AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ವಿಧಾನಸಭೆ ಚುನಾವಣೆ 2023 – ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ

ಇದರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹೆಗಲಿಗೆ ವರಿಷ್ಠರು ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಿದಂತಾಗಿದೆ. ಕಳೆದ ಬಾರಿ ಉತ್ತರಾಖಂಡದ ಜವಾಬ್ದಾರಿ ಹೊತ್ತಿದ್ದ ಪ್ರಲ್ಹಾದ ಜೋಶಿಯವರು ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

Pralhad Joshi: ವಿಧಾನಸಭೆ ಚುನಾವಣೆ 2023 - ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ
ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 07, 2023 | 10:49 PM

Share

ನವದೆಹಲಿ : ಕಳೆದ ವರ್ಷ ಉತ್ತರಾಖಂಡದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇದೀಗ ಮತ್ತೊಮ್ಮೆ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಪ್ರಲ್ಹಾದ ಜೋಶಿಯವರಿಗೆ ರಾಜಸ್ಥಾನ ರಾಜ್ಯದ ಉಸ್ತುವಾರಿ (Rajasthan Assembly Elections 2023) ಜವಾಬ್ದಾರಿ ನೀಡಲಾಗಿದೆ.

ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ದವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಾಲ್ವರು ಪ್ರಮುಖ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ಅಧಿಕೃತ ಹೇಳಿಕೆಯನ್ನು ಪ್ರಕಟಿಸಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಭೂಪೇಂದ್ರ ಯಾದವ್ ಅವರನ್ನು​ ಕ್ರಮವಾಗಿ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ನೇಮಿಸಿದೆ.

ಕಳೆದ ವರ್ಷದ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಪ್ರಲ್ಹಾದ್​ ಜೋಶಿ ಅವರನ್ನು ಉಸ್ತುವಾರಿಯನ್ನಾಗಿ ಮಾಡಿದ್ದ ಸಮಯದಲ್ಲೇ ಪಕ್ಷ ಅಧಿಕಾರವನ್ನು ಪಡೆದುಕೊಂಡಿತು. ಜೋಶಿ, ಭೂಪೇಂದ್ರ ಯಾದವ್​ ನಂತರ ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್​ ಮತ್ತು ಓಂ ಪ್ರಕಾಶ್ ಮಾಥುರ್​​​ ಅವರನ್ನು ಕ್ರಮವಾಗಿ ತೆಲಂಗಾಣ, ಛತ್ತೀಸಗಢ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಇದರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹೆಗಲಿಗೆ ವರಿಷ್ಠರು ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಿದಂತಾಗಿದೆ. ಕಳೆದ ಬಾರಿ ಉತ್ತರಾಖಂಡದ ಜವಾಬ್ದಾರಿ ಹೊತ್ತಿದ್ದ ಪ್ರಲ್ಹಾದ ಜೋಶಿಯವರು ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅದೇ ನಿರೀಕ್ಷೆಯೊಂದಿಗೆ ಬಿಜೆಪಿ ವರಿಷ್ಠ ನಾಯಕರು ಜೋಶಿಯವರಿಗೆ ರಾಜಸ್ಥಾನದ ಉಸ್ತುವಾರಿ ನೀಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Fri, 7 July 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ