AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law – ಪ್ರಲ್ಹಾದ್ ಜೋಶಿ

Sonia Gandhi: ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾಂಗ್ರೆಸ್ ಅಧ್ಯಕ್ಷರೇನು ಸೂಪರ್ ಹ್ಯೂಮನ್ ಬೀಯಿಂಗಾ..? ಅವರು ಕಾನೂನಿಗಿಂತ ಮೇಲಿದ್ದಾರಾ? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law - ಪ್ರಲ್ಹಾದ್ ಜೋಶಿ
ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law - ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Jul 21, 2022 | 3:11 PM

Share

ನವದೆಹಲಿ: ಸೋನಿಯಾ ಗಾಂಧಿ (Sonia Gandhi) ಸೂಪರ್ ಹ್ಯೂಮನ್ ಬೀಯಿಂಗಾ..? ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುವ ಮೂಲಕ ಸದನದ ಕಲಾಪಕ್ಕೆ ಅಡ್ಡಿಪಡಿಸಿದರು.

ಕಾಂಗ್ರೆಸ್ ಸದಸ್ಯರು ಹೀಗೆ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನ ವಿರೋಧಿಸಿ ಮಾತಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಸಲಿಗೇ ಇವರಿಗೆ ಏನು ಬೇಕು? ಈಗ ಸೋನಿಯಾ ಗಾಂಧಿ ಪರ ಪ್ರತಿಭಟಿಸುತ್ತಿರುವವರು ನಿನ್ನೆ ಬೆಲೆ ಏರಿಕೆ ಕುರಿತು ಚರ್ಚೆಗೆ ಒತ್ತಾಯಿಸಿದ್ರು. ಎರಡೂ ಸದನದಗಳ ಸಭಾಧ್ಯಕ್ಷರು ಸ್ವತಃ ಚರ್ಚೆಗೆ ಅವಕಾಶ ನೀಡೋದಾಗಿ ಹಲವು ಬಾರಿ ಭರವಸೆ ನೀಡಿದರು. ಆದರೂ ಸಹ ಪ್ರತಿಪಕ್ಷಗಳು ಸುಗಮವಾಗಿ ಸದನ ನಡೆಸಲು ಸಹಕರಿಸುತ್ತಿಲ್ಲ. ಅವರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ, ಅವರು ಚರ್ಚೆಯಲ್ಲಿ ಭಾಗವಹಿಸಬೇಕು.

ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾಂಗ್ರೆಸ್ ಅಧ್ಯಕ್ಷರೇನು ಸೂಪರ್ ಹ್ಯೂಮನ್ ಬೀಯಿಂಗಾ..? ಅವರು ಕಾನೂನಿಗಿಂತ ಮೇಲಿದ್ದಾರಾ? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ