AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘುರಾಮ್ ರಾಜನ್​​ ಅವರದ್ದು ಅತಿರೇಕದ ಮಾತು; ಟೆಲಿಕಾಂ ಕ್ಷೇತ್ರ ಕುರಿತ ಹೇಳಿಕೆಗೆ ಅಶ್ವಿನಿ ವೈಷ್ಣವ್ ತಿರುಗೇಟು

ಕಾಂಗ್ರೆಸ್ ಸರಕಾರ ಇದ್ದಿದ್ದರೆ ಟೆಲಿಕಾಂ ಕ್ಷೇತ್ರದಲ್ಲಿ ಹಗರಣಗಳು ತಪ್ಪುತ್ತಿರಲಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ಟೆಲಿಕಾಂ ಕ್ಷೇತ್ರ ಶಕ್ತಿಶಾಲಿಯಾಗಿದೆ. ಅಗ್ಗದ ದರದಲ್ಲಿ ಡೇಟಾ ನೀಡುವ ಏಕೈಕ ದೇಶ ಭಾರತ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

Follow us
Ganapathi Sharma
|

Updated on: Jun 02, 2023 | 8:03 PM

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿಲ್ಲ ಎಂಬ ಆರ್​ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಟೀಕೆಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತೀಕ್ಷ್ಣ ತಿರುಗೇಟು ನೀಡಿದ್ದಾರೆ. ರಘುರಾಂ ರಾಜನ್ (Raghuram Rajan) ಅವರು 2014ರ ಮೊದಲು ಏನಾಗಿದ್ದರು, ಆ ನಂತರ ಏನಾದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಟೆಲಿಕಾಂ ಕ್ಷೇತ್ರ ಮತ್ತು ಮೊಬೈಲ್ ತಯಾರಿಕಾ ವಲಯದ ಬಗ್ಗೆ ರಘುರಾಮ್ ಮಾಡಿರುವ ಟೀಕೆ ಸಂಪೂರ್ಣ ಸುಳ್ಳಾಗಿದೆ. ಚಿಕಾಗೋ ವಿಶ್ವವಿದ್ಯಾಲಯದಂತಹ ದೊಡ್ಡ ವಿಶ್ವವಿದ್ಯಾಲಯದಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವುದು ಅತಿರೇಕದ ಸಂಗತಿ ಎಂದು ಅಶ್ವಿನಿ ವೈಷ್ಣವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರಕಾರ ಇದ್ದಿದ್ದರೆ ಟೆಲಿಕಾಂ ಕ್ಷೇತ್ರದಲ್ಲಿ ಹಗರಣಗಳು ತಪ್ಪುತ್ತಿರಲಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ಟೆಲಿಕಾಂ ಕ್ಷೇತ್ರ ಶಕ್ತಿಶಾಲಿಯಾಗಿದೆ. ಅಗ್ಗದ ದರದಲ್ಲಿ ಡೇಟಾ ನೀಡುವ ಏಕೈಕ ದೇಶ ಭಾರತ ಎಂದು ಅವರು ಹೇಳಿದ್ದಾರೆ.

ಯುಪಿಎ ಸರ್ಕಾರ ಬಿಎಸ್‌ಎನ್‌ಎಲ್​​ ಅನ್ನು ಮರಣಶಯ್ಯೆಯಲ್ಲಿ ಇರಿಸಿತ್ತು. ಮೋದಿ ಪ್ರಧಾನಿಯಾದ ನಂತರವೇ ಬಿಎಸ್‌ಎನ್‌ಎಲ್ ಲಾಭ ಗಳಿಸಲು ಪ್ರಾರಂಭಿಸಿತು. 4ಜಿಯಿಂದ 5ಜಿಗೆ ಟೆಲಿಕಾಂ ವಲಯದ ಪರಿವರ್ತನೆಯು ಭಾರತದ ತಾಂತ್ರಿಕ ಆವಿಷ್ಕಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಮೂಲಕ 25 ಲಕ್ಷ ಜನರಿಗೆ ಉದ್ಯೋಗ ದೊರೆತಿದೆ. ರಘುರಾಮ್ ರಾಜನ್ ಅವರಿಗೆ ಈ ಕ್ಷೇತ್ರದ ಬೆಳವಣಿಗೆ ಕಾಣುತ್ತಿಲ್ಲವೇ ಎಂದು ಅಶ್ವಿನಿ ವೈಷ್ಣವ್ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಹೋರಾಟ ಬಿಜೆಪಿ ವಿರುದ್ಧವೇ ಅಥವಾ ಭಾರತದ ವಿರುದ್ಧವೇ? ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ

2004-14ರ ನಡುವಿನ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತ ಭಾರತ ದೇಶವು ತನ್ನನ್ನು ತಾನು ಕಳೆದುಕೊಂಡ ದಶಕ ಎಂದು ಅಶ್ವಿನ್ ವೈಷ್ಣವ್ ಟೀಕಿಸಿದ್ದಾರೆ. ಈಗ ವಿರೋಧ ಪಕ್ಷಗಳು ದೇಶಕ್ಕೆ ಹಾನಿ ಮಾಡುವ ಶಾರ್ಟ್‌ಕಟ್‌ ರಾಜಕಾರಣ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆಯಲ್ಲಿ ರೈಲ್ವೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದ ಸಚಿವರು, ದೇಶದಲ್ಲಿ ಪ್ರತಿದಿನ ನಿರ್ಮಾಣವಾಗುವ ಹೊಸ ರೈಲು ಹಳಿಗಳ ಸರಾಸರಿ ಉದ್ದ 4 ಕಿ.ಮೀ ನಿಂದ 14 ಕಿ.ಮೀ.ಗೆ ಏರಿಕೆಯಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ನೀಟ್​​ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ಸ್ಥಾನ ಪಡೆದ ಕೃಶಾಂಗ್ ಹೇಳಿದ್ದಿಷ್ಟು
ನೀಟ್​​ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ಸ್ಥಾನ ಪಡೆದ ಕೃಶಾಂಗ್ ಹೇಳಿದ್ದಿಷ್ಟು
VIDEO: ಶೂಟ್ ಮಾಡ್ಬೇಕಾ... ಬವುಮಾ ಬೊಂಬಾಟ್ ಸೆಲೆಬ್ರೇಷನ್
VIDEO: ಶೂಟ್ ಮಾಡ್ಬೇಕಾ... ಬವುಮಾ ಬೊಂಬಾಟ್ ಸೆಲೆಬ್ರೇಷನ್