AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ SDPI, PFI ಲಿಂಕ್ ಶಂಕೆ, ಅದಕ್ಕೆ ಕರ್ನಾಟಕ ಕಾಂಗ್ರೆಸ್ ಪ್ರೋತ್ಸಾಹ -ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ

Pralhad Joshi: ಕಾಂಗ್ರೆಸ್ ಪಿಎಫ್ಐ ಗೆ ಪ್ರೋತ್ಸಾಹ ನೀಡುತ್ತಿದೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ SDPI, PFI ಲಿಂಕ್ ಶಂಕೆ, ಅದಕ್ಕೆ ಕರ್ನಾಟಕ ಕಾಂಗ್ರೆಸ್ ಪ್ರೋತ್ಸಾಹ -ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ
ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ SDPI, PFI ಲಿಂಕ್ ಶಂಕೆ, ಕರ್ನಾಟಕ ಕಾಂಗ್ರೆಸ್ ನಿಂದ SDPI, PFI ಗೆ ಪ್ರೋತ್ಸಾಹ -ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ
TV9 Web
| Updated By: ಸಾಧು ಶ್ರೀನಾಥ್​|

Updated on:Jul 27, 2022 | 3:41 PM

Share

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿಂದು ಪ್ರತಿಕ್ರಿಯೆ ನೀಡಿರುವ ಪ್ರಲ್ಹಾದ ಜೋಶಿ, ಪ್ರಕರಣದ ಕುರಿತ ಆರಂಭಿಕ ವರದಿಗಳು ಮತ್ತು ಕೆಲವು ಮಾಧ್ಯಮ ವರದಿಗಳು SDPI ಮತ್ತು PFI ಲಿಂಕ್‌ಗಳಿರೋದನ್ನ ಸೂಚಿಸುತ್ತಿದೆ. ಕೇರಳದಲ್ಲಿ ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ (Karnataka Congress) ಕೂಡಾ ಇಂಥವರನ್ನ ಪ್ರೋತ್ಸಾಹಿಸುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿ.ಎಫ್.ಐ ಕಾರ್ಯಕರ್ತರ ಮೇಲಿನ ಕೇಸುಗಳನ್ನೆಲ್ಲ ಹಿಂಪಡೆದರು. ಈ ರೀತಿ ಕಾಂಗ್ರೆಸ್ ಪಿಎಫ್ಐ ಗೆ ಪ್ರೋತ್ಸಾಹ ನೀಡುತ್ತಿದೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಕೇಂದ್ರ ಸಚಿವ ಜೋಶಿ ವಿಡಿಯೋ ಹೇಳಿಕೆ

ಇದೇ ವೇಳೆ ಪ್ರವೀಣ್ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ದುಷ್ಕರ್ಮಿಗಳು ನಡೆಸಿದ ದಾಳಿಯಿಂದ ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ‌. ಈ ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಬೇಕು. ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವ ವಿಶ್ವಾಸವನ್ನು ಪ್ರಲ್ಹಾದ್ ಜೋಶಿ ಅವರು ವ್ಯಕ್ತಪಡಿಸಿದರು.

ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಕೋರಿದ ಸಚಿವರು, ಪ್ರವೀಣ್ ಕುಟುಂಬಕ್ಕೆ ದುಃಖ ನೀಗಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Published On - 1:47 pm, Wed, 27 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?