AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂತ್ರಜ್ಞಾನ ಕ್ಷೇತ್ರದ ಸುಧಾರಣೆಗೆ 6 ಹೊಸ ವೇದಿಕೆಗಳು: ಆವಿಷ್ಕಾರದಿಂದ ಸಂಪತ್ತು ಎಂದ ಕೇಂದ್ರ ಸಚಿವ

ಕ್ಯಾಪಿಟಲ್ ಗೂಡ್ಸ್​ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ಹೂಡಿಕೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದರು.

ತಂತ್ರಜ್ಞಾನ ಕ್ಷೇತ್ರದ ಸುಧಾರಣೆಗೆ 6 ಹೊಸ ವೇದಿಕೆಗಳು: ಆವಿಷ್ಕಾರದಿಂದ ಸಂಪತ್ತು ಎಂದ ಕೇಂದ್ರ ಸಚಿವ
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
TV9 Web
| Edited By: |

Updated on: Jul 02, 2021 | 4:01 PM

Share

ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಆವಿಷ್ಕಾರಗಳಿಗೆ ಹೊಸ ವೇಗ ನೀಡಲೆಂದು 6 ಹೊಸ ವೇದಿಕೆಗಳಿಗೆ ಕೇಂದ್ರ ಭಾರೀ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ, ವಿಜ್ಞಾನ ತಂತ್ರಜ್ಞಾನ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್​ ಶುಕ್ರವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಆವಿಷ್ಕಾರದತ್ತ ನಾವು ಹೆಚ್ಚು ಗಮನ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ. ಯಾವ ದೇಶವು ಆವಿಷ್ಕಾರದತ್ತ ಹೆಚ್ಚು ಗಮನ ನೀಡುತ್ತದೆಯೋ ಅದು ಪ್ರಗತಿ ಸಾಧಿಸುತ್ತದೆ. ಅತ್ಯುನ್ನತ ತಂತ್ರಜ್ಞಾನ (ಹೈ ಎಂಡ್ ಟೆಕ್ನಾಲಜಿ) ಆಧರಿತ ಕ್ಷೇತ್ರಗಳಲ್ಲಿ ಆವಿಷ್ಕಾರಗಳು ಹೆಚ್ಚೆಚ್ಚು ನಡೆಯಬೇಕು. ಆಗ ಮಾತ್ರ ನಮ್ಮ ದೇಶದ ಸಂಪತ್ತು ಹೆಚ್ಚಾಗುತ್ತದೆ. ಆವಿಷ್ಕಾರದಿಂದ ಬುದ್ಧಿವಂತಿಕೆ ಹೆಚ್ಚಾಗುತ್ತದೆಯೇ ಹೊರತು ಖಾಲಿಯಾಗುವುದಿಲ್ಲ. (Brain Gain not Brain Drain) ಎಂದು ಹೇಳಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುವ ಈ ಆರು ವೇದಿಕೆಗಳು ಭಾರತ ಎದುರಿಸುತ್ತಿರುವ ಸಮಸ್ಯೆಗಳಿಗೆ ಮತ್ತು ಇಲ್ಲಿನ ಬದುಕಿನ ಸುಧಾರಣೆಗೆ ಹಲವು ನಿರ್ದಿಷ್ಟ ಪರಿಹಾರಗಳನ್ನು ಸೂಚಿಸಲಿದೆ. ಕ್ಯಾಪಿಟಲ್ ಗೂಡ್ಸ್​ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ಹೂಡಿಕೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದರು.

ಉತ್ಪಾದನೆ, ಬಂಡವಾಳ ವೃದ್ಧಿಸುವ ಸರಕುಗಳು ಮತ್ತು ಸಾರಿಗೆ ಕ್ಷೇತ್ರದ ಸುಧಾರಣೆಗೆ ಮಾತೃಸ್ವರೂಪಿಯಾಗುವಂಥ ತಂತ್ರಜ್ಞಾನಗಳನ್ನು ಈ ವೇದಿಕೆಗಳು ಆವಿಷ್ಕರಿಸುತ್ತವೆ. ಪ್ರಸ್ತುತ ಸನ್ನಿವೇಶ ಮತ್ತು ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ಈ ಆವಿಷ್ಕಾರಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು. ದೇಶದ ಅಭಿವೃದ್ಧಿಗೆ ಅತ್ಯುನ್ನತ ತಂತ್ರಜ್ಞಾನವು ಅತ್ಯಗತ್ಯ. ಆವಿಷ್ಕಾರಗಳ ಮೂಲಕ ರೂಪಿಸಿದ ಉತ್ಪನ್ನಗಳು ದೇಶದ ಸಂಪತ್ತು ಹೆಚ್ಚಿಸುತ್ತದೆ ಎಂದು ಸಚಿವರು ಹೇಳಿದರು.

(Union Minister Prakash Javadekar launches 6 technology innovation platforms)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ