕಪ್​ನಲ್ಲಿಂದು ಎರಡು ಪಂದ್ಯ: ಐರ್ಲೆಡ್ vs ನೆದರ್ಲೆಂಡ್ಸ್​ ಮತ್ತು ಶ್ರೀಲಂಕಾ vs ನಬಿಯಾ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್