AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾರನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ; ಎನ್‌ಐಎ ಕಚೇರಿ ವ್ಯಾಪ್ತಿಯನ್ನು ಬೆಂಗಳೂರಿಗೆ ವಿಸ್ತರಿಸಲು ಮನವಿ

ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದಲ್ಲಿನ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋರ ಅಪರಾಧಗಳನ್ನು ಎಸಗಲು ಮಂಗಳೂರಿನಂತಹ ಪ್ರದೇಶಗಳಿಗೆ ಹೇಗೆ ನುಗ್ಗಿವೆ ಎಂಬುದರ ಬಗ್ಗೆ ಶೋಭಾ ಅಮಿತ್ ಶಾರಿಗೆ ವಿವರಿಸಿದ್ದಾರೆ.

ಅಮಿತ್ ಶಾರನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ; ಎನ್‌ಐಎ ಕಚೇರಿ ವ್ಯಾಪ್ತಿಯನ್ನು ಬೆಂಗಳೂರಿಗೆ ವಿಸ್ತರಿಸಲು ಮನವಿ
ಅಮಿತ್ ಶಾ- ಶೋಭಾ ಕರಂದ್ಲಾಜೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 02, 2022 | 6:59 PM

Share

ದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ (Praveen Nettaru murder case) ತನಿಖೆಯನ್ನು ಎನ್‌ಐಎಗೆ (NIA) ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರನ್ನು ಭೇಟಿಯಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ  ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ. ಇದಕ್ಕಿಂತ ಮುಂಚೆ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರಂದ್ಲಾಜೆ ಅವರು ಶಾ ಅವರಿಗೆ ಪತ್ರ ಬರೆದಿದ್ದರು. ಅಮಿತ್ ಶಾ ಅವರನ್ನು ಭೇಟಿಯಾದ ಶೋಭಾ ಕೇರಳದ ಗಡಿಭಾಗ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿದ್ರೋಹಿ  ಚಟುವಟಿಕೆಗಳ ಬಗ್ಗೆ ತಿಳಿಸಿದ್ದಾರೆ . ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದಲ್ಲಿನ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋರ ಅಪರಾಧಗಳನ್ನು ಎಸಗಲು ಮಂಗಳೂರಿನಂತಹ ಪ್ರದೇಶಗಳಿಗೆ ಹೇಗೆ ನುಗ್ಗಿವೆ ಎಂಬುದರ ಬಗ್ಗೆ ಶೋಭಾ ಅಮಿತ್ ಶಾರಿಗೆ ವಿವರಿಸಿದ್ದಾರೆ.

ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆಯನ್ನು ತಡೆಗಟ್ಟಲು ಮತ್ತು ಮಂಗಳೂರಿನಲ್ಲಿ ತ್ವರಿತ ತನಿಖೆಯ ಮೇಲೆ ನಿಗಾ ಇಡಲು ಎನ್‌ಐಎ ಕಚೇರಿ ವ್ಯಾಪ್ತಿಯನ್ನು ಬೆಂಗಳೂರಿಗೆ ವಿಸ್ತರಿಸಲು ಶೋಭಾ ಅಮಿತ್ ಶಾಗೆ ಮನವಿ ಮಾಡಿದರು. ಕೇರಳದ ಸಮೀಪದಲ್ಲಿರುವ ಮಂಗಳೂರು ಇಸ್ಲಾಮಿಸ್ಟ್ ಗಳ ನೆಲವಾಗಿ ಮಾರ್ಪಾಡಾಗತ್ತಿದೆ . ಈ ಹಿಂದೆ ಭದ್ರತಾ ಏಜೆನ್ಸಿಗಳು ಮಂಗಳೂರಿನಿಂದ ಕಾರ್ಯಾಚರಿಸುತ್ತಿರುವ ಸಂಘಟನೆಗಳನ್ನು ಬಿಚ್ಚಿಟ್ಟಿದ್ದವು. ಬೆಂಗಳೂರಿಗೆ ಎನ್ಐಎ ಕಚೇರಿ ವಿಸ್ತರಣೆ ಮಂಗಳೂರಿನಲ್ಲಿ ಜಿಹಾದಿಗಳನ್ನು ಮೊಳಕೆಯಲ್ಲೇ ಚಿವುಟಲು ಸಹಾಯ ಮಾಡುತ್ತದೆ.

Published On - 6:27 pm, Tue, 2 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ