AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC ಅಧಿಕಾರಿಗಳು ದರೋಡೆಕೋರರು, ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ಹೇಳಿಕೆ

ಕೇಂದ್ರ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡಿರುವ ಹಲವು ಅಧಿಕಾರಿಗಳನ್ನು ದರೋಡೆಕೋರರು ಎಂದು ಕೇಂದ್ರ ಸಚಿವ ಬಿಶೇಶ್ವರ್ ತುಡು ಎಂದು ಹೇಳಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

UPSC ಅಧಿಕಾರಿಗಳು ದರೋಡೆಕೋರರು, ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ಹೇಳಿಕೆ
ಬಿಶೇಶ್ವರ್ ತುಡು
ಅಕ್ಷಯ್​ ಪಲ್ಲಮಜಲು​​
|

Updated on:Apr 10, 2023 | 10:54 AM

Share

ಬಾಲಸೋರ್: ಕೇಂದ್ರ ಲೋಕಸೇವಾ ಆಯೋಗ (UPSC) ಮೂಲಕ ನೇಮಕಗೊಂಡಿರುವ ಹಲವು ಅಧಿಕಾರಿಗಳನ್ನು ದರೋಡೆಕೋರರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ್ ತುಡು (Bisheshwar Tudu) ಹೇಳಿರುವ ಹೇಳಿಕೆ ಇದೀಗ ವಿವಾದವನ್ನು ಸೃಷ್ಟಿಸಿದೆ. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೋಳಿ ಕಳ್ಳನಿಗೆ ಶಿಕ್ಷೆಯಾಗಬಹುದಾದರೂ, ಖನಿಜ ಮಾಫಿಯಾ ನಡೆಸುವ ಅಧಿಕಾರಿಯನ್ನು ಮುಟ್ಟಲು ಸಾಧ್ಯವಿಲ್ಲ, ಏಕೆಂದರೆ ಈ ವ್ಯವಸ್ಥೆ ಅವರನ್ನು ರಕ್ಷಣೆ ಮಾಡುತ್ತದೆ ಎಂದು ಹೇಳಿದರು. ಬಾಲಸೋರ್ ಜಿಲ್ಲೆಯ ಬಲಿಪಾಲ್‌ನಲ್ಲಿರುವ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಜಲಶಕ್ತಿ ರಾಜ್ಯ ಸಚಿವರು ಬಿಶ್ವೇಶ್ವರ್ ತುಡು ಯುಪಿಎಸ್‌ಸಿ ಅಧಿಕಾರಿಗಳು ಕೂಡ ಭೂ ಮಾಫಿಯಾದತಂಹ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ. ಅವರು ಕೂಡ ದರೋಡೆಕೋರರು ಎಂದು ಹೇಳಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಪತ್ತೆಯಾಗಿದೆ, ವೀಡಿಯೊ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಯುಪಿಎಸ್‌ಸಿ ಮೂಲಕ ನೇಮಕಗೊಂಡ ಅಧಿಕಾರಿಗಳು ಅತ್ಯಂತ ಜ್ಞಾನವುಳ್ಳ ವ್ಯಕ್ತಿಗಳು ಮತ್ತು ಯಾವಾಗಲೂ ಉನ್ನತ ಹುದ್ದೆಗಳಲ್ಲಿರುತ್ತಾರೆ ಎಂಬ ಕಲ್ಪನೆ ನನಗಿತ್ತು. ಆದರೆ ಈ ಯುಪಿಎಸ್‌ಸಿ ಅರ್ಹತೆ ಪಡೆದವರಲ್ಲಿ ಹೆಚ್ಚಿನವರು ಡಕಾಯಿತರು ಎಂದು ನಾನು ಭಾವಿಸುತ್ತೇನೆ. ಆದರೆ ಎಲ್ಲ ಅಧಿಕಾರಿಗಳು ಡಕಾಯಿತರು ಎಂದು ನಾನು ಹೇಳುವುದಿಲ್ಲ. ಆದರೆ ಅವರಲ್ಲಿ ಕೇಲವರು ಕಳ್ಳರು ಇದ್ದರೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ;ಕಾಶ್ಮೀರ ಬಗ್ಗೆ ಹೇಳಿಕೆ ವಿವಾದದ ಬೆನ್ನಲ್ಲೇ ದೆಹಲಿಗೆ ಬಂದಿಳಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

UPSC ದೇಶದ ಪ್ರಧಾನ ಕೇಂದ್ರ ನೇಮಕಾತಿ ಆಯೋಗವಾಗಿದೆ, ಇದು ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳನ್ನು ನೇಮಿಸುತ್ತದೆ. ನಾನು ಒಡಿಶಾ ಸಂಸದ, ದೆಹಲಿರುವ ನನ್ನ ಮನೆಯ ಹಿಂದೆ ಯುಪಿಎಸ್​​ಸಿ ಕಚೇರಿ ಇದೆ, ಈ ಬಗ್ಗೆ ನನಗೆ ತುಂಬಾ ಗೌರವ ಇತ್ತು, ಆದರೆ ಇದೀಗ ಬದಲಾಗಿದೆ ಎಂದು ಹೇಳಿದರು.

ಇಂತಹ ವಿದ್ಯಾವಂತರು ಇದ್ದರೆ ನಮ್ಮ ಸಮಾಜ ಏಕೆ ಭ್ರಷ್ಟಾಚಾರ ಮತ್ತು ಅನ್ಯಾಯದಲ್ಲಿ ಮುಳುಗಿದೆ? ಇದಕ್ಕೆ ಕಾರಣ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿನ ನೈತಿಕತೆಯ ಕೊರತೆ. ನಮ್ಮಲ್ಲಿ ಆಧ್ಯಾತ್ಮಿಕ ಶಿಕ್ಷಣ ಮತ್ತು ಆಲೋಚನೆಗಳ ಕೊರತೆ. 2021ರಲ್ಲಿ ಮಯೂರ್‌ಭಂಜ್‌ನ ತಮ್ಮ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ ಸಚಿವರು.

Published On - 10:46 am, Mon, 10 April 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ