AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Minister’s Brother Death: ಬಿಹಾರ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರ ಸಹೋದರ ಮೃತ; ವೈದ್ಯರ ನಿರ್ಲಕ್ಷ್ಯ ಆರೋಪ; ಇಬ್ಬರ ಅಮಾನತು

Nirmal Choubey Death: ನಿರ್ಮಲ್ ಚೌಬೆ ದಾಖಲಾಗಿದ್ದ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರೇ ಇರಲಿಲ್ಲ. ಇದು ಅವರು ಸಾಯಲು ಕಾರಣ ಎಂಬುದು ಅವರ ಸಂಬಂಧಿಗಳ ಆರೋಪ. ಆಸ್ಪತ್ರೆಯ ಅಧಿಕಾರಿಗಳು ಹೇಳುವ ಪ್ರಕಾರ ನಿರ್ಮಲ್ ಚೌಬೆ ಅವರು ಹೃದಯಾಘಾತಕ್ಕೊಳಗಾಗಿ ಬಳಿಕ ಮೃತಪಟ್ಟಿದ್ದಾರೆ.

Union Minister's Brother Death: ಬಿಹಾರ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರ ಸಹೋದರ ಮೃತ; ವೈದ್ಯರ ನಿರ್ಲಕ್ಷ್ಯ ಆರೋಪ; ಇಬ್ಬರ ಅಮಾನತು
ಕೇಂದ್ರ ಸಚಿವ ಅಶ್ವಿನಿ ಚೌಬೆImage Credit source: HT
TV9 Web
| Edited By: |

Updated on:Jan 28, 2023 | 12:33 PM

Share

ಭಾಗಲ್ಪುರ್: ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಅಶ್ವಿನಿ ಚೌಬೆ (Ashwini Choubey) ಅವರ ಸಹೋದರ ನಿರ್ಮಲ್ ಚೌಬೆ (Nirnal Choubey) ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿಹಾರದ ಭಾಗಲ್ಪುರ್​ನ ಮಾಯಾಗಂಜ್ ಆಸ್ಪತ್ರೆಯಲ್ಲಿ ನಿರ್ಮಲ್ ಶುಕ್ರವಾರ ನಿಧನರಾಗಿದ್ದಾರೆ. ಇದು ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತ ಎಂದು ಮೃತ ನಿರ್ಮಲ್ ಚೌಬೆಯ ಸಂಬಂಧಿಗಳು ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಮಾಯಾಗಂಜ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

ಆದರೆ, ನಿರ್ಮಲ್ ಚೌಬೆ ದಾಖಲಾಗಿದ್ದ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರೇ ಇರಲಿಲ್ಲ. ಇದು ಅವರು ಸಾಯಲು ಕಾರಣ ಎಂಬುದು ಅವರ ಸಂಬಂಧಿಗಳ ಆರೋಪ. “ಅವರಿಗೆ (ನಿರ್ಮಲ್ ಚೌಬೆ) ದೈಹಿಕ ಆಯಾಸವಾದ್ದರಿಂದ ಆಸ್ಪತ್ರೆಗೆ ಕರೆತಂದೆವು. ಅಲ್ಲಿ ವೈದ್ಯರೇ ಇರಲಿಲ್ಲ. ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಇಲ್ಲಎಂದು ಚಂದನ್ ಎಂಬುವವರು ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಹೇಳುವ ಪ್ರಕಾರ ನಿರ್ಮಲ್ ಚೌಬೆ ಅವರು ಹೃದಯಾಘಾತಕ್ಕೊಳಗಾಗಿ ಬಳಿಕ ಮೃತಪಟ್ಟಿದ್ದಾರೆ. “ರೋಗಿಯನ್ನು ಗಂಭೀರ ಸ್ಥಿತಿಯಲ್ಲಿದ್ದಾಗ ಕರೆತರಲಾಗಿದೆ. ಅವರಿಗೆ ಭಾರೀ ಹೃದಯಾಘಾತವಾಗಿದ್ದುದು ಕಂಡುಬಂತು. ಹಿರಿಯ ವೈದ್ಯರು ಅಗತ್ಯ ಔಷಧೋಪಚಾರ ಮಾಡಿದರು. ಬಳಿಕ ಅವರನ್ನು ಐಸಿಯುಗೆ ವರ್ಗಾಯಿಸಲಾಯಿತು. ಅಲ್ಲಿ ಯಾವ ವೈದ್ಯರೂ ಇರಲಿಲ್ಲ. ನಾನು ಈಗ ಇಬ್ಬರು ವೈದ್ಯರನ್ನು ಅಮಾನತುಗೊಳಿಸಿದ್ದೇನೆಎಂದು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಅಸೀಮ್ ದಾಸ್ ಹೇಳಿದ್ದಾರೆಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇತ್ತ ಭಾಗಲ್ಪುರ್ ಸಿಟಿ ಡಿಎಸ್​ಪಿ ಅಜಯ್ ಕುಮಾರ್ ಚೌಧರ್ ಪ್ರತಿಕ್ರಿಯಿಸಿ, ಯಾರಾದರೂ ದೂರು ಕೊಟ್ಟರೆ ನಾವು ತನಿಖೆ ನಡೆಸುತ್ತೇವೆ. ಸಾವಿಗೆ ಕಾರಣವಾಗುವಂತೆ ಯಾರಾದರೂ ನಿರ್ಲಕ್ಷ್ಯ ತೋರಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆಯೇ, ವೈದ್ಯರಿಗೆ ಬೆದರಿಕೆಯಾಗುವಂತೆ ಗಲಾಟೆ ನಡೆಸುವವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 12:33 pm, Sat, 28 January 23

Follow Us
Web contact
Web contact

TV9 Kannada

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ