AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಕಪ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಆಡಿದ್ದೇಕೆ? ಕಾರಣ ತಿಳಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು

ಭಾರತ ವರ್ಸಸ್ ಪಾಕಿಸ್ತಾನ ಏಷ್ಯಾ ಕಪ್ ಪಂದ್ಯದ ವಿರುದ್ಧ ಭಾರತದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ಖಚಿತವಾದ ಬೆನ್ನಲ್ಲೇ ಆ ದೇಶದೊಂದಿಗೆ ಭಾರತ ಕ್ರಿಕಟ್ ಆಡಬೇಕೇ? ಎಂಬ ಬಗ್ಗೆ ತೀವ್ರ ಚರ್ಚೆಗಳು ನಡೆದಿದ್ದವು. ಏಷ್ಯಾ ಕಪ್ ಮತ್ತು ಒಲಿಂಪಿಕ್ಸ್‌ನಂತಹ ಪಂದ್ಯಾವಳಿಗಳು ಪಾಕಿಸ್ತಾನಕ್ಕೆ ಮಾತ್ರ ಅಲ್ಲ ಮತ್ತು ನೆರೆಯ ದೇಶವನ್ನು ಪ್ರತ್ಯೇಕವಾಗಿ ಆಹ್ವಾನಿಸಿಲ್ಲ ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ಏಷ್ಯಾ ಕಪ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಆಡಿದ್ದೇಕೆ? ಕಾರಣ ತಿಳಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
Kiren Rijiju
ಸುಷ್ಮಾ ಚಕ್ರೆ
|

Updated on: Sep 15, 2025 | 9:48 PM

Share

ಮುಂಬೈ, ಸೆಪ್ಟೆಂಬರ್ 15: ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ನಲ್ಲಿ (Asia Cup 2025) ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನದ ವಿರುದ್ಧ ಆಟವಾಡಿದ್ದಕ್ಕೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಪಾಕಿಸ್ತಾನದ ಜೊತೆ ಭಾರತ (IND VS PAK) ಕ್ರಿಕೆಟ್ ಆಡಲು ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ವಿವರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತ ತನ್ನ ಸಾಂಪ್ರದಾಯಿಕ ಎದುರಾಳಿಯೊಂದಿಗೆ ದ್ವಿಪಕ್ಷೀಯ ಪಂದ್ಯವನ್ನು ಆಡುತ್ತಿಲ್ಲ, ಈ ಪಂದ್ಯಾವಳಿಯಲ್ಲಿ ಬೇರೆ ದೇಶಗಳ ತಂಡಗಳು ಕೂಡ ಭಾಗವಹಿಸುತ್ತವೆ. ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಏಷ್ಯನ್ ಚಾಂಪಿಯನ್‌ಶಿಪ್, ವಿಶ್ವಕಪ್ ಮತ್ತು ಏಷ್ಯಾ ಕಪ್‌ನಂತಹ ಪಂದ್ಯಾವಳಿಗಳು ಬಹುರಾಷ್ಟ್ರೀಯ, ಬಹುಪಕ್ಷೀಯ ಪಂದ್ಯಗಳು. ಇದರಲ್ಲಿ ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಆಡುತ್ತವೆ. ನಾವೇನಾದರೂ ಒಂದು ದೇಶದೊಂದಿಗೆ ಆಟವಾಡುವುದಿಲ್ಲ ಎಂದು ಹಿಂದೆ ಸರಿಯಲು ನಿರ್ಧರಿಸಿದರೆ ಏಷ್ಯಾ ಕಪ್, ಒಲಿಂಪಿಕ್ಸ್​​ನಂತಹ ಪಂದ್ಯಗಳಿಂದ ಭಾರತವನ್ನು ಹೊರಗಿಡಲಾಗುತ್ತದೆ. ಇದರಿಂದ ನಮಗೇ ನಷ್ಟ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕಿರಣ್ ರಿಜಿಜು, ಏಷ್ಯಾ ಕಪ್ ಮತ್ತು ಒಲಿಂಪಿಕ್ಸ್‌ನಂತಹ ಪಂದ್ಯಾವಳಿಗಳು ಪಾಕಿಸ್ತಾನಕ್ಕೆ ಮಾತ್ರವಲ್ಲ. ನಾವು ಪಂದಯಾವಳಿಗೆ ನೆರೆಯ ದೇಶ ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಆಹ್ವಾನಿಸಿಲ್ಲ. ಅಂತಹ ಪಂದ್ಯಾವಳಿಯಲ್ಲಿ ಭಾಗವಹಿಸದಿದ್ದರೆ ಅದು ಭಾರತದ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: IND vs PAK: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಮೊದಲ ತಲೆದಂಡ

ಒಂದುವೇಳೆ ಭಾರತ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ಜೊತೆ ಆಡದಿದ್ದರೆ, ಭಾರತ ಪಂದ್ಯದಿಂದಲೇ ಹೊರಗುಳಿಯುತ್ತದೆ. ಹೀಗಾಗಿ ಅನುಮತಿ ನೀಡಲಾಯಿತು. “ಒಂದು ದೇಶದೊಂದಿಗಿನ ನಮ್ಮ ದ್ವೇಷದಿಂದಾಗಿ ನಾವು ಒಲಿಂಪಿಕ್ಸ್‌ಗೆ ಹೋಗದಿದ್ದರೆ, ಅದರಿಂದ ನಷ್ಟ ಯಾರಿಗೆ? ಆದ್ದರಿಂದ, ನಮ್ಮ ಭಾವನೆಯ ಜೊತೆ ಅದರ ಹಿಂದಿನ ತಾರ್ಕಿಕ ಚಿಂತನೆಯೂ ಇರಬೇಕು” ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ