AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಖನಿಜಗಳ ಕುರಿತ ಅಂತರ್ ಸಚಿವಾಲಯದ ಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭಾಗಿ

ಅಪರೂಪದ ಖನಿಜಗಳ ಪೂರೈಕೆ ಸರಪಳಿ ಸುರಕ್ಷಿತಗೊಳಿಸುವ ಮಾರ್ಗಗಳ ಬಗ್ಗೆ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಜೊತೆ ಕೇಂದ್ರ ಕಲ್ಲಿದ್ದಲು ಸಚಿವ ಕಿಶನ್ ರೆಡ್ಡಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ. ಗೌರವಾನ್ವಿತ ಕೇಂದ್ರ ಸಚಿವ ಜೆಚ್​.ಡಿ. ಕುಮಾರಸ್ವಾಮಿ ಮತ್ತು ಪರಮಾಣು ಶಕ್ತಿ, ಉಕ್ಕು, ಭಾರೀ ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವಾಲಯಗಳ ಅಧಿಕಾರಿಗಳೊಂದಿಗೆ ಅಂತರ-ಸಚಿವಾಲಯ ಸಭೆ ನಡೆಸಿದ್ದಾಗಿ ಕಿಶನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ.

ಅಪರೂಪದ ಖನಿಜಗಳ ಕುರಿತ ಅಂತರ್ ಸಚಿವಾಲಯದ ಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭಾಗಿ
Minister Kishan Reddy Meets Hd Kumaraswamy
ಸುಷ್ಮಾ ಚಕ್ರೆ
|

Updated on: Jun 17, 2025 | 6:32 PM

Share

ನವದೆಹಲಿ, ಜೂನ್ 17: ಎಲೆಕ್ಟ್ರಾನಿಕ್ಸ್ ಉದ್ಯಮ, ಇಂಧನ ಮತ್ತು ರಾಷ್ಟ್ರೀಯ ಭದ್ರತೆಗೆ ಅತ್ಯಗತ್ಯವಾದ ಅಪರೂಪದ ಭೂಮಿ ಮತ್ತು ನಿರ್ಣಾಯಕ ಖನಿಜಗಳ ಪೂರೈಕೆ ಸರಪಳಿಗಳನ್ನು ಸುರಕ್ಷಿತಗೊಳಿಸುವ ಅಂಶಗಳ ಕುರಿತು ಇಂದು ನಡೆದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಕಿಶನ್ ರೆಡ್ಡಿ (Kishan Reddy)  ಹಾಗೂ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಚರ್ಚಿಸಿದರು. ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಇಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತು ಕೆಲವು ಕೇಂದ್ರ ಸಚಿವಾಲಯಗಳ ಅಧಿಕಾರಿಗಳೊಂದಿಗೆ ಅಂತರ-ಸಚಿವಾಲಯ ಸಭೆ ನಡೆಸಿದರು. ಈ ವೇಳೆ ಅವರು ಎಲೆಕ್ಟ್ರಾನಿಕ್ಸ್ ಉದ್ಯಮ, ಇಂಧನ ಮತ್ತು ರಾಷ್ಟ್ರೀಯ ಭದ್ರತೆಗೆ ಅತ್ಯಗತ್ಯವಾದ ಅಪರೂಪದ ಭೂಮಿ ಮತ್ತು ನಿರ್ಣಾಯಕ ಖನಿಜಗಳ ಪೂರೈಕೆ ಸರಪಳಿಗಳನ್ನು ಭದ್ರಪಡಿಸುವ ಹಲವಾರು ಅಂಶಗಳ ಕುರಿತು ಚರ್ಚಿಸಿದರು.

ಮೋದಿ ಸರ್ಕಾರವು ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್ (NCMM) ಅನ್ನು ಜಾರಿಗೆ ತಂದಿದೆ ಮತ್ತು ಖನಿಜಗಳಲ್ಲಿ ಭಾರತವನ್ನು “ಆತ್ಮನಿರ್ಭರ”ವನ್ನಾಗಿ ಮಾಡುವತ್ತ ಕೆಲಸ ಮಾಡುತ್ತಿದೆ ಎಂದು ಸಚಿವ ಕಿಶನ್ ರೆಡ್ಡಿ ಹೇಳಿದರು. ಪರಮಾಣು ಶಕ್ತಿ, ಉಕ್ಕು, ಭಾರೀ ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಜಿ7 ಶೃಂಗಸಭೆಗೆ ಪ್ರಧಾನಿ ಮೋದಿಗೆ ಆಹ್ವಾನ; ಕಾಂಗ್ರೆಸ್ ಟೀಕೆಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ತಿರುಗೇಟು

” ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಮತ್ತು ಪರಮಾಣು ಶಕ್ತಿ, ಉಕ್ಕು, ಭಾರೀ ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವಾಲಯಗಳ ಅಧಿಕಾರಿಗಳೊಂದಿಗೆ ಅಂತರ-ಸಚಿವಾಲಯ ಸಭೆ ನಡೆಸಲಾಯಿತು. ಎಲೆಕ್ಟ್ರಾನಿಕ್ಸ್ ಉದ್ಯಮ, ಇಂಧನ ಮತ್ತು ರಾಷ್ಟ್ರೀಯ ಭದ್ರತೆಗೆ ಅತ್ಯಗತ್ಯವಾದ ಅಪರೂಪದ ಭೂಮಿ ಮತ್ತು ನಿರ್ಣಾಯಕ ಖನಿಜಗಳ ಪೂರೈಕೆ ಸರಪಳಿಗಳನ್ನು ಸುರಕ್ಷಿತಗೊಳಿಸುವ ವ್ಯಾಪಕ ಶ್ರೇಣಿಯ ಅಂಶಗಳ ಕುರಿತು ಚರ್ಚಿಸಲಾಯಿತು” ಎಂದು ಕಿಶನ್ ರೆಡ್ಡಿ ಎಕ್ಸ್​ ನಲ್ಲಿನ ಪೋಸ್ಟ್‌ನಲ್ಲಿ ಹೇಳಿದರು.

ನವೆಂಬರ್ 2022ರಲ್ಲಿ ಗಣಿ ಸಚಿವಾಲಯವು ರಚಿಸಿದ ಸಮಿತಿಯು 30 ನಿರ್ಣಾಯಕ ಖನಿಜಗಳನ್ನು ಗುರುತಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?