AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿದ ಭಾರೀ ಅನಾಹುತ; ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ

ಆ ಬೆಂಗಾವಲು ವಾಹನದ ಹಿಂದೆ ಅಶ್ವಿನಿ ಚೌಬೆ ಅವರ ವಾಹನ ಬರುತ್ತಿತ್ತು. ಸ್ವಲ್ಪದರಲ್ಲೇ ಭಾರೀ ಅವಘಡವೊಂದು ತಪ್ಪಿದಂತಾಗಿದೆ. 

ತಪ್ಪಿದ ಭಾರೀ ಅನಾಹುತ; ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ
ಆಸ್ಪತ್ರೆಗೆ ದಾಖಲಾದ ಪೊಲೀಸರ ಆರೋಗ್ಯ ವಿಚಾರಿಸುತ್ತಿರುವ ಅಶ್ವಿನಿ ಚೌಬೆImage Credit source: Twitter
TV9 Web
| Edited By: |

Updated on: Jan 16, 2023 | 9:46 AM

Share

ಪಾಟ್ನಾ: ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ (Ashwini Choubey) ಅವರ ಬೆಂಗಾವಲು ವಾಹನವು ಭಾನುವಾರ ಅಪಘಾತಕ್ಕೀಡಾಗಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ (Accident) ಸಂಭವಿಸಿದೆ. ಈ ಅಪಘಾತದಲ್ಲಿ ಪಲ್ಟಿಯಾದ ಬೆಂಗಾವಲು ವಾಹನವನ್ನು ಪರಿಶೀಲಿಸುತ್ತಿರುವ ವಿಡಿಯೋವನ್ನು ಸಚಿವ ಅಶ್ವಿನಿ ಚೌಬೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಬೆಂಗಾವಲು ವಾಹನದ ಹಿಂದೆ ಅಶ್ವಿನಿ ಚೌಬೆ ಅವರ ವಾಹನ ಬರುತ್ತಿತ್ತು. ಸ್ವಲ್ಪದರಲ್ಲೇ ಭಾರೀ ಅವಘಡವೊಂದು ತಪ್ಪಿದಂತಾಗಿದೆ.

ಈ ಕುರಿತು ಟ್ವಿಟರ್‌ನಲ್ಲಿ ಹೇಳಿಕೆ ನೀಡಿರುವ ಸಚಿವ ಅಶ್ವಿನಿ ಚೌಬೆ, ಬಕ್ಸರ್‌ನಿಂದ ಪಾಟ್ನಾಗೆ ತೆರಳುತ್ತಿದ್ದ ನಮ್ಮ ಬೆಂಗಾವಲು ವಾಹನ ಮಥಿಲ-ನಾರಾಯಣಪುರ ರಸ್ತೆಯ ಸೇತುವೆಯ ಕಾಲುವೆಯಲ್ಲಿ ಅಪಘಾತಕ್ಕೀಡಾಗಿದೆ. ದೇವರ ದಯೆಯಿಂದ ಎಲ್ಲರೂ ಕ್ಷೇಮವಾಗಿದ್ದಾರೆ. ಗಾಯಗೊಂಡ ಪೊಲೀಸರು ಮತ್ತು ಚಾಲಕನೊಂದಿಗೆ ದುಮ್ರಾವ್ ಸದರ್ ಆಸ್ಪತ್ರೆಗೆ ತೆರಳಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: Pokhara Air Crash ಪೋಖರಾದಲ್ಲಿ ನಡೆದದ್ದು ನೇಪಾಳದಲ್ಲಿ 30 ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ವಿಮಾನ ಅಪಘಾತ

ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಹೆಚ್ಚಿನ ಗಾಯಗಳಾಗಿದ್ದ ಇಬ್ಬರು ಪೊಲೀಸರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳಿಗೆ ಸ್ಥಳಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು