AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಭಾರತ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಈ ವರ್ಷದ ಆರಂಭದಲ್ಲಿ ಬಿಜೆಪಿ ಅಧಿಕಾರದಿಂದ ಹೊರಹಾಕಲ್ಪಟ್ಟ ಮಾಜಿ ಮೈತ್ರಿ ಪಾಲುದಾರರಾದ ನಿತೀಶ್ ಕುಮಾರ್ ಮತ್ತು ನವೀನ್ ಪಟ್ನಾಯಕ್ ಅವರ ಲೋಕಸಭಾ ಕ್ಷೇತ್ರವಾದ ಬೇಗುಸರಾಯ್‌ನಲ್ಲಿ ಈ ಅಭಿಪ್ರಾಯವನ್ನು ಬಿಜೆಪಿ ಸಂಸದ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ
Nitish Kumar And Naveen Patnaik
ಸುಷ್ಮಾ ಚಕ್ರೆ
|

Updated on: Dec 25, 2024 | 4:25 PM

Share

ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ನೀಡಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇಂದು ಹೇಳಿದ್ದಾರೆ. ಗಿರಿರಾಜ್ ಸಿಂಗ್ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಬೇಗುಸರಾಯ್‌ನಲ್ಲಿ ಬಿಜೆಪಿಯ ಮೈತ್ರಿಕೂಟದ ಸದಸ್ಯರಾದ ನಿತೀಶ್ ಕುಮಾರ್ ಮತ್ತು ಈ ವರ್ಷದ ಆರಂಭದಲ್ಲಿ ಬಿಜೆಪಿ ಅಧಿಕಾರದಿಂದ ಹೊರಹಾಕಲ್ಪಟ್ಟ ಮಾಜಿ ಮೈತ್ರಿ ಪಾಲುದಾರ ನವೀನ್ ಪಟ್ನಾಯಕ್ ಅವರನ್ನು ಹೊಗಳಿದ್ದಾರೆ.

“ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ನಿತೀಶ್ ಕುಮಾರ್ ಅಧಿಕಾರಕ್ಕೆ ಏರುವವರೆಗೂ ಬಿಹಾರ ಹದಗೆಟ್ಟ ರಸ್ತೆಗಳು, ಶಾಲೆಗಳು ಮತ್ತು ಕಟ್ಟಡಗಳಿಗೆ ಹೆಸರುವಾಸಿಯಾಗಿತ್ತು. ಹಾಗೆಯೇ ನವೀನ್ ಪಟ್ನಾಯಕ್ ಒಡಿಶಾಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರಂತಹ ನಾಯಕರು ಭಾರತ ರತ್ನದಂತಹ ಅತ್ಯುನ್ನತ ಗೌರವಕ್ಕೆ ಅರ್ಹರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದಂದು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಹೇಳಿದರು.

ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಅವರನ್ನು ಎನ್‌ಡಿಎ ಸಿಎಂ ಅಭ್ಯರ್ಥಿ ಎಂದು ಘೋಷಿಸಿರಲಿಲ್ಲ. ಎನ್‌ಡಿಎಯ ಪ್ರಚಂಡ ವಿಜಯದ ನಂತರ ಅತಿದೊಡ್ಡ ಘಟಕವಾಗಿ ಹೊರಹೊಮ್ಮಿದ ಬಿಜೆಪಿ ತಾನೇ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಂಡಿತು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಹೊಸ ಮುಖ್ಯಮಂತ್ರಿಯಾದರು.

ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ 2025ರ ಕೊನೆಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ