AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಪಂಜಾಬ್​ ರೈತರ ಜೊತೆ ಕೃಷಿ ಸಚಿವ ತೋಮರ್​ ಭೋಜನ

ದೆಹಲಿಯಲ್ಲಿರುವ ವಿಜ್ಞಾನ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಹಾಗೂ ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಹಾಗೂ ಇಂದು ರೈತರ ಜೊತೆ ಊಟ ಮಾಡಿದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರತಿಭಟನಾ ನಿರತ ಪಂಜಾಬ್​ ರೈತರ ಜೊತೆ ಕೃಷಿ ಸಚಿವ ತೋಮರ್​ ಭೋಜನ
ರೈತ ನಾಯಕರ ಜೊತೆ ಕೇಂದ್ರ ಸಚಿವರು
ರಾಜೇಶ್ ದುಗ್ಗುಮನೆ
|

Updated on:Dec 30, 2020 | 4:19 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸತತ ಐದು ಬಾರಿ ಕೇಂದ್ರ ಸರ್ಕಾರ ರೈತರ ಜೊತೆ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದು ಕೇಂದ್ರದ ಜೊತೆ ಸರ್ಕಾರ ಏಳನೆ ಸುತ್ತಿನ ಮಾತುಕತೆ ನಡೆಸುತ್ತಿದೆ. ಊಟದ ಬಿಡುವಿನ ವೇಳೆ ಕೇಂದ್ರ ಸಚಿವರು ರೈತರ ಜೊತೆ ಊಟ ಮಾಡಿದ್ದು ವಿಶೇಷವಾಗಿತ್ತು.

ದೆಹಲಿಯಲ್ಲಿರುವ ವಿಜ್ಞಾನ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಹಾಗೂ ರೈಲ್ವೆ ಸಚಿವ ಪಿಯೂಷ್​ ಗೋಯಲ್​  ರೈತರ ಜೊತೆ ಊಟ ಮಾಡಿದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೇಂದ್ರ ಸರ್ಕಾರದ ನಡುವೆ 5 ಸಭೆಗಳು ನಡೆದಿವೆ. ಗೃಹ ಸಚಿವ ಅಮಿತ್ ಶಾ ಅವರು ಕೂಡ ಒಮ್ಮೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆಯನ್ನ ನಡೆಸಿದ್ದಾರೆ. ಅವೆಲ್ಲ ವಿಫಲವಾಗಿದ್ದು, ರೈತರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಹೋರಾಟ ನಿರತ ರೈತರ ಬೇಡಿಕೆಗಳು ಏನೇನು..? ಕೇಂದ್ರದ 3 ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದು ಮಾಡಬೇಕು. ಕೃಷಿ ಆಯೋಗದ ಶಿಫಾರಸು ಪ್ರಕಾರ ಕೃಷಿ ಉತ್ಪನ್ನದ ಬೆಂಬಲ ಬೆಲೆ ನೀಡಿಕೆಗೆ ಕಾನೂನು ಬದ್ಧ ಗ್ಯಾರಂಟಿ ನೀಡಬೇಕು. NCR ಹಾಗೂ ಸುತ್ತಲಿನ ಪ್ರದೇಶದ ವಾಯುಗುಣಮಟ್ಟ ನಿರ್ವಹಣೆ ಸುಗ್ರೀವಾಜ್ಞೆಗೆ ತಿದ್ದುಪಡಿ ತರಬೇಕು. ರೈತರಿಗೆ ಈ‌ ಕಾಯಿದೆಯಡಿ ದಂಡವನ್ನು ವಿಧಿಸಬಾರದು. ರೈತರ ಹಿತ ರಕ್ಷಣೆಗೆ ವಿದ್ಯುತ್ ತಿದ್ದುಪಡಿ ಮಸೂದೆ 2020 ಕ್ಕೆ ತಿದ್ದುಪಡಿ ಸೇರಿದಂತೆ ಇತರ ಬೇಡಿಕೆಗಳನ್ನ ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಮೇಲೆ ವಿವರಿಸಿದ 4 ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕೆಂದು ರೈತ ಸಂಘಟನೆಗಳಿಂದ ಅಜೆಂಡಾ ಫಿಕ್ಸ್ ಆಗಿದೆ‌. ಅಜೆಂಡಾವನ್ನ ಕೇಂದ್ರ ಕೃಷಿ ಇಲಾಖೆಗೆ ರವಾನಿಸಿದ್ದಾರೆ. ಇಂದಿನ ಸಭೆಗೂ ಮುನ್ನಾ ಗೃಹ ಸಚಿವ ಅಮಿತ್ ಶಾ ಜೊತೆ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್, ರೇಲ್ವೆ ಸಚಿವ ಪಿಯೂಷ್ ಗೋಯಲ್ ಚರ್ಚೆ ನಡೆಸಿದ್ದಾರೆ‌. ರೈತರ ಮನವೊಲಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಒಟ್ಟಾರೆ ರೈತರು ಹಾಗೂ ಸರ್ಕಾರದ ನಡುವಿನ ಹಗ್ಗಜಗ್ಗಾಟ ಇಂದಿನ ಸಭೆಯ ಬಳಿಕ ಕೊನೆಯಾಗಲಿದೆಯಾ ಅಥವಾ ಮತ್ತೆ ಮುಂದುವರಿಯಲಿದೆಯಾ ಅನ್ನೋದನ್ನ ಕಾದು ನೋಡ್ಬೇಕಿದೆ.

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ: 7ನೇ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧತೆ, ಇಂದಾದರೂ ಈಡೇರುತ್ತಾ ರೈತರ ಬೇಡಿಕೆಗಳು?

Published On - 4:19 pm, Wed, 30 December 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು