ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹರ್ದೀಪ್ ಸಿಂಗ್ ಪುರಿ

|

Updated on: Jun 17, 2024 | 11:08 AM

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆ ಬೆನ್ನಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸಿದ್ದರಾಮಯ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹರ್ದೀಪ್ ಸಿಂಗ್ ಪುರಿ
ಹರ್ದೀಪ್​ ಸಿಂಗ್ ಪುರಿ
Follow us on

ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ ಮಾಡಿರುವ ಕುರಿತು ಕೇಂದ್ರ ಸಚಿವ ಹರ್ದೀಪ್​ ಸಿಂಗ್ ಪುರಿ(Hardeep Singh Puri) ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ರಾಜ್ಯದ ಜನರ ಮೇಲೆ ಹಣದುಬ್ಬರದ ಹೊರೆ ಹಾಕಿದೆ. ಕರ್ನಾಟಕ ಸರ್ಕಾರದ ತೆರಿಗೆ ಹೆಚ್ಚಳದ ನಂತರ ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3.02 ರೂಪಾಯಿ ಏರಿಕೆಯಾಗಿದೆ.

ಹರ್ದೀಪ್ ಸಿಂಗ್ ಪುರಿ ಅವರು ಕರ್ನಾಟಕದ ಇಂಧನ ಬೆಲೆಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸಿದರು.ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳಲ್ಲಿ ಇಂಧನವು ಅಗ್ಗವಾಗಿದೆ ಎಂದು ಹೇಳಿದರು.

ಕರ್ನಾಟಕದ ಜನರು ಆಹಾರ ಪದಾರ್ಥಗಳು, ಬಟ್ಟೆ, ಔಷಧಿಗಳು ಮತ್ತು ಎಲ್ಲಾ ಅಗತ್ಯ ವಸ್ತುಗಳ ಬೆಲೆಗೆ ಇಂಧನ ಬೆಲೆ ನೇರವಾಗಿ ಪರಿಣಾಮ ಬೀರುವುದರಿಂದ ಹೆಚ್ಚಿನ ಮೊತ್ತವನ್ನು ಪಾವತಿಸಲು ಒತ್ತಾಯಿಸಲಾಗುತ್ತದೆ. ಇದಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅವರು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಇಂಧನ ಬೆಲೆಗಳನ್ನು ಒತ್ತಿಹೇಳಿದರು.

ಮತ್ತಷ್ಟು ಓದಿ: ತೈಲ ಬೆಲೆ ಏರಿಕೆ: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ದರ ಕಡಿಮೆ; ಸಿಎಂ ಸಮರ್ಥನೆ

ಕರ್ನಾಟಕ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇ. 29.84 ಕ್ಕೆ ಮತ್ತು ಡೀಸೆಲ್ ಮೇಲೆ  ಶೇ.18.44 ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದ ನಂತರವೂ, ಇಂಧನದ ಮೇಲಿನ ನಮ್ಮ ರಾಜ್ಯದ ತೆರಿಗೆಯು ದಕ್ಷಿಣ ಭಾರತದ ಹೆಲೆ ಚ್ಚಿನ ರಾಜ್ಯಗಳು ಮತ್ತು ಮಹಾರಾಷ್ಟ್ರದಂತಹ ಆರ್ಥಿಕ ಗಾತ್ರದ ರಾಜ್ಯಗಳಿಗಿಂತ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಪೆಟ್ರೋಲ್ ದರ 3ರೂ.ನಷ್ಟು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 102.84 ರೂ. ಕ್ಕೆ ತಲುಪಿದ್ದು , ಈ ಹಿಂದಿನ ದರ 99.84 ರೂ. ರಿಂದ ಹೆಚ್ಚಾಗಿದೆ. ಡೀಸೆಲ್ ಬೆಲೆ 3.02ರಷ್ಟು ಏರಿಕೆಯಾಗಿದ್ದು, ಲೀಟರ್‌ಗೆ 85.93 ರೂ.ನಿಂದ ರಿಂದ 88.95 ಡಾಲರ್​ಗೆ ಏರಿಕೆಯಾಗಿದೆ.

ಕರ್ನಾಟಕ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ನಾಯಕ ಆರ್. ಅಶೋಕ್ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸೋಮವಾರ ವಿಧಾನಸೌಧದ ಎದುರು ಎತ್ತಿನ ಬಂಡಿ, ಬೈಕ್‌ನೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಐಎಎನ್‌ಎಸ್ ಪ್ರಕಾರ, ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ