ದುಬೈನಲ್ಲಿ ತೆಲಂಗಾಣದ ಇಬ್ಬರ ಕೊಲೆ; ಕೇಂದ್ರ ಸಚಿವ ಕಿಶನ್ ರೆಡ್ಡಿ ಕಳವಳ

ದುಬೈ ಬೇಕರಿಯಲ್ಲಿ ಸಹೋದ್ಯೋಗಿಯ ಚಾಕು ದಾಳಿಯಲ್ಲಿ ಇಬ್ಬರು ಭಾರತೀಯರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ದುಬೈನಲ್ಲಿ ಪಾಕಿಸ್ತಾನಿ ವ್ಯಕ್ತಿಯಿಂದ ತೆಲಂಗಾಣದ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ, ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಮೃತರಾದ ನಿರ್ಮಲ್ ಜಿಲ್ಲೆಯ ಸೋನ್ ಮಂಡಲದ 40 ವರ್ಷದ ಅಷ್ಟಪು ಪ್ರೇಮ್ ಸಾಗರ್ ಮತ್ತು ನಿಜಾಮಾಬಾದ್ ಜಿಲ್ಲೆಯ ಶ್ರೀನಿವಾಸ್ ಸಾವಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ.

ದುಬೈನಲ್ಲಿ ತೆಲಂಗಾಣದ ಇಬ್ಬರ ಕೊಲೆ; ಕೇಂದ್ರ ಸಚಿವ ಕಿಶನ್ ರೆಡ್ಡಿ ಕಳವಳ
Kishan Reddy

Updated on: Apr 15, 2025 | 5:32 PM

ನವದೆಹಲಿ, ಏಪ್ರಿಲ್ 15: ದುಬೈನ ಬೇಕರಿಯಲ್ಲಿ ತೆಲಂಗಾಣದ (Telangana) ಇಬ್ಬರು ಭಾರತೀಯ ಪ್ರಜೆಗಳ ಮೇಲೆ ಪಾಕಿಸ್ತಾನಿ ಸಹೋದ್ಯೋಗಿಯೊಬ್ಬರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದರೂ, ಇದು ಇತ್ತೀಚೆಗೆ ಸಾರ್ವಜನಿಕ ಗಮನಕ್ಕೆ ಬಂದಿದೆ. ಮೃತರನ್ನು ನಿರ್ಮಲ್ ಜಿಲ್ಲೆಯ ಸೋನ್ ಮಂಡಲದ ಮೂಲದ 40 ವರ್ಷದ ಅಷ್ಟಪು ಪ್ರೇಮ್ ಸಾಗರ್ ಮತ್ತು ನಿಜಾಮಾಬಾದ್ ಜಿಲ್ಲೆಯ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಮೃತರಾದ ಇಬ್ಬರು ಮತ್ತು ಗಾಯಕ್ಕೊಳಗಾದ ಇಬ್ಬರು ದುಬೈನ ಭಾರತೀಯ ವಲಸಿಗ ಸಮುದಾಯದಲ್ಲಿ ಚಿರಪರಿಚಿತವಾಗಿರುವ ಒಂದೇ ಬೇಕರಿಯಲ್ಲಿ ಉದ್ಯೋಗದಲ್ಲಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಕಿಶನ್ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. “ದುಬೈನಲ್ಲಿ ತೆಲಂಗಾಣದ ನಿರ್ಮಲ್ ಜಿಲ್ಲೆಯ ಅಷ್ಟಪು ಪ್ರೇಮಸಾಗರ್ ಮತ್ತು ನಿಜಾಮಾಬಾದ್ ಜಿಲ್ಲೆಯ ಶ್ರೀನಿವಾಸ್ ಅವರ ಭೀಕರ ಹತ್ಯೆಯಿಂದ ತೀವ್ರ ಆಘಾತವಾಗಿದೆ. ಈ ವಿಷಯದ ಬಗ್ಗೆ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಮೃತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಮತ್ತು ಮೃತದೇಹಗಳನ್ನು ತುರ್ತಾಗಿ ಸ್ವದೇಶಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆ. ಈ ವಿಷಯದಲ್ಲಿ ತ್ವರಿತವಾಗಿ ನ್ಯಾಯ ಒದಗಿಸಲು ಕೇಂದ್ರ ವಿದೇಶಾಂಗ ಸಚಿವಾಲಯ ಕೆಲಸ ಮಾಡುತ್ತದೆ. ಈ ವಿಷಯದಲ್ಲಿ ಬೆಂಬಲ ಮತ್ತು ಸಹಾಯಕ್ಕಾಗಿ ಸಚಿವ ಜೈಶಂಕರ್ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?


ಇದನ್ನೂ ಓದಿ: ಜನರ ಗಮನವನ್ನು ಬೇರೆಡೆ ಸೆಳೆಯಲು ಸಿಎಂ ಸ್ಟಾಲಿನ್ ಸಭೆ; ಕೇಂದ್ರ ಸಚಿವ ಕಿಶನ್ ರೆಡ್ಡಿ ಆಕ್ರೋಶ

ದುಬೈನಲ್ಲಿ ತೆಲಂಗಾಣದ ಇಬ್ಬರು ಗಾಯಗೊಂಡ ವ್ಯಕ್ತಿಗಳು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯಕೀಯ ಮೂಲಗಳು ಅವರ ಸ್ಥಿತಿ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ. ಪೊಲೀಸ್ ಅಧಿಕಾರಿಗಳು ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಕಳೆದ ಶುಕ್ರವಾರ ನಡೆದ ಆಘಾತಕಾರಿ ಘಟನೆಯಲ್ಲಿ ದುಬೈ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ತೆಲಂಗಾಣ ಮೂಲದವರನ್ನು ಪಾಕಿಸ್ತಾನಿ ಸಹೋದ್ಯೋಗಿಯೊಬ್ಬರು ಕ್ರೂರವಾಗಿ ಹತ್ಯೆ ಮಾಡಿದ್ದರು. ಇದರಿಂದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಕೆಲಸದ ಒತ್ತಡ ಮತ್ತು ಕೋಮು ಉದ್ವಿಗ್ನತೆಯಿಂದ ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ