Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್ ಲೇಖನ ಖಂಡಿಸಿದ ಅನುರಾಗ್ ಠಾಕೂರ್

ವಿದೇಶಿ ಮಾಧ್ಯಮಗಳು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದ್ವೇಷವನ್ನು ಪೋಷಿಸುತ್ತಿದ್ದು, ನಮ್ಮ ಪ್ರಜಾಪ್ರಭುತ್ವ ಮತ್ತು ವೈವಿಧ್ಯಮಯ ಸಮಾಜದ" ಬಗ್ಗೆ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿವೆ ಎಂದು ಠಾಕೂರ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್ ಲೇಖನ ಖಂಡಿಸಿದ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 10, 2023 | 1:11 PM

ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಕುರಿತು(Press freedom in Kashmir) ನ್ಯೂಯಾರ್ಕ್ ಟೈಮ್ಸ್​​​ನಲ್ಲಿ (The New York Times) ಪ್ರಕಟವಾದ ಅಭಿಪ್ರಾಯ ಲೇಖನವನ್ನು ಟೀಕಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ (Anurag Thakur), ಇದು “ಚೇಷ್ಟೆಯಿಂದ ಕೂಡಿದ” ಮತ್ತು “ಕಾಲ್ಪನಿಕ” ಎಂದಿದ್ದಾರೆ.ನ್ಯೂಯಾರ್ಕ್ ಟೈಮ್ಸ್ ಭಾರತದ ಬಗ್ಗೆ ಏನನ್ನೂ ಪ್ರಕಟಿಸುವಾಗ ತಟಸ್ಥತೆ ರೀತಿಯ ನಿಲುವುಗಳನ್ನು ಹಿಂದೆಯೇ ಕೈಬಿಟ್ಟಿತ್ತು. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್​​​ನ ತಥಾಕಥಿತ ಅಭಿಪ್ರಾಯವು ಭಾರತ ಮತ್ತು ಅದರ ಪ್ರಜಾಪ್ರಭುತ್ವ ಸಂಸ್ಥೆಗಳು ಮತ್ತು ಮೌಲ್ಯಗಳ ಬಗ್ಗೆ ಅಪಪ್ರಚಾರವನ್ನು ಹರಡುವ ಏಕೈಕ ಉದ್ದೇಶದಿಂದ ಹಾನಿಯುಂಟು ಮಾಡಲು ಮತ್ತು ಕಾಲ್ಪನಿಕವಾಗಿ ಪ್ರಕಟಿಸಲಾಗಿದೆ. ಇದು NYT ಮತ್ತು ಇತರ ಕೆಲವು ಸಮಾನ ಮನಸ್ಕ ವಿದೇಶಿ ಮಾಧ್ಯಮಗಳು ಭಾರತ ಮತ್ತು ನಮ್ಮ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಪ್ರಧಾನಿ ನರೇಂದ್ರ ಮೋದಿಜಿಯವರ ಬಗ್ಗೆ ಸುಳ್ಳುಗಳನ್ನು ಹರಡುವುದರ ಮುಂದುವರಿಕೆಯಾಗಿದೆ. ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಠಾಕೂರ್ ಸರಣಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ವಿದೇಶಿ ಮಾಧ್ಯಮಗಳು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದ್ವೇಷವನ್ನು ಪೋಷಿಸುತ್ತಿದ್ದು, ನಮ್ಮ ಪ್ರಜಾಪ್ರಭುತ್ವ ಮತ್ತು ವೈವಿಧ್ಯಮಯ ಸಮಾಜದ” ಬಗ್ಗೆ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿವೆ ಎಂದು ಠಾಕೂರ್ ಹೇಳಿದ್ದಾರೆ.

“ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ನಾವು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ-ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ವ್ಯಾಕರಣವನ್ನು ಕಲಿಯುವ ಅಗತ್ಯವಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ NYT ಹರಡಿದ ಹಸಿ ಸುಳ್ಳುಗಳು ಖಂಡನೀಯ. ಅಂತಹ ಮನಸ್ಥಿತಿಯನ್ನು ಭಾರತೀಯರು ಅನುಮತಿಸುವುದಿಲ್ಲ. ಅಂತಹ ಮನಸ್ಥಿತಿಗಳನ್ನು ಭಾರತದ ನೆಲದಲ್ಲಿ ತಮ್ಮ ನಿರ್ಣಾಯಕ ಅಜೆಂಡಾ ನಡೆಸಲು ಭಾರತೀಯರು ಬಿಡುವುದಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ:Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?

ಅಭಿಪ್ರಾಯ ಲೇಖನದಲ್ಲಿ, ದಿ ಕಾಶ್ಮೀರ್ ಟೈಮ್ಸ್‌ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು, ಭಾರತದಾದ್ಯಂತ ಸೆನ್ಸಾರ್‌ಶಿಪ್‌ಗೆ ಭಯಪಡುತ್ತಾರೆ. ಯಾಕೆಂದರೆ ಭಾರತದ ಉಳಿದ ಭಾಗಗಳು ಕಾಶ್ಮೀರದಂತೆ ಆಗಿಬಿಡಬಹುದು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು