AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
TV9 Web
| Edited By: |

Updated on: Jul 25, 2022 | 5:07 PM

Share

ದೆಹಲಿ: ರಾಜಕೀಯ ತೊರೆಯಬೇಕು ಎಂದು ಆಗಾಗ್ಗೆ ಅನಿಸುತ್ತಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari)  ಹೇಳಿದ್ದಾರೆ. ಶನಿವಾರ ಮಹಾರಾಷ್ಟ್ರದ (Maharashtra) ನಾಗ್ಪುರ್​​ನಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಗಡ್ಕರಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ರಾಜಕೀಯ ತ್ಯಜಿಸಿಬಿಡಲೇ ಎಂದು ಪದೇ ಪದೇ ಯೋಚಿಸಿದ್ದೇನೆ. ರಾಜಕೀಯ ಬಿಟ್ಟು ಬೇರೆ ಜೀವನವೂ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಗಡ್ಕರಿ ಹೇಳಿದ್ದಾರೆ. ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ. ಮಾಜಿ ಶಾಸಕರಾಗಿದ್ದ ಗಿರೀಶ್ ಗಾಂಧಿ 2014ರಲ್ಲಿ ಶರದ್ ಪವಾರ್ ಅವರ ಎನ್ ಸಿಪಿಗೆ ಬಿಟ್ಟು ಬಂದಿದ್ದರು. ಇಂದು ನಾವು ರಾಜಕೀಯವೆಂದರೆ ಅಧಿಕಾರ ಎಂದೇ ನೋಡುತ್ತಿದ್ದೇವೆ. ಸಾಮಾಜಿಕ- ಆರ್ಥಿಕವಾಗಿ ಅಭಿವೃದ್ಧಿ ತರಲಿರುವ ಉಪಕರಣವಾಗಿದೆ ರಾಜಕೀಯ. ಆದ್ದರಿಂದಲೇ ಇಂದಿನ ರಾಜಕಾರಣಿಗಳು ಸಮಾಜದಲ್ಲಿ ಶಿಕ್ಷಣ, ಕಲೆ ಮೊದಲಾದವುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದ್ದಾರೆ.

ರಾಜಕೀಯ ಎಂಬ ಪದದ ಅರ್ಥವನ್ನು ನಾವು ತಿಳಿಯಬೇಕು. ಅದು ಸಮಾಜ, ದೇಶದ ಕಲ್ಯಾಣವೇ ಅಥವಾ ಸರ್ಕಾರದ ಭಾಗವಾಗುವುದೇ ಎಂದು ಗಡ್ಕರಿ ಕೇಳಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ