AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು; ಮಧ್ಯಂತರ ರಕ್ಷಣೆ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ನಕಾರ

Narayan Rane: ಇನ್ನು ತಮ್ಮ ವಿರುದ್ಧ ಮೂರು ಕಡೆಗಳಲ್ಲಿ ಎಫ್​ಐಆರ್​ ದಾಖಲಾದಾಗಲೂ ರಾಣೆ ತಾವೇನೂ ಅಪರಾಧ ಮಾಡಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದರು. ‘ಹೊಡೆಯುತ್ತಿದ್ದೆ‘ ಎಂಬುದು ಶಬ್ದಗಳೇ ಹೊರತು ಅಪರಾಧವಲ್ಲ ಎಂದು ರಾಣೆ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು.  

ಕೇಂದ್ರ ಸಚಿವ ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು; ಮಧ್ಯಂತರ ರಕ್ಷಣೆ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ನಕಾರ
ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು
TV9 Web
| Edited By: |

Updated on:Aug 24, 2021 | 4:14 PM

Share

ನಾಸಿಕ್​: ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನೇ ತಪ್ಪಾಗಿ ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಕಪಾಳಕ್ಕೆ ಹೊಡೆಯಬೇಕು ಎನ್ನಿಸಿತ್ತು ಎಂದು ಏಕವಚನದಲ್ಲಿ, ಬಹಿರಂಗವಾಗಿ ಬೈದಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ್​ ರಾಣೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್​ ನಗರದಲ್ಲಿದ್ದ ನಾರಾಯಣ್ ರಾಣೆಯವರನ್ನು ನಾಸಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಇನ್ನು ಅವರ ವಿರುದ್ಧ ಅದಾಗಲೇ ಪುಣೆ, ನಾಸಿಕ್​​, ಮತ್ತು ರಾಯ್​ಗಡ್​ನ ಮಹಾದ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮಧ್ಯೆ ಬಂಧನ ಅಥವಾ ಇನ್ಯಾವುದೇ ಬಲವಂತವಾಗಿ ತೆಗೆದುಕೊಳ್ಳಲಾಗುವ ಕ್ರಮಗಳಿಂದ ರಕ್ಷಣೆ ಕೊಡುವಂತೆ ನಾರಾಯಣ ರಾಣೆ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ  ಅವರ ಅರ್ಜಿ ವಿಚಾರಣೆ ಮಾಡಲು ಜಸ್ಟೀಸ್​ ಎಸ್​ಎಸ್​ ಶಿಂಧೆ ಮತ್ತು ಎನ್​ಜೆ ಜಮ್ದಾರ್​ ಅವರಿದ್ದ ಪೀಠ ನಿರಾಕರಿಸಿದೆ.   

ಉದ್ಧವ್ ಠಾಕ್ರೆಯವರಿಗೆ ಸ್ವಾತಂತ್ರ್ಯ ಬಂದ ವರ್ಷವೇ ಗೊತ್ತಿಲ್ಲ. ಇದು ನಾಚಿಕೆಗೇಡಿನ ವಿಷಯ. ಈ ಬಾರಿ ಎಷ್ಟನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ ಎಂಬುದು ಗೊತ್ತಿಲ್ಲದೆ, ಅದನ್ನು ಕೇಳಲು ಭಾಷಣದ ಮಧ್ಯೆಯೇ ಹಿಂದೆ ಬಾಗಿದ್ದಾರೆ. ನಾನೇ ಅಲ್ಲಿದ್ದಿದ್ದರೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ನಾರಾಯಣ ರಾಣೆ ಹೇಳಿದ್ದರು.  ಆದರೆ ಈ ಮಾತು ಸಿಕ್ಕಾಪಟೆ ವಿವಾದ ಸೃಷ್ಟಿಸಿತ್ತು. ಶಿವಸೇನೆ ಕಾರ್ಯಕರ್ತರೂ ಪ್ರತಿಭಟನೆ ಶುರು ಮಾಡಿದ್ದರು. ನಾಸಿಕ್​ನಲ್ಲಿರುವ ಬಿಜೆಪಿ ಕಚೇರಿಗೆ ಕಲ್ಲು ಎಸೆದು, ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಅಷ್ಟೇ ಅಲ್ಲ, ಶಿವಸೇನೆ ಸಂಸದ ವಿನಾಯಕ್​ ರಾವತ್​, ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ರಾಣೆಯನ್ನು ಕೇಂದ್ರ ಸಂಪುಟದಿಂದ ತೆಗೆದುಹಾಕಬೇಕು ಎಂದೂ ಆಗ್ರಹಿಸಿದ್ದಾರೆ.

ಇನ್ನು ತಮ್ಮ ವಿರುದ್ಧ ಮೂರು ಕಡೆಗಳಲ್ಲಿ ಎಫ್​ಐಆರ್​ ದಾಖಲಾದಾಗಲೂ ರಾಣೆ ತಾವೇನೂ ಅಪರಾಧ ಮಾಡಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದರು. ನನ್ನ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು ಗೊತ್ತಿಲ್ಲ. ನಾನು ಸಾಮಾನ್ಯ ವ್ಯಕ್ತಿಯಲ್ಲ..ಅಷ್ಟಕ್ಕೂ ನಾನು ಯಾವುದೇ ಅಪರಾಧ ಮಾಡಿಲ್ಲ. ಹಾಗೇ ಹೇಳುವುದಾದರೆ, ಆಗಸ್ಟ್​ 15, ನಮ್ಮ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಗೊತ್ತಿಲ್ಲದೆ ಇರುವುದೂ ಅಪರಾಧವೇ ಅಲ್ಲವೇ? ನಾನು ಹೊಡೆಯುತ್ತಿದ್ದೆ ಎಂದು ಹೇಳಿದ್ದೇನೆ ಅಷ್ಟೇ..ಇವು ಶಬ್ದಗಳೇ ಹೊರತು ಅಪರಾಧವಲ್ಲ ಎಂದು ರಾಣೆ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: ಕೋವಿಡ್-19 ಮೂರನೇ ಅಲೆ ವಿರುದ್ಧ ಮಕ್ಕಳನ್ನು ರಕ್ಷಿಸಲು ಸರ್ಕಾರಗಳು ಮಾಡಿಕೊಂಡಿರುವ ಏರ್ಪಾಟುಗಳು ಯಾವುದಕ್ಕೂ ಸಾಲದು: ವರದಿ

ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೊಕ್ಕ ವಕೀಲರು

Published On - 4:00 pm, Tue, 24 August 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ