AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು; ಮಧ್ಯಂತರ ರಕ್ಷಣೆ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ನಕಾರ

Narayan Rane: ಇನ್ನು ತಮ್ಮ ವಿರುದ್ಧ ಮೂರು ಕಡೆಗಳಲ್ಲಿ ಎಫ್​ಐಆರ್​ ದಾಖಲಾದಾಗಲೂ ರಾಣೆ ತಾವೇನೂ ಅಪರಾಧ ಮಾಡಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದರು. ‘ಹೊಡೆಯುತ್ತಿದ್ದೆ‘ ಎಂಬುದು ಶಬ್ದಗಳೇ ಹೊರತು ಅಪರಾಧವಲ್ಲ ಎಂದು ರಾಣೆ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು.  

ಕೇಂದ್ರ ಸಚಿವ ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು; ಮಧ್ಯಂತರ ರಕ್ಷಣೆ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ನಕಾರ
ನಾರಾಯಣ್​ ರಾಣೆಯನ್ನು ವಶಕ್ಕೆ ಪಡೆದ ಪೊಲೀಸರು
TV9 Web
| Edited By: |

Updated on:Aug 24, 2021 | 4:14 PM

Share

ನಾಸಿಕ್​: ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನೇ ತಪ್ಪಾಗಿ ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಕಪಾಳಕ್ಕೆ ಹೊಡೆಯಬೇಕು ಎನ್ನಿಸಿತ್ತು ಎಂದು ಏಕವಚನದಲ್ಲಿ, ಬಹಿರಂಗವಾಗಿ ಬೈದಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ್​ ರಾಣೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್​ ನಗರದಲ್ಲಿದ್ದ ನಾರಾಯಣ್ ರಾಣೆಯವರನ್ನು ನಾಸಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಇನ್ನು ಅವರ ವಿರುದ್ಧ ಅದಾಗಲೇ ಪುಣೆ, ನಾಸಿಕ್​​, ಮತ್ತು ರಾಯ್​ಗಡ್​ನ ಮಹಾದ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮಧ್ಯೆ ಬಂಧನ ಅಥವಾ ಇನ್ಯಾವುದೇ ಬಲವಂತವಾಗಿ ತೆಗೆದುಕೊಳ್ಳಲಾಗುವ ಕ್ರಮಗಳಿಂದ ರಕ್ಷಣೆ ಕೊಡುವಂತೆ ನಾರಾಯಣ ರಾಣೆ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ  ಅವರ ಅರ್ಜಿ ವಿಚಾರಣೆ ಮಾಡಲು ಜಸ್ಟೀಸ್​ ಎಸ್​ಎಸ್​ ಶಿಂಧೆ ಮತ್ತು ಎನ್​ಜೆ ಜಮ್ದಾರ್​ ಅವರಿದ್ದ ಪೀಠ ನಿರಾಕರಿಸಿದೆ.   

ಉದ್ಧವ್ ಠಾಕ್ರೆಯವರಿಗೆ ಸ್ವಾತಂತ್ರ್ಯ ಬಂದ ವರ್ಷವೇ ಗೊತ್ತಿಲ್ಲ. ಇದು ನಾಚಿಕೆಗೇಡಿನ ವಿಷಯ. ಈ ಬಾರಿ ಎಷ್ಟನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ ಎಂಬುದು ಗೊತ್ತಿಲ್ಲದೆ, ಅದನ್ನು ಕೇಳಲು ಭಾಷಣದ ಮಧ್ಯೆಯೇ ಹಿಂದೆ ಬಾಗಿದ್ದಾರೆ. ನಾನೇ ಅಲ್ಲಿದ್ದಿದ್ದರೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ನಾರಾಯಣ ರಾಣೆ ಹೇಳಿದ್ದರು.  ಆದರೆ ಈ ಮಾತು ಸಿಕ್ಕಾಪಟೆ ವಿವಾದ ಸೃಷ್ಟಿಸಿತ್ತು. ಶಿವಸೇನೆ ಕಾರ್ಯಕರ್ತರೂ ಪ್ರತಿಭಟನೆ ಶುರು ಮಾಡಿದ್ದರು. ನಾಸಿಕ್​ನಲ್ಲಿರುವ ಬಿಜೆಪಿ ಕಚೇರಿಗೆ ಕಲ್ಲು ಎಸೆದು, ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಅಷ್ಟೇ ಅಲ್ಲ, ಶಿವಸೇನೆ ಸಂಸದ ವಿನಾಯಕ್​ ರಾವತ್​, ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ರಾಣೆಯನ್ನು ಕೇಂದ್ರ ಸಂಪುಟದಿಂದ ತೆಗೆದುಹಾಕಬೇಕು ಎಂದೂ ಆಗ್ರಹಿಸಿದ್ದಾರೆ.

ಇನ್ನು ತಮ್ಮ ವಿರುದ್ಧ ಮೂರು ಕಡೆಗಳಲ್ಲಿ ಎಫ್​ಐಆರ್​ ದಾಖಲಾದಾಗಲೂ ರಾಣೆ ತಾವೇನೂ ಅಪರಾಧ ಮಾಡಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದರು. ನನ್ನ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು ಗೊತ್ತಿಲ್ಲ. ನಾನು ಸಾಮಾನ್ಯ ವ್ಯಕ್ತಿಯಲ್ಲ..ಅಷ್ಟಕ್ಕೂ ನಾನು ಯಾವುದೇ ಅಪರಾಧ ಮಾಡಿಲ್ಲ. ಹಾಗೇ ಹೇಳುವುದಾದರೆ, ಆಗಸ್ಟ್​ 15, ನಮ್ಮ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಗೊತ್ತಿಲ್ಲದೆ ಇರುವುದೂ ಅಪರಾಧವೇ ಅಲ್ಲವೇ? ನಾನು ಹೊಡೆಯುತ್ತಿದ್ದೆ ಎಂದು ಹೇಳಿದ್ದೇನೆ ಅಷ್ಟೇ..ಇವು ಶಬ್ದಗಳೇ ಹೊರತು ಅಪರಾಧವಲ್ಲ ಎಂದು ರಾಣೆ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: ಕೋವಿಡ್-19 ಮೂರನೇ ಅಲೆ ವಿರುದ್ಧ ಮಕ್ಕಳನ್ನು ರಕ್ಷಿಸಲು ಸರ್ಕಾರಗಳು ಮಾಡಿಕೊಂಡಿರುವ ಏರ್ಪಾಟುಗಳು ಯಾವುದಕ್ಕೂ ಸಾಲದು: ವರದಿ

ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೊಕ್ಕ ವಕೀಲರು

Published On - 4:00 pm, Tue, 24 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ