AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ದೇಶದ ಬಗ್ಗೆ ಅಭಿಮಾನವಿಲ್ಲದವರು, ಭಾರತ್ ಮಾತಾ ಕಿ ಜೈ ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಲೇಖಿ ಕಿಡಿ

ದೇಶದ ಬಗ್ಗೆ ಅಭಿಮಾನವಿಲ್ಲದವರು ಯುವ ಸಮಾವೇಶದಲ್ಲಿ ಭಾಗವಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ, ಭಾರತಾಂಬೆ ಯಾರೊಬ್ಬಳ ಅಥವಾ ಯಾವುದೇ ಒಂದು ನಿರ್ದಿಷ್ಟ ಸಮುದಾಯದ ತಾಯಿಯಲ್ಲ ಆಕೆ ಎಲ್ಲರಿಗೂ ತಾಯಿಯೇ, ಆದರೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಹಿಂಜರಿಯುವವರು ದೇಶದ ಬಗ್ಗೆ ಅಭಿಮಾನವಿಲ್ಲದವರು ಎಂದು ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ.

ಕೇರಳ: ದೇಶದ ಬಗ್ಗೆ ಅಭಿಮಾನವಿಲ್ಲದವರು, ಭಾರತ್ ಮಾತಾ ಕಿ ಜೈ ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಲೇಖಿ ಕಿಡಿ
ಮೀನಾಕ್ಷಿ ಲೇಖಿImage Credit source: India Today
ನಯನಾ ರಾಜೀವ್
|

Updated on: Feb 04, 2024 | 8:31 AM

Share

ಭಾರತ್ ಮಾತಾ ಕಿ ಜೈ(Bharat Mata Ki Jai) ಎಂದು ಹೇಳದವರ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ(Meenakshi Lekhi) ಕಿಡಿಕಾರಿದ್ದಾರೆ. ಇವರೆಲ್ಲರೂ ದೇಶಾಭಿಮಾನ ಇಲ್ಲದವರು ಎಂದು ಹೇಳಿದ್ದಾರೆ. ಕೇರಳದಲ್ಲಿ ಯುವ ಸಮಾವೇಶ ನಡೆದಿತ್ತು, ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಯುವಕರನ್ನುದ್ದೇಶಿಸಿ ಮಾತನಾಡಿದ್ದರು. ಭಾಷಣದ ಬಳಿಕ ಭಾರತ್ ಮಾತಾಕಿ ಜೈ ಎಂದು ಉದ್ಘರಿಸಿದ್ದಾರೆ ಆದರೆ ಅಲ್ಲಿದ್ದವರು ಯಾರೂ ಕೂಡ ಹೇಳಲಿಲ್ಲ ಅದಕ್ಕೆ ಲೇಖಿ ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತವು ನಮ್ಮ ತಾಯಿ ಮಾತ್ರವಲ್ಲ ಅಥವಾ ನಿಮ್ಮ ತಾಯಿ ಮಾತ್ರವಲ್ಲ ಭಾರದಾಂಬೆ ಎಲ್ಲರಿಗೂ ಸೇರಿದವಳು, ಭಾರತ್ ಮಾತಾ ಕಿ ಜೈ ಎಂದರೆ ಏನಾಗಿಬಿಡುತ್ತದೆ ಎಂದು ಪ್ರಶ್ನಿಸಿದ್ದಾರೆ. ಈ ಸಮಾವೇಶವನ್ನು ಕೆಲವು ಹಿಂದೂ ಸಂಘಟನೆಗಳು ಆಯೋಜಿಸಿದ್ದವು. ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದ ಬಿಜೆಪಿ ನಾಯಕರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಯನ್ನು ಎತ್ತಿದರು ಮತ್ತು ಅದನ್ನು ಪುನರಾವರ್ತಿಸಲು ಸಭಿಕರನ್ನು ಕೇಳಿದರು.

ಪ್ರೇಕ್ಷಕರ ಪ್ರತಿಕ್ರಿಯೆ ನಿರೀಕ್ಷಿತ ಮಟ್ಟದಲ್ಲಿಲ್ಲದ ಕಾರಣ, ಭಾರತ ತನ್ನ ಮನೆಯಲ್ಲವೇ ಎಂದು ಕೇಳಿದರು. ಹಳದಿ ಸೀರೆ ಧರಿಸಿದ ಒಬ್ಬರನ್ನು ನಿಲ್ಲುವಂತೆ ಕೇಳಿ, ಆ ಕಡೆ ಈ ಕಡೆ ನೋಡಬೇಡಿ ಒಮ್ಮೆ ಭಾರತ್ ಮಾತಾಕಿ ಜೈ ಎಂದು ಹೇಳಿ ಎಂದು ಕೇಳಿದ್ದಾರೆ ಆದರೆ ಆ ಮಹಿಳೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

ಮತ್ತಷ್ಟು ಓದಿ: ಸಂಸತ್​​ನಲ್ಲಿ ಹಮಾಸ್ ಕುರಿತ ಪ್ರಶ್ನೆಯ ಉತ್ತರಕ್ಕೆ ಸಹಿ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ ಮೀನಾಕ್ಷಿ ಲೇಖಿ

ಅದರಿಂದ ಬೇಸರಗೊಂಡ ಸಚಿವೆ ಲೇಖಿ, ನೀವು ಇಲ್ಲಿಂದ ಇನ್ನು ಹೋಗಬಹುದು, ರಾಷ್ಟ್ರದ ಬಗ್ಗೆ ಹೆಮ್ಮೆ ಇಲ್ಲದವರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ