AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ದೇಶದ ಬಗ್ಗೆ ಅಭಿಮಾನವಿಲ್ಲದವರು, ಭಾರತ್ ಮಾತಾ ಕಿ ಜೈ ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಲೇಖಿ ಕಿಡಿ

ದೇಶದ ಬಗ್ಗೆ ಅಭಿಮಾನವಿಲ್ಲದವರು ಯುವ ಸಮಾವೇಶದಲ್ಲಿ ಭಾಗವಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ, ಭಾರತಾಂಬೆ ಯಾರೊಬ್ಬಳ ಅಥವಾ ಯಾವುದೇ ಒಂದು ನಿರ್ದಿಷ್ಟ ಸಮುದಾಯದ ತಾಯಿಯಲ್ಲ ಆಕೆ ಎಲ್ಲರಿಗೂ ತಾಯಿಯೇ, ಆದರೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಹಿಂಜರಿಯುವವರು ದೇಶದ ಬಗ್ಗೆ ಅಭಿಮಾನವಿಲ್ಲದವರು ಎಂದು ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ.

ಕೇರಳ: ದೇಶದ ಬಗ್ಗೆ ಅಭಿಮಾನವಿಲ್ಲದವರು, ಭಾರತ್ ಮಾತಾ ಕಿ ಜೈ ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಲೇಖಿ ಕಿಡಿ
ಮೀನಾಕ್ಷಿ ಲೇಖಿImage Credit source: India Today
ನಯನಾ ರಾಜೀವ್
|

Updated on: Feb 04, 2024 | 8:31 AM

Share

ಭಾರತ್ ಮಾತಾ ಕಿ ಜೈ(Bharat Mata Ki Jai) ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ(Meenakshi Lekhi) ಕಿಡಿಕಾರಿದ್ದಾರೆ. ಇವರೆಲ್ಲರೂ ದೇಶಾಭಿಮಾನ ಇಲ್ಲದವರು ಎಂದು ಹೇಳಿದ್ದಾರೆ. ಕೇರಳದಲ್ಲಿ ಯುವ ಸಮಾವೇಶ ನಡೆದಿತ್ತು, ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಯುವಕರನ್ನುದ್ದೇಶಿಸಿ ಮಾತನಾಡಿದ್ದರು. ಭಾಷಣದ ಬಳಿಕ ಭಾರತ್ ಮಾತಾಕಿ ಜೈ ಎಂದು ಉದ್ಘರಿಸಿದ್ದಾರೆ ಆದರೆ ಅಲ್ಲಿದ್ದವರು ಯಾರೂ ಕೂಡ ಹೇಳಲಿಲ್ಲ ಅದಕ್ಕೆ ಲೇಖಿ ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತವು ನಮ್ಮ ತಾಯಿ ಮಾತ್ರವಲ್ಲ ಅಥವಾ ನಿಮ್ಮ ತಾಯಿ ಮಾತ್ರವಲ್ಲ ಭಾರದಾಂಬೆ ಎಲ್ಲರಿಗೂ ಸೇರಿದವಳು, ಭಾರತ್ ಮಾತಾ ಕಿ ಜೈ ಎಂದರೆ ಏನಾಗಿಬಿಡುತ್ತದೆ ಎಂದು ಪ್ರಶ್ನಿಸಿದ್ದಾರೆ. ಈ ಸಮಾವೇಶವನ್ನು ಕೆಲವು ಹಿಂದೂ ಸಂಘಟನೆಗಳು ಆಯೋಜಿಸಿದ್ದವು. ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದ ಬಿಜೆಪಿ ನಾಯಕರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಯನ್ನು ಎತ್ತಿದರು ಮತ್ತು ಅದನ್ನು ಪುನರಾವರ್ತಿಸಲು ಸಭಿಕರನ್ನು ಕೇಳಿದರು.

ಪ್ರೇಕ್ಷಕರ ಪ್ರತಿಕ್ರಿಯೆ ನಿರೀಕ್ಷಿತ ಮಟ್ಟದಲ್ಲಿಲ್ಲದ ಕಾರಣ, ಭಾರತ ತನ್ನ ಮನೆಯಲ್ಲವೇ ಎಂದು ಕೇಳಿದರು. ಹಳದಿ ಸೀರೆ ಧರಿಸಿದ ಒಬ್ಬರನ್ನು ನಿಲ್ಲುವಂತೆ ಕೇಳಿ, ಆ ಕಡೆ ಈ ಕಡೆ ನೋಡಬೇಡಿ ಒಮ್ಮೆ ಭಾರತ್ ಮಾತಾಕಿ ಜೈ ಎಂದು ಹೇಳಿ ಎಂದು ಕೇಳಿದ್ದಾರೆ ಆದರೆ ಆ ಮಹಿಳೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

ಮತ್ತಷ್ಟು ಓದಿ: ಸಂಸತ್​​ನಲ್ಲಿ ಹಮಾಸ್ ಕುರಿತ ಪ್ರಶ್ನೆಯ ಉತ್ತರಕ್ಕೆ ಸಹಿ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ ಮೀನಾಕ್ಷಿ ಲೇಖಿ

ಅದರಿಂದ ಬೇಸರಗೊಂಡ ಸಚಿವೆ ಲೇಖಿ, ನೀವು ಇಲ್ಲಿಂದ ಇನ್ನು ಹೋಗಬಹುದು, ರಾಷ್ಟ್ರದ ಬಗ್ಗೆ ಹೆಮ್ಮೆ ಇಲ್ಲದವರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ