AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಸಹಾಯ ಮಾಡಿದ ಕೇಂದ್ರ ಸಚಿವ ಭಾಗವತ್​ ಕರಾಡ್​; ಪ್ರಧಾನಿ ಮೋದಿಯವರಿಂದ ಶ್ಲಾಘನೆ

ಭಾಗವತ್​ ಅವರು ತಮ್ಮ ಸಹ ಪ್ರಯಾಣಿಕನಿಗೆ ಮಾಡಿದ ಸಹಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಇಂಡಿಗೋ ಮಾಡಿರುವ ಟ್ವೀಟ್​​ನ್ನು ರೀಟ್ವೀಟ್ ಮಾಡಿಕೊಂಡಿದ್ದಾರೆ.

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಸಹಾಯ ಮಾಡಿದ ಕೇಂದ್ರ ಸಚಿವ ಭಾಗವತ್​ ಕರಾಡ್​; ಪ್ರಧಾನಿ ಮೋದಿಯವರಿಂದ ಶ್ಲಾಘನೆ
ಇಂಡಿಗೋ ಶೇರ್​ ಮಾಡಿರುವ ಫೋಟೋ
TV9 Web
| Edited By: |

Updated on: Nov 17, 2021 | 9:38 AM

Share

ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕರೊಬ್ಬರಿಗೆ ಸಹಾಯ ಮಾಡಿದ ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕೃಷ್ಣರಾವ್​​ ಕರಾಡ್ (Union minister Bhagwat Karad)​​ ​ರನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದ್ದಾರೆ. ಟ್ವೀಟ್​ ಮಾಡಿ ಭಾಗವತ್​ರನ್ನು ಹೊಗಳಿದ್ದಾರೆ. ಭಾಗವತ್​ ಅವರು ಮಕ್ಕಳ ತಜ್ಞರೂ ಹೌದು. ಅವರು ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ಆ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ರಕ್ತದೊತ್ತಡ ಸಮಸ್ಯೆಯಿಂದಾಗಿ ಅಕಸ್ಮಾತ್​ ಆಗಿ ತಲೆಸುತ್ತು ಬಂದು, ಅವರು ಅಸ್ವಸ್ಥರಾಗಿ ಬಿದ್ದರು. ಅದು ಗೊತ್ತಾಗುತ್ತಿದ್ದಂತೆ ಕೇಂದ್ರ ಸಚಿವರು ಅವರಿದ್ದಲ್ಲಿಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಎಂದು ಕೇಂದ್ರ ಹಣಕಾಸು ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.  

ವಿಮಾನ ಲ್ಯಾಂಡ್ ಆದ ಬಳಿಕ ಈ ಬಗ್ಗೆ ಕರಾಡ್​ ಮಾಹಿತಿ ನೀಡಿದ್ದಾಗಿ ಎಎನ್​ಐ ಹೇಳಿದೆ. ಆ ಪ್ರಯಾಣಿಕನಿಗೆ ಕಡಿಮೆ ರಕ್ತದೊತ್ತಡ ಉಂಟಾಗಿತ್ತು. ಹೀಗಾಗಿ ವಿಪರೀತ ಬೆವರಲು ಪ್ರಾರಂಭಿಸಿದರು. ನಾನು ಹೋಗಿ ಅವರ ಬಟ್ಟೆಯನ್ನು ತೆಗೆದು, ಕಾಲುಗಳನ್ನು ಮೇಲೆ ಸರಿಯಾಗಿ ಚಾಚುವಂತೆ ಮಾಡಿದೆ. ಮತ್ತೆ ಎದೆಯನ್ನು ಉಜ್ಜಿ, ಗ್ಲುಕೋಸ್​ ನೀಡಿದೆ. 30 ನಿಮಿಷಗಳ ನಂತರ ಅವರ ಆರೋಗ್ಯ ಸ್ಥಿರವಾಯಿತು ಎಂದು ಕೇಂದ್ರ ಸಚಿವರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಇನ್ನು ಇಂಡಿಗೋ ಸಂಸ್ಥೆ ಕೂಡ ಟ್ವೀಟ್​ ಮಾಡಿದೆ,  ಸಚಿವರಾದರೂ ತಮ್ಮ ವೈದ್ಯವೃತ್ತಿಯನ್ನು ಮರೆಯದೆ, ಸಮಯಕ್ಕೆ ಸರಿಯಾಗಿ ಪ್ರಯಾಣಿಕನಿಗೆ ಚಿಕಿತ್ಸೆ ನೀಡಿರುವ ಭಾಗವತ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಭಾಗವತ್​ ಅವರು ತಮ್ಮ ಸಹ ಪ್ರಯಾಣಿಕನಿಗೆ ಮಾಡಿದ ಸಹಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಇಂಡಿಗೋ ಮಾಡಿರುವ ಟ್ವೀಟ್​​ನ್ನು ರೀಟ್ವೀಟ್ ಮಾಡಿಕೊಂಡಿರುವ ಪ್ರಧಾನಮಂತ್ರಿ ಮೋದಿ, ನನ್ನ ಸಹೋದ್ಯೋಗಿಯ ಈ ನಡೆ ತುಂಬ ಖುಷಿಕೊಟ್ಟಿದೆ. ಅವರು ಹೃದಯದಿಂದ ವೈದ್ಯರು ! ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಯ ಮಾತುಗಳಿಗೆ ಸಚಿವ ಕರಾಡ್​ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಮೆಚ್ಚುಗೆಯಿಂದ ನನ್ನ ಹೃದಯ ತುಂಬಿ ಬಂತು. ಈ ದೇಶ ಮತ್ತು ಇಲ್ಲಿನ ನಾಗರಿಕರಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ನಿಮ್ಮ ಬದ್ಧತೆಯನ್ನು, ನಾನು ನನ್ನ ಕರ್ತವ್ಯಗಳಲ್ಲಿ ಅಳವಡಿಕೊಳ್ಳುತ್ತೇನೆ. ನಿಮ್ಮ ಮಾರ್ಗದರ್ಶನದಂತೆ ಸೇವಾ ಮತ್ತು ಸಮರ್ಪಣ್​ ಮೂಲಕ ಜನಸೇವೆ ಮಾಡಲು ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಹಾಗೇ,   ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Real Estate: ಚದರಡಿಗೆ 77,777 ರೂ.ನಂತೆ ದೆಹಲಿಯಲ್ಲಿ 18 ಸಾವಿರ ಚದರಡಿ ಆಸ್ತಿ ಖರೀದಿಸಿದ ಕೆಇಐ ಇಂಡಸ್ಟ್ರೀಸ್ ಪ್ರಮೋಟರ್

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!