AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಪ್ರತಿಷ್ಠಿತ ‘ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್’ ಪ್ರಶಸ್ತಿ ಪ್ರದಾನ

ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಡಿದ ಕಾರ್ಯಗಳನ್ನು ಗಮನಿಸಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್ ನೀಡಿ ಗೌರಿವಿಸಲಾಯಿತು.

ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಪ್ರತಿಷ್ಠಿತ 'ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್' ಪ್ರಶಸ್ತಿ ಪ್ರದಾನ
ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರಿಗೆ ಗ್ಲೋಬಲ್ ಇಂಕ್ರೆಡಿಬಲ್ ಇಂಕ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಮಾಡಿದ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು
Rakesh Nayak Manchi
|

Updated on:Jul 17, 2023 | 9:50 PM

Share

ನವದೆಹಲಿ, ಜುಲೈ 17: ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ, ವಾಣಿಜ್ಯ ಮತ್ತು ಜನರ ನಡುವಿನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್ ಸಂಸ್ಥೆಯಿಂದ ಕೊಡಮಾಡಲ್ಪಡುವ ಪ್ರತಿಷ್ಠಿತ ‘ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್’ (Global Incredible Inc leadership Award) ಅನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ಅವರಿಗೆ ನೀಡಿ ಗೌರವಿಸಲಾಯಿತು.

ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ಟ್ವೀಟ್ ಮಾಡಿದ ಕೇಂದ್ರ ಸಚಿವರು, “ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ, ವಾಣಿಜ್ಯ ಮತ್ತು ಜನರ ನಡುವಿನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಸಂಸ್ಥೆಯಾದ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್​ನಿಂದ ‘ಲೀಡರ್ಶಿಪ್ ಅವಾರ್ಡ್’ ಪಡೆದಿದ್ದಕ್ಕೆ ಕೃತಜ್ಞನಾಗಿದ್ದೇನೆ” ಎಂದರು.

ಇದನ್ನೂ ಓದಿ: Kishan Reddy: ‘ಧರಣಿ’ ಪೋರ್ಟಲ್​​ನಿಂದ ಹೊಸ ಸಮಸ್ಯೆ; ಬಿಆರ್​​​ಎಸ್ ಸರ್ಕಾರದ ವಿರುದ್ಧ ಕಿಶನ್ ರೆಡ್ಡಿ ಕಿಡಿ

“ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ಪ್ರಯತ್ನಗಳನ್ನು ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಪ್ರಸ್ತುತ ಅಮೆರಿಕದಲ್ಲಿದ್ದು, ಪ್ರವಾಸೋದ್ಯಮದ ಆರ್ಥಿಕ, ಸಾಮಾಜಿಕ ಮತ್ತು ಪರಿಸರ ಸುಸ್ಥಿರತೆ ಕುರಿತು ವಿಶ್ವಸಂಸ್ಥೆಯ ಉನ್ನತ ಮಟ್ಟದ ರಾಜಕೀಯ ವೇದಿಕೆಯಲ್ಲಿ (UN HLPF) ಭಾಗವಹಿಸಿ ಭಾಷಣ ಮಾಡಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Mon, 17 July 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ