Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂತ್ರಜ್ಞಾನ ಕ್ಷೇತ್ರದ ಸುಧಾರಣೆಗೆ 6 ಹೊಸ ವೇದಿಕೆಗಳು: ಆವಿಷ್ಕಾರದಿಂದ ಸಂಪತ್ತು ಎಂದ ಕೇಂದ್ರ ಸಚಿವ

ಕ್ಯಾಪಿಟಲ್ ಗೂಡ್ಸ್​ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ಹೂಡಿಕೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದರು.

ತಂತ್ರಜ್ಞಾನ ಕ್ಷೇತ್ರದ ಸುಧಾರಣೆಗೆ 6 ಹೊಸ ವೇದಿಕೆಗಳು: ಆವಿಷ್ಕಾರದಿಂದ ಸಂಪತ್ತು ಎಂದ ಕೇಂದ್ರ ಸಚಿವ
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 02, 2021 | 4:01 PM

ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಆವಿಷ್ಕಾರಗಳಿಗೆ ಹೊಸ ವೇಗ ನೀಡಲೆಂದು 6 ಹೊಸ ವೇದಿಕೆಗಳಿಗೆ ಕೇಂದ್ರ ಭಾರೀ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ, ವಿಜ್ಞಾನ ತಂತ್ರಜ್ಞಾನ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್​ ಶುಕ್ರವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಆವಿಷ್ಕಾರದತ್ತ ನಾವು ಹೆಚ್ಚು ಗಮನ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ. ಯಾವ ದೇಶವು ಆವಿಷ್ಕಾರದತ್ತ ಹೆಚ್ಚು ಗಮನ ನೀಡುತ್ತದೆಯೋ ಅದು ಪ್ರಗತಿ ಸಾಧಿಸುತ್ತದೆ. ಅತ್ಯುನ್ನತ ತಂತ್ರಜ್ಞಾನ (ಹೈ ಎಂಡ್ ಟೆಕ್ನಾಲಜಿ) ಆಧರಿತ ಕ್ಷೇತ್ರಗಳಲ್ಲಿ ಆವಿಷ್ಕಾರಗಳು ಹೆಚ್ಚೆಚ್ಚು ನಡೆಯಬೇಕು. ಆಗ ಮಾತ್ರ ನಮ್ಮ ದೇಶದ ಸಂಪತ್ತು ಹೆಚ್ಚಾಗುತ್ತದೆ. ಆವಿಷ್ಕಾರದಿಂದ ಬುದ್ಧಿವಂತಿಕೆ ಹೆಚ್ಚಾಗುತ್ತದೆಯೇ ಹೊರತು ಖಾಲಿಯಾಗುವುದಿಲ್ಲ. (Brain Gain not Brain Drain) ಎಂದು ಹೇಳಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುವ ಈ ಆರು ವೇದಿಕೆಗಳು ಭಾರತ ಎದುರಿಸುತ್ತಿರುವ ಸಮಸ್ಯೆಗಳಿಗೆ ಮತ್ತು ಇಲ್ಲಿನ ಬದುಕಿನ ಸುಧಾರಣೆಗೆ ಹಲವು ನಿರ್ದಿಷ್ಟ ಪರಿಹಾರಗಳನ್ನು ಸೂಚಿಸಲಿದೆ. ಕ್ಯಾಪಿಟಲ್ ಗೂಡ್ಸ್​ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಮೊತ್ತದ ಹೂಡಿಕೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದರು.

ಉತ್ಪಾದನೆ, ಬಂಡವಾಳ ವೃದ್ಧಿಸುವ ಸರಕುಗಳು ಮತ್ತು ಸಾರಿಗೆ ಕ್ಷೇತ್ರದ ಸುಧಾರಣೆಗೆ ಮಾತೃಸ್ವರೂಪಿಯಾಗುವಂಥ ತಂತ್ರಜ್ಞಾನಗಳನ್ನು ಈ ವೇದಿಕೆಗಳು ಆವಿಷ್ಕರಿಸುತ್ತವೆ. ಪ್ರಸ್ತುತ ಸನ್ನಿವೇಶ ಮತ್ತು ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ಈ ಆವಿಷ್ಕಾರಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು. ದೇಶದ ಅಭಿವೃದ್ಧಿಗೆ ಅತ್ಯುನ್ನತ ತಂತ್ರಜ್ಞಾನವು ಅತ್ಯಗತ್ಯ. ಆವಿಷ್ಕಾರಗಳ ಮೂಲಕ ರೂಪಿಸಿದ ಉತ್ಪನ್ನಗಳು ದೇಶದ ಸಂಪತ್ತು ಹೆಚ್ಚಿಸುತ್ತದೆ ಎಂದು ಸಚಿವರು ಹೇಳಿದರು.

(Union Minister Prakash Javadekar launches 6 technology innovation platforms)

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ