ಗುಂಡಿಕ್ಕಿ ಕೇಂದ್ರ ಸಚಿವ ಜಿತನ್ ಮಾಂಝಿ ಮೊಮ್ಮಗಳ ಹತ್ಯೆ

ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತಳನ್ನು ಸುಷ್ಮಾದೇವಿ ಎಂದು ಗುರುತಿಸಲಾಗಿದೆ. ಸುಷ್ಮಾ ದೇವಿ ಅವರ ಪತಿ ರಮೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಸ್ತುತ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ ಪತಿಗಾಗಿ ದಾಳಿ ನಡೆಸುತ್ತಿದ್ದಾರೆ.

ಗುಂಡಿಕ್ಕಿ ಕೇಂದ್ರ ಸಚಿವ ಜಿತನ್ ಮಾಂಝಿ ಮೊಮ್ಮಗಳ ಹತ್ಯೆ
ಸುಷ್ಮಾದೇವಿ

Updated on: Apr 10, 2025 | 12:20 PM

ಗಯಾ, ಏಪ್ರಿಲ್ 10: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತಳನ್ನು ಸುಷ್ಮಾದೇವಿ ಎಂದು ಗುರುತಿಸಲಾಗಿದೆ. ಸುಷ್ಮಾ ದೇವಿ ಅವರ ಪತಿ ರಮೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಸ್ತುತ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ ಪತಿಗಾಗಿ ದಾಳಿ ನಡೆಸುತ್ತಿದ್ದಾರೆ.

ಈ ಘಟನೆ ಅಟಾರಿ ಬ್ಲಾಕ್‌ನ ಟೆಟುವಾ ಗ್ರಾಮದಲ್ಲಿ ನಡೆದಿದೆ. ಸುಷ್ಮಾ ಅಟ್ಟಾರಿ ಬ್ಲಾಕ್‌ನಲ್ಲಿ ವಿಕಾಸ್ ಮಿತ್ರ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ರಮೇಶ್ ಪಾಟ್ನಾದಲ್ಲಿ ಟ್ರಕ್ ಓಡಿಸುತ್ತಾನೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆರೋಪಿ ಪತಿ ಮನೆಯಲ್ಲಿಯೇ ಪತ್ನಿಯ ಮೇಲೆ ಗುಂಡು ಹಾರಿಸಿ, ದೇಶೀಯ ಪಿಸ್ತೂಲನ್ನು ಎಸೆದು ಪರಾರಿಯಾಗಿದ್ದಾನೆ. ಘಟನೆಯ ನಂತರ ಗ್ರಾಮದಲ್ಲಿ ಅವ್ಯವಸ್ಥೆ ಉಂಟಾಯಿತು.

ಅವರಿಬ್ಬರೂ 14 ವರ್ಷಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರು, ಮೃತರ ಸಹೋದರಿ ಮತ್ತು ಮಕ್ಕಳು ಮನೆಯಲ್ಲಿ ಇನ್ನೊಂದು ಕೋಣೆಯಲ್ಲಿದ್ದರು. ಗುಂಡಿನ ಶಬ್ದ ಕೇಳಿ ಮೃತನ ಸಹೋದರಿ ಮತ್ತು ಮಕ್ಕಳು ಸ್ಥಳಕ್ಕೆ ಬಂದರು. ಅದೇ ಸಮಯದಲ್ಲಿ, ಗುಂಡೇಟಿನ ಸದ್ದು ಕೇಳಿ ಅಕ್ಕಪಕ್ಕದ ಮನೆಯವರು ಕೂಡ ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ
ಮಗಳ ಮೇಲೆ ಲೈಂಗಿಕ ದಾಹ ತೀರಿಸಿಕೊಂಡ ಪಾಪಿ ಅಪ್ಪ: ಗರ್ಭಿಣಿಯಾದ 16ರ ಬಾಲಕಿ
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಪ್ರೇಮ ವಿವಾಹಕ್ಕೆ ಐವರ ಕೊಲೆ, ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ
ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯ ಹತ್ಯೆಗೈದ ಪತ್ನಿ

ಮತ್ತಷ್ಟು ಓದಿ: ತಾನು ಇಷ್ಟಪಟ್ಟವಳು ತನ್ನ ಅಣ್ಣನ ಜತೆ ನಗುನಗುತ್ತಾ ಮಾತನಾಡಿದ್ದಕ್ಕೆ ಗುಂಡು ಹಾರಿಸಿದ ವ್ಯಕ್ತಿ

ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಬುಧವಾರ ರಮೇಶ್ ಸಿಂಗ್ ಅವರ ಮನೆಗೆ ಬಂದು ಪತ್ನಿ ಸುಷ್ಮಾ ದೇವಿಯನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು ಬಾಗಿಲು ಲಾಕ್ ಮಾಡಿ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಗುಂಡು ಸುಷ್ಮಾ ದೇವಿಯ ಎದೆಗೆ ತಗುಲಿತ್ತು. ಕೊಲೆ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಶೀಘ್ರದಲ್ಲೇ ಆರೋಪಿ ಪತಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us