AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ

Western Australia Kannada Sangha: ಕನ್ನಡ ನಾಡಲ್ಲಿ ಕನ್ನಡ ಕಲಿಸೋದಕ್ಕೆ ರಾಜ್ಯ ಸರಕಾರ ಕಡ್ಡಾಯ ನೀತಿ ಜಾರಿಗೆ ತರಬೇಕಾಗದ ಸ್ಥಿತಿ ಇರುವಾಗ ಆಸ್ಟ್ರೇಲಿಯಾದ ಶಾಲೆಯೊಂದರಲ್ಲಿ ಕನ್ನಡ ಬೋಧನೆ ನಡೆಯುತ್ತಿದೆ, ದ್ವೀಪ ರಾಷ್ಟ್ರದಲ್ಲಿ ಕನ್ನಡದ ಕಲರವ ಕೇಳಿ ಬರುತ್ತಿದೆ ಎಂಬುದು ನಿಜಕ್ಕೂ ಅಭಿಮಾನಪಡುವಂತಹ ವಿಷಯ.

Pralhad Joshi: ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ
ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ
TV9 Web
| Edited By: |

Updated on:Jul 06, 2022 | 2:10 PM

Share

ಪರ್ತ್​, ಜುಲೈ 05: ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದವರು (Western Australia Kannada Sangha) ಕನ್ನಡ ಶಾಲೆಗಳನ್ನು ನಡೆಸುತ್ತಿದ್ದು ರಾಜ್ಯೋತ್ಸವ, ಯುಗಾದಿ, ಸ್ವಾತಂತ್ರ್ಯೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ನಮ್ಮ ಕನ್ನಡಿಗರ ಕನ್ನಡ ಪ್ರೇಮ ನಿಜಕ್ಕೂ ಮೆಚ್ಚುವಂತದ್ದು. ಮಾತ್ರವಲ್ಲ, ಇತರರಿಗೂ ಮಾದರಿ ಎಂದು ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟಿದ್ದಾರೆ. ಇಂದು ಆಸ್ಟ್ರೇಲಿಯಾದ ಪರ್ತ್​ ನಲ್ಲಿರುವ ನಮ್ಮ ಕನ್ನಡಿಗರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದು ಅತ್ಯಂತ ಆತ್ಮೀಯ ಕ್ಷಣ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ (Pralhad Joshi) ಹೇಳಿದ್ದಾರೆ.

ಇಲ್ಲಿ ಎಲ್ಲ ಕಾರ್ಯಕ್ರಮಗಳು ಅತ್ಯಂತ ಕನ್ನಡಮಯವಾಗಿದ್ದು, ಕನ್ನಡನಾಡಿನಲ್ಲಿ ನಡೆದಂತೆ ಆಸ್ಟ್ರೇಲಿಯಾದಲ್ಲೂ ಕನ್ನಡ ಕಾರ್ಯಕ್ರಮಗಳ ನಡೆಸುತ್ತಿರುವದು ಹೆಮ್ಮೆಯ ವಿಷಯ.

ಕನ್ನಡ ನಾಡಲ್ಲಿ ಕನ್ನಡ ಕಲಿಸೋದಕ್ಕೆ ರಾಜ್ಯ ಸರಕಾರ ಕಡ್ಡಾಯ ನೀತಿ ಜಾರಿಗೆ ತರಬೇಕಾಗದ ಸ್ಥಿತಿ ಇರುವಾಗ ಆಸ್ಟ್ರೇಲಿಯಾದ ಶಾಲೆಯೊಂದರಲ್ಲಿ ಕನ್ನಡ ಬೋಧನೆ ನಡೆಯುತ್ತಿದೆ, ದ್ವೀಪ ರಾಷ್ಟ್ರದಲ್ಲಿ ಕನ್ನಡದ ಕಲರವ ಕೇಳಿ ಬರುತ್ತಿದೆ ಎಂಬುದು ನಿಜಕ್ಕೂ ಅಭಿಮಾನಪಡುವಂತಹ ವಿಷಯ. ಬಹುತೇಕ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿಯೂ ಕನ್ನಡ ಸಂಘಟನೆಗಳಿವೆ. ಕನ್ನಡದ ಸಂಸ್ಕೃತಿಯನ್ನು ವಿದೇಶಗಳಲ್ಲಿಯೂ ಪಸರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದಲೂ ಈ ಶಾಲೆ ಕನ್ನಡ ಬೋಧನೆಯನ್ನು ಮಾಡುತ್ತಿದೆ.

ಆಸ್ಟ್ರೇಲಿಯಾದಲ್ಲಿ ಬಹು ಸಂಖ್ಯೆಯಲ್ಲಿ ಕನ್ನಡಿಗರಿದ್ದು, ಕನ್ನಡ ಸೇವೆ ಮಾಡುತ್ತಿದ್ದಾರೆ ಎಂದೂ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡಿಗನಾಗಿರು ಎಂಬ ಕವಿವಾಣಿಯಂತೆ ನಮ್ಮ ಕನ್ನಡಿಗರು ಪ್ರಪಂಚದ ವಿವಿಧ ದೇಶಗಳಲ್ಲಿ ಇದ್ದರೂ ನಮ್ಮ ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಇತರೆ ರಾಷ್ಟ್ರಗಳಲ್ಲಿರುವ ಕನ್ನಡಿಗರ ರಕ್ಷಣೆಗೆ ನಿಂತಿರುವುದು ಶ್ಲ್ಯಾಘನೀಯ. ಇದೇ ರೀತಿ ತಮ್ಮ ಕನ್ನಡ ಸೇವೆ ಮುಂದುವರೆಯಲಿ ಎಂದೂ ಸಚಿವ ಜೋಶಿಯವರು ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರಿಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಕನ್ನಡ ಸಂಘದ ಅಧ್ಯಕ್ಷರು ಮತ್ತು ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Published On - 8:17 pm, Tue, 5 July 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ