AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 Years of India’s Independence: ಸ್ವಾತಂತ್ರ್ಯದ ಪಯಣ ನೆನಪಿಸುವ ವಸ್ತುಪ್ರದರ್ಶನ ಉದ್ಘಾಟಿಸಿದ ಪ್ರಕಾಶ್ ಜಾವಡೇಕರ್​

ಇದೇ ರೀತಿಯ ವಸ್ತು ಪ್ರದರ್ಶನ ಭಾರತದ ಇತರ ಐದು ನಗರಗಳಲ್ಲಿಯೂ ಉದ್ಘಾಟನೆಗೊಂಡಿದೆ. ಬೆಂಗಳೂರು, ಭುವನೇಶ್ವರ್, ಪಾಟ್ನಾ, ಸಂಬಾ (ಜಮ್ಮು & ಕಾಶ್ಮೀರ) ಹಾಗೂ ಮೊಯ್ರಂಗ್​ನಲ್ಲೂ (ಮಣಿಪುರ) ವಸ್ತುಪ್ರದರ್ಶನ ಉದ್ಘಾಟನೆಗೊಂಡಿದೆ.

75 Years of India's Independence: ಸ್ವಾತಂತ್ರ್ಯದ ಪಯಣ ನೆನಪಿಸುವ ವಸ್ತುಪ್ರದರ್ಶನ ಉದ್ಘಾಟಿಸಿದ ಪ್ರಕಾಶ್ ಜಾವಡೇಕರ್​
ವಸ್ತುಪ್ರದರ್ಶನದ ಉದ್ಘಾಟಿಸಿದ ಪ್ರಕಾಶ್ ಜಾವಡೇಕರ್
TV9 Web
| Edited By: |

Updated on:Apr 06, 2022 | 7:11 PM

Share

ಪುಣೆ: ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು (Azadi ka Amrit Mohotsav) ಈ ಬಾರಿ ದೇಶಾದ್ಯಂತ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದಾರೆ. ಇದರ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದೂ ಮೋದಿ ಹೇಳಿದ್ದಾರೆ. ಅದರಂತೆ ಇಂದು (ಮಾರ್ಚ್ 13) ಪುಣೆಯಲ್ಲಿ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ.

ಪುಣೆಯ ಆಗಾ ಖಾನ್ ಅರಮನೆಯಲ್ಲಿ ಉದ್ಘಾಟನೆಗೊಂಡಿರುವ ವಸ್ತು ಪ್ರದರ್ಶನವು ಮಾರ್ಚ್ 15ರ ತನಕ ನಡೆಯಲಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸ್ವಾತಂತ್ರ್ಯ ಚಳುವಳಿಯ ಬಗ್ಗೆ ವಸ್ತು ಪ್ರದರ್ಶನ ಗೌರವ ಸೂಚಿಸಲಿದೆ. ನಮ್ಮ ದೇಶದ ಸ್ವಾತಂತ್ರ್ಯ ಬಹಳ ಕಷ್ಟಪಟ್ಟು ಪಡೆದಂಥದ್ದು. ತ್ಯಾಗ-ಬಲಿದಾನಗಳ ಮೂಲಕ ಸಿಕ್ಕಿದ್ದು. ಹಾಗಾಗಿ, ಎಲ್ಲರಿಗೂ ಸ್ವಾತಂತ್ರ್ಯದ ಪಯಣ, ಅದರ ಕಷ್ಟಗಳು ಅರ್ಥವಾಗಬೇಕು ಎಂದು ಜಾವಡೇಕರ್ ಹೇಳಿದ್ದಾರೆ.

ಸ್ವಾತಂತ್ರ್ಯ ಭಾರತದ ವಿವಿಧ ಸಾಧನೆಗಳನ್ನು ಪ್ರದರ್ಶನ ಮಾಡುವುದು ಕೂಡ 75ನೇ ಸ್ವಾತಂತ್ರ್ಯ ವರ್ಷದ ಉದ್ದೇಶವಾಗಿದೆ. ಜತೆಗೆ, ಮುಂದಿನ 25 ವರ್ಷಗಳ ಭಾರತದ ಅಭಿವೃದ್ಧಿಯನ್ನು ತೋರಿಸುವುದು. ವಿಶ್ವದ ಮುಂದುವರಿದ ದೇಶವಾಗಿ ಕಾಣಿಸಿಕೊಳ್ಳುವುದು. ಸ್ವರಾಜ್ಯವಾಗಿ ಬೆಳೆಯುವುದು ನಮ್ಮ ಉದ್ದೇಶ ಎಂದು ಈ ಅಂಶಗಳನ್ನು ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಇದೇ ರೀತಿಯ ವಸ್ತು ಪ್ರದರ್ಶನ ಭಾರತದ ಇತರ ಐದು ನಗರಗಳಲ್ಲಿಯೂ ಉದ್ಘಾಟನೆಗೊಂಡಿದೆ. ಬೆಂಗಳೂರು, ಭುವನೇಶ್ವರ್, ಪಾಟ್ನಾ, ಸಂಬಾ (ಜಮ್ಮು & ಕಾಶ್ಮೀರ) ಹಾಗೂ ಮೊಯ್ರಂಗ್​ನಲ್ಲೂ (ಮಣಿಪುರ) ವಸ್ತುಪ್ರದರ್ಶನ ಉದ್ಘಾಟನೆಗೊಂಡಿದೆ.

ಆಗಾ ಖಾನ್ ಅರಮನೆ ಸ್ವಾತಂತ್ರ್ಯ ಚಳುವಳಿಯ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದಿದೆ. ಕ್ವಿಟ್ ಇಂಡಿಯಾ ಚಳುವಳಿ ಪರಿಣಾಮ, 1942ರಲ್ಲಿ ಮಹಾತ್ಮ ಗಾಂಧಿ 21 ತಿಂಗಳುಗಳ ಕಾಲ ಇಲ್ಲಿ ಬಂಧನವನ್ನೂ ಅನುಭವಿಸಿದ್ದಾರೆ. ಅಂಥಾ ಅರಮನೆ ಈಗ ವಸ್ತು ಸಂಗ್ರಹಾಲಯವಾಗಿದೆ.

ಪತ್ರಿಕಾ ಪ್ರಕಟಣೆಯ ಮಾಹಿತಿಯಂತೆ ಕ್ವಿಟ್ ಇಂಡಿಯಾ ಚಳುವಳಿ ಶುರುವಾದ ಸೇವಾಗ್ರಾಮ್, ವಾರ್ಧಾ ಮತ್ತು ಮುಂಬೈ ನಗರಗಳಲ್ಲೂ ಇಂಥಾ ವಸ್ತು ಪ್ರದರ್ಶನ ಆಯೋಜನೆಗೊಳ್ಳಲಿದೆ. ರಾಜ್ಯ ಸರ್ಕಾರಗಳು ಹಾಗೂ ಇತರ ಸಂಸ್ಥೆಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ವಾರಗಳ ಕಾಲ ಈ ಸಮಾರಂಭಗಳು ನಡೆಯಲಿದೆ.

ಇದನ್ನೂ ಓದಿ: 75 Years 0f Indias Independence: ಕಿತ್ತೂರು ಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

75 years of Indias Independence: ಆತ್ಮನಿರ್ಭರ ಭಾರತದ ಮೂಲಕ ಗಾಂಧೀಜಿಯವರ ಕನಸು ನನಸಾಗಿಸೋಣ: ಪ್ರಧಾನಿ ಕರೆ

Published On - 8:28 pm, Sat, 13 March 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ