Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿದ ಭಾರೀ ಅನಾಹುತ; ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ

ಆ ಬೆಂಗಾವಲು ವಾಹನದ ಹಿಂದೆ ಅಶ್ವಿನಿ ಚೌಬೆ ಅವರ ವಾಹನ ಬರುತ್ತಿತ್ತು. ಸ್ವಲ್ಪದರಲ್ಲೇ ಭಾರೀ ಅವಘಡವೊಂದು ತಪ್ಪಿದಂತಾಗಿದೆ. 

ತಪ್ಪಿದ ಭಾರೀ ಅನಾಹುತ; ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ
ಆಸ್ಪತ್ರೆಗೆ ದಾಖಲಾದ ಪೊಲೀಸರ ಆರೋಗ್ಯ ವಿಚಾರಿಸುತ್ತಿರುವ ಅಶ್ವಿನಿ ಚೌಬೆImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 16, 2023 | 9:46 AM

ಪಾಟ್ನಾ: ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ (Ashwini Choubey) ಅವರ ಬೆಂಗಾವಲು ವಾಹನವು ಭಾನುವಾರ ಅಪಘಾತಕ್ಕೀಡಾಗಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ (Accident) ಸಂಭವಿಸಿದೆ. ಈ ಅಪಘಾತದಲ್ಲಿ ಪಲ್ಟಿಯಾದ ಬೆಂಗಾವಲು ವಾಹನವನ್ನು ಪರಿಶೀಲಿಸುತ್ತಿರುವ ವಿಡಿಯೋವನ್ನು ಸಚಿವ ಅಶ್ವಿನಿ ಚೌಬೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಬೆಂಗಾವಲು ವಾಹನದ ಹಿಂದೆ ಅಶ್ವಿನಿ ಚೌಬೆ ಅವರ ವಾಹನ ಬರುತ್ತಿತ್ತು. ಸ್ವಲ್ಪದರಲ್ಲೇ ಭಾರೀ ಅವಘಡವೊಂದು ತಪ್ಪಿದಂತಾಗಿದೆ.

ಈ ಕುರಿತು ಟ್ವಿಟರ್‌ನಲ್ಲಿ ಹೇಳಿಕೆ ನೀಡಿರುವ ಸಚಿವ ಅಶ್ವಿನಿ ಚೌಬೆ, ಬಕ್ಸರ್‌ನಿಂದ ಪಾಟ್ನಾಗೆ ತೆರಳುತ್ತಿದ್ದ ನಮ್ಮ ಬೆಂಗಾವಲು ವಾಹನ ಮಥಿಲ-ನಾರಾಯಣಪುರ ರಸ್ತೆಯ ಸೇತುವೆಯ ಕಾಲುವೆಯಲ್ಲಿ ಅಪಘಾತಕ್ಕೀಡಾಗಿದೆ. ದೇವರ ದಯೆಯಿಂದ ಎಲ್ಲರೂ ಕ್ಷೇಮವಾಗಿದ್ದಾರೆ. ಗಾಯಗೊಂಡ ಪೊಲೀಸರು ಮತ್ತು ಚಾಲಕನೊಂದಿಗೆ ದುಮ್ರಾವ್ ಸದರ್ ಆಸ್ಪತ್ರೆಗೆ ತೆರಳಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: Pokhara Air Crash ಪೋಖರಾದಲ್ಲಿ ನಡೆದದ್ದು ನೇಪಾಳದಲ್ಲಿ 30 ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ವಿಮಾನ ಅಪಘಾತ

ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಹೆಚ್ಚಿನ ಗಾಯಗಳಾಗಿದ್ದ ಇಬ್ಬರು ಪೊಲೀಸರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳಿಗೆ ಸ್ಥಳಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ