AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯ ಫೋಟೊ ಹಂಚಿಕೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಕಮಾನು ನಿರ್ಮಾಣವು ಕಳೆದ ವರ್ಷ ಏಪ್ರಿಲ್‌ನಲ್ಲಿ ಪೂರ್ಣಗೊಂಡಿತು. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಲಿಂಕ್ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ.

ಜಮ್ಮು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯ ಫೋಟೊ ಹಂಚಿಕೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಚೆನಾಬ್ ಸೇತುವೆ
TV9 Web
| Edited By: |

Updated on:Feb 09, 2022 | 1:15 PM

Share

ದೆಹಲಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಕೂ ಆ್ಯಪ್​​ನಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆೇ ಸೇತುವೆ ಚೆನಾಬ್ ಸೇತುವೆಯ (Chenab bridge)ಮೋಡಿಮಾಡುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. “ಮೋಡಗಳ ಮೇಲಿನ ವಿಶ್ವದ ಅತಿ ಎತ್ತರದ ಕಮಾನು ಚೆನಾಬ್ ಸೇತುವೆ” ಎಂದು ವೈಷ್ಣವ್ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ. ಚಿತ್ರದಲ್ಲಿ, ಪರ್ವತಗಳ ಹಿನ್ನಲೆಯಲ್ಲಿ ಎತ್ತರವಾಗಿ ನಿಂತಿರುವಂತೆ ಸೇತುವೆಯು ಮೋಡಗಳ ಮೇಲೆ ಕಮಾನುಗಳಾಗಿ ಕಾಣುತ್ತದೆ. ಚೆನಾಬ್ ರೈಲು ಸೇತುವೆಯು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಇದು 1,315 ಮೀಟರ್ ಉದ್ದ ಮತ್ತು ನದಿಯಿಂದ 359 ಮೀಟರ್ ಎತ್ತರದಲ್ಲಿದೆ. ಇದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕೂಡ ಚೆನಾಬ್ ರೈಲು ಸೇತುವೆಯ ಚಿತ್ರಗಳನ್ನು ಕೂ ಆ್ಯಪ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ 1315 ಮೀ ಉದ್ದದ ಚೆನಾಬ್ ಸೇತುವೆಯ ಕಮಾನು ಎಷ್ಟು ಅದ್ಭುತವಾಗಿದೆ. ಸೇತುವೆಯು ನದಿಯ ತಳ ಮಟ್ಟದಿಂದ 359 ಮೀ ಎತ್ತರದಲ್ಲಿ ನಿಲ್ಲುತ್ತದೆ ಮತ್ತು ಇದು ಐಫೆಲ್ ಟವರ್‌ಗಿಂತ ಎತ್ತರವಾಗಿರುತ್ತದೆ. ಸೇತುವೆಯು ಕಾಶ್ಮೀರ ಕಣಿವೆಗೆ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಚೆನಾಬ್ ಸೇತುವೆಯ ಅತ್ಯಾಕರ್ಷಕ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟಿಜನ್‌ಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬಪು “ವಾವ್… ವಾಸ್ತುಶಿಲ್ಪದ ಅದ್ಭುತ ಸಾಧನೆ” ಎಂದು ಹೇಳಿದರು.

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಕಮಾನು ನಿರ್ಮಾಣವು ಕಳೆದ ವರ್ಷ ಏಪ್ರಿಲ್‌ನಲ್ಲಿ ಪೂರ್ಣಗೊಂಡಿತು. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಲಿಂಕ್ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಸೇತುವೆಯು ಡಿಸೆಂಬರ್ 2022 ರಲ್ಲಿ ರೈಲು ಸಂಚಾರಕ್ಕೆ ತೆರೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಮ್ಮನ್ನು ಟೀಕಿಸಿ ಪರವಾಗಿಲ್ಲ, ನಿಮ್ಮ ಕೆಲಸ ಏನೆಂದು ಮರೆಯಬೇಡಿ; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

Published On - 1:14 pm, Wed, 9 February 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ