AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ.

ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​
ನಿತಿನ್​ ಗಡ್ಕರಿ
TV9 Web
| Edited By: |

Updated on: Jan 12, 2022 | 7:54 AM

Share

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್​ ಗಡ್ಕರಿ (Nitin Gadkari ) ಮತ್ತೊಮ್ಮೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಅವರಿಗೆ ಕೊವಿಡ್​ 19ನ (Covid 19) ಸೌಮ್ಯ ಲಕ್ಷಣಗಳಿದ್ದು, ಐಸೋಲೇಶನ್​​ಗೆ ಒಳಗಾಗಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಿತಿನ್​ ಗಡ್ಕರಿ,  ನನಗೆ ಕೊರೊನಾ ಸೋಂಕು ತಗುಲಿದೆ. ಸೌಮ್ಯವಾದ ಲಕ್ಷಣಗಳಿವೆ. ಕೊವಿಡ್​ 19ಗೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದು, ಐಸೋಲೇಶನ್​ಗೆ ಒಳಗಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್​ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ತಪಾಸಣೆ ಮಾಡಿಸಿಕೊಳ್ಳಿ. ಫಲಿತಾಂಶ ಬರುವವರೆಗೂ ಐಸೋಲೇಶ್ ಆಗಿ ಎಂದು ಹೇಳಿದ್ದಾರೆ. 

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ. ಅಂದಹಾಗೇ, ನಿತಿನ್​ ಗಡ್ಕರಿಗೆ ಸೋಂಕು ತಗುಲುತ್ತಿರುವುದು ಇದೇ ಮೊದಲಲ್ಲ. 2020ರ ಸೆಪ್ಟೆಂಬರ್​​ನಲ್ಲಿ ಒಮ್ಮೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ಇನ್ನೊಂದೆಡೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೂಡ ಮನೆಯಲ್ಲಿಯೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಕಂಟೋನ್ಮೆಂಟ್​​ನಲ್ಲಿರುವ ಆರ್ಮಿ ಹಾಸ್ಪಿಟಲ್​​​ನ ವೈದ್ಯರ ತಂಡ ರಾಜನಾಥ್​ ಸಿಂಗ್​ಗೆ ಚಿಕಿತ್ಸೆ ನೀಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು  ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಜೆಪಿ ನಡ್ಡಾ ಕೂಡ ಮನೆಯಲ್ಲೇ ಇದ್ದುಕೊಂಡು ವೈದ್ಯರ ಸಲಹೆ ಮೇರೆಗೆ ಕೊವಿಡ್​ 19 ಸಂಬಂಧಿತ ನಿಯಮ ಪಾಲನೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಬಿಜೆಪಿ ಮುಖಂಡರಾದ ಖುಷ್ಬು ಸುಂದರ್​ ಮತ್ತು ವರುಣ್​ ಗಾಂಧಿ ಕೂಡ ಕೊರೊನಾಕ್ಕೆ ಒಳಗಾಗಿದ್ದಾರೆ. ವರುಣ್​ ಗಾಂಧಿ ತಮಗೆ ಗಂಭೀರ ಸ್ವರೂಪದ ಲಕ್ಷಣಗಳು ಇರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ