AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರಳೆ ಹಣ್ಣು ಮಾರುವವರಿಗೂ ಜಿಎಸ್​ಟಿ ನೋಟಿಸ್; ಕರ್ನಾಟಕ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಆರೋಪ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 1.2 ಲಕ್ಷ ಕೋಟಿ ರೂ. ವಸೂಲಿಗೆ ಅಧಿಕಾರಿಗಳಿಗೆ ಟಾರ್ಗೆಟ್‌ ನೀಡಲಾಗಿದೆ ಎಂದು ಆರೋಪಿಸಿರುವ ಅವರು ನೇರಳೆ ಹಣ್ಣು ಮಾರುವವರಿಗೂ ಜಿಎಸ್‌ಟಿ ನೋಟಿಸ್‌ ನೀಡಲಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅತ್ಯಂತ ಅಯೋಗ್ಯ ರೀತಿಯಲ್ಲಿ ಕರ್ನಾಟಕದಲ್ಲಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ನೇರಳೆ ಹಣ್ಣು ಮಾರುವವರಿಗೂ ಜಿಎಸ್​ಟಿ ನೋಟಿಸ್; ಕರ್ನಾಟಕ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಆರೋಪ
Pralhad Joshi
ಸುಷ್ಮಾ ಚಕ್ರೆ
|

Updated on: Jul 23, 2025 | 10:56 PM

Share

ನವದೆಹಲಿ, ಜುಲೈ 23: ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಯಾವುದೇ ಮೂಲಗಳಿಂದಾದರೂ ಸರಿ 1.2 ಲಕ್ಷ ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ಟಾರ್ಗೆಟ್‌ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಟಾರ್ಗೆಟ್‌ ನೀಡಿದ್ದರ ಪರಿಣಾಮದಿಂದಲೇ ರಾಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್‌ ನೀಡಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಹಣದ ದಾಹದಲ್ಲಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರ ಮಾರುಕಟ್ಟೆಯಲ್ಲಿ ಮಾವಿನ ಹಣ್ಣು-ನೇರಳೆ ಹಣ್ಣು ಮಾರುವವರಿಗೂ ಜಿಎಸ್​ಟಿ ನೋಟಿಸ್‌ ಕೊಟ್ಟಿದೆ. ಇದು ಅಯೋಗ್ಯ ಸರ್ಕಾರವಲ್ಲವೇ? ಇವರಿಗೆ ನಾಚಿಕೆ ಆಗುವುದಿಲ್ಲವೇ? ಎಂದು ಸಿದ್ದರಾಮಯ್ಯನವರ ವಿರುದ್ಧ ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿ ಅತ್ಯಂತ ಕೆಟ್ಟ, ಅಯೋಗ್ಯ ಸರ್ಕಾರ ನಡೆಸುತ್ತಿದ್ದಾರೆ. ಲಂಚ ತೆಗೆದುಕೊಂಡು ಜನರನ್ನು ಅಡ್ಡ ದಾರಿಗೆಳೆಯುವ ಕೆಲಸ ಮಾಡುತ್ತಿದೆ ಈ ಸರ್ಕಾರ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ಕೇವಲ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದರು: ಪ್ರಲ್ಹಾದ್ ಜೋಶಿ

ಜಿಎಸ್‌ಟಿ‌ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರಗಳೇ ಮಹತ್ವದ ಪಾತ್ರ ವಹಿಸುತ್ತವೆ. ರಾಜ್ಯ ಸರ್ಕಾರಕ್ಕೆ 3ನೇ ಎರಡು ಭಾಗದಷ್ಟು ಅಧಿಕಾರವಿದ್ದರೆ, ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿರುತ್ತದೆ. ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರುತ್ತದೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಬರೀ ಸುಳ್ಳು ಹೇಳುತ್ತಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಖಂಡಿಸಿದರು.

ಪ್ರಧಾನ ಮಂತ್ರಿ ಸಭೆ ಕರೆದರೂ ಸಿಎಂ ಸಿದ್ದರಾಮಯ್ಯ ಬರುವುದಿಲ್ಲ, ನೀತಿ ಆಯೋಗದ ಸಭೆಗೂ ಹಾಜರಾಗುವುದಿಲ್ಲ. ಜಿಎಸ್‌ಟಿ ಕೌನ್ಸಿಲ್‌ಗೂ ಬರುವುದಿಲ್ಲ. ಮಂತ್ರಿಗಳನ್ನು ಕಳಿಸಿಕೊಡುವ ಸಿಎಂ ಸಿದ್ದರಾಮಯ್ಯ ಬರೀ ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ. ಸುಳ್ಳು ಹೇಳಲು ಇವರಿಗೆ ಮಿತಿಯೇ ಇಲ್ಲ ಎಂದು ಜೋಶಿ ಆರೋಪಿಸಿದರು.

ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದ ಜೋಶಿ

ಕರ್ನಾಟಕದಲ್ಲಿ ಇರುವುದಕ್ಕಿಂತ ದೊಡ್ಡ ದೊಡ್ಡ ನಗರಗಳು ಮಾಹಾರಾಷ್ಟ್ರದಲ್ಲಿವೆ. ಮುಂಬೈ, ಪುಣೆ, ನಾಗ್ಪುರದಂತಹ ಬೃಹತ್‌ ವಾಣಿಜ್ಯ ನಗರಗಳಿವೆ. ಅಲ್ಲೆಲ್ಲೂ ಇಲ್ಲದ ಜಿಎಸ್‌ಟಿ ನೋಟಿಸ್‌ ನಮ್ಮ ರಾಜ್ಯದಲ್ಲಷ್ಟೇ ಏಕೆ? ಎಂದು ಪ್ರಶ್ನಿಸಿರುವ ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸರ್ಕಾರ ಮಾಡುವುದೆಲ್ಲವನ್ನೂ ಮಾಡಿ ಈಗ ಕೇಂದ್ರದ ಮೇಲೆ ಹಾಕಲು ಹೊರಟಿದೆ ಎಂದು ಖಂಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!