AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ.

ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​
ನಿತಿನ್​ ಗಡ್ಕರಿ
TV9 Web
| Edited By: |

Updated on: Jan 12, 2022 | 7:54 AM

Share

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್​ ಗಡ್ಕರಿ (Nitin Gadkari ) ಮತ್ತೊಮ್ಮೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಅವರಿಗೆ ಕೊವಿಡ್​ 19ನ (Covid 19) ಸೌಮ್ಯ ಲಕ್ಷಣಗಳಿದ್ದು, ಐಸೋಲೇಶನ್​​ಗೆ ಒಳಗಾಗಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಿತಿನ್​ ಗಡ್ಕರಿ,  ನನಗೆ ಕೊರೊನಾ ಸೋಂಕು ತಗುಲಿದೆ. ಸೌಮ್ಯವಾದ ಲಕ್ಷಣಗಳಿವೆ. ಕೊವಿಡ್​ 19ಗೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದು, ಐಸೋಲೇಶನ್​ಗೆ ಒಳಗಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್​ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ತಪಾಸಣೆ ಮಾಡಿಸಿಕೊಳ್ಳಿ. ಫಲಿತಾಂಶ ಬರುವವರೆಗೂ ಐಸೋಲೇಶ್ ಆಗಿ ಎಂದು ಹೇಳಿದ್ದಾರೆ. 

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ. ಅಂದಹಾಗೇ, ನಿತಿನ್​ ಗಡ್ಕರಿಗೆ ಸೋಂಕು ತಗುಲುತ್ತಿರುವುದು ಇದೇ ಮೊದಲಲ್ಲ. 2020ರ ಸೆಪ್ಟೆಂಬರ್​​ನಲ್ಲಿ ಒಮ್ಮೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ಇನ್ನೊಂದೆಡೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೂಡ ಮನೆಯಲ್ಲಿಯೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಕಂಟೋನ್ಮೆಂಟ್​​ನಲ್ಲಿರುವ ಆರ್ಮಿ ಹಾಸ್ಪಿಟಲ್​​​ನ ವೈದ್ಯರ ತಂಡ ರಾಜನಾಥ್​ ಸಿಂಗ್​ಗೆ ಚಿಕಿತ್ಸೆ ನೀಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು  ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಜೆಪಿ ನಡ್ಡಾ ಕೂಡ ಮನೆಯಲ್ಲೇ ಇದ್ದುಕೊಂಡು ವೈದ್ಯರ ಸಲಹೆ ಮೇರೆಗೆ ಕೊವಿಡ್​ 19 ಸಂಬಂಧಿತ ನಿಯಮ ಪಾಲನೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಬಿಜೆಪಿ ಮುಖಂಡರಾದ ಖುಷ್ಬು ಸುಂದರ್​ ಮತ್ತು ವರುಣ್​ ಗಾಂಧಿ ಕೂಡ ಕೊರೊನಾಕ್ಕೆ ಒಳಗಾಗಿದ್ದಾರೆ. ವರುಣ್​ ಗಾಂಧಿ ತಮಗೆ ಗಂಭೀರ ಸ್ವರೂಪದ ಲಕ್ಷಣಗಳು ಇರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ