AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘುರಾಮ್ ರಾಜನ್​​ ಅವರದ್ದು ಅತಿರೇಕದ ಮಾತು; ಟೆಲಿಕಾಂ ಕ್ಷೇತ್ರ ಕುರಿತ ಹೇಳಿಕೆಗೆ ಅಶ್ವಿನಿ ವೈಷ್ಣವ್ ತಿರುಗೇಟು

ಕಾಂಗ್ರೆಸ್ ಸರಕಾರ ಇದ್ದಿದ್ದರೆ ಟೆಲಿಕಾಂ ಕ್ಷೇತ್ರದಲ್ಲಿ ಹಗರಣಗಳು ತಪ್ಪುತ್ತಿರಲಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ಟೆಲಿಕಾಂ ಕ್ಷೇತ್ರ ಶಕ್ತಿಶಾಲಿಯಾಗಿದೆ. ಅಗ್ಗದ ದರದಲ್ಲಿ ಡೇಟಾ ನೀಡುವ ಏಕೈಕ ದೇಶ ಭಾರತ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಗಣಪತಿ ಶರ್ಮಾ
|

Updated on: Jun 02, 2023 | 8:03 PM

Share

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿಲ್ಲ ಎಂಬ ಆರ್​ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಟೀಕೆಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತೀಕ್ಷ್ಣ ತಿರುಗೇಟು ನೀಡಿದ್ದಾರೆ. ರಘುರಾಂ ರಾಜನ್ (Raghuram Rajan) ಅವರು 2014ರ ಮೊದಲು ಏನಾಗಿದ್ದರು, ಆ ನಂತರ ಏನಾದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಟೆಲಿಕಾಂ ಕ್ಷೇತ್ರ ಮತ್ತು ಮೊಬೈಲ್ ತಯಾರಿಕಾ ವಲಯದ ಬಗ್ಗೆ ರಘುರಾಮ್ ಮಾಡಿರುವ ಟೀಕೆ ಸಂಪೂರ್ಣ ಸುಳ್ಳಾಗಿದೆ. ಚಿಕಾಗೋ ವಿಶ್ವವಿದ್ಯಾಲಯದಂತಹ ದೊಡ್ಡ ವಿಶ್ವವಿದ್ಯಾಲಯದಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವುದು ಅತಿರೇಕದ ಸಂಗತಿ ಎಂದು ಅಶ್ವಿನಿ ವೈಷ್ಣವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರಕಾರ ಇದ್ದಿದ್ದರೆ ಟೆಲಿಕಾಂ ಕ್ಷೇತ್ರದಲ್ಲಿ ಹಗರಣಗಳು ತಪ್ಪುತ್ತಿರಲಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ಟೆಲಿಕಾಂ ಕ್ಷೇತ್ರ ಶಕ್ತಿಶಾಲಿಯಾಗಿದೆ. ಅಗ್ಗದ ದರದಲ್ಲಿ ಡೇಟಾ ನೀಡುವ ಏಕೈಕ ದೇಶ ಭಾರತ ಎಂದು ಅವರು ಹೇಳಿದ್ದಾರೆ.

ಯುಪಿಎ ಸರ್ಕಾರ ಬಿಎಸ್‌ಎನ್‌ಎಲ್​​ ಅನ್ನು ಮರಣಶಯ್ಯೆಯಲ್ಲಿ ಇರಿಸಿತ್ತು. ಮೋದಿ ಪ್ರಧಾನಿಯಾದ ನಂತರವೇ ಬಿಎಸ್‌ಎನ್‌ಎಲ್ ಲಾಭ ಗಳಿಸಲು ಪ್ರಾರಂಭಿಸಿತು. 4ಜಿಯಿಂದ 5ಜಿಗೆ ಟೆಲಿಕಾಂ ವಲಯದ ಪರಿವರ್ತನೆಯು ಭಾರತದ ತಾಂತ್ರಿಕ ಆವಿಷ್ಕಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಮೂಲಕ 25 ಲಕ್ಷ ಜನರಿಗೆ ಉದ್ಯೋಗ ದೊರೆತಿದೆ. ರಘುರಾಮ್ ರಾಜನ್ ಅವರಿಗೆ ಈ ಕ್ಷೇತ್ರದ ಬೆಳವಣಿಗೆ ಕಾಣುತ್ತಿಲ್ಲವೇ ಎಂದು ಅಶ್ವಿನಿ ವೈಷ್ಣವ್ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಹೋರಾಟ ಬಿಜೆಪಿ ವಿರುದ್ಧವೇ ಅಥವಾ ಭಾರತದ ವಿರುದ್ಧವೇ? ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ

2004-14ರ ನಡುವಿನ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತ ಭಾರತ ದೇಶವು ತನ್ನನ್ನು ತಾನು ಕಳೆದುಕೊಂಡ ದಶಕ ಎಂದು ಅಶ್ವಿನ್ ವೈಷ್ಣವ್ ಟೀಕಿಸಿದ್ದಾರೆ. ಈಗ ವಿರೋಧ ಪಕ್ಷಗಳು ದೇಶಕ್ಕೆ ಹಾನಿ ಮಾಡುವ ಶಾರ್ಟ್‌ಕಟ್‌ ರಾಜಕಾರಣ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆಯಲ್ಲಿ ರೈಲ್ವೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದ ಸಚಿವರು, ದೇಶದಲ್ಲಿ ಪ್ರತಿದಿನ ನಿರ್ಮಾಣವಾಗುವ ಹೊಸ ರೈಲು ಹಳಿಗಳ ಸರಾಸರಿ ಉದ್ದ 4 ಕಿ.ಮೀ ನಿಂದ 14 ಕಿ.ಮೀ.ಗೆ ಏರಿಕೆಯಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ