AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Mallikarjun Kharge: ಖರ್ಗೆ ಅವರ ಹಿರಿತನ ಮತ್ತು ಅವರ ಸ್ಥಾನವನ್ನ ಪರಿಗಣಿಸಿ ಮೊದಲನೇ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಕಲ್ಪಿಸಿಕೊಡಲಾಗಿತ್ತು - ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಕಾಂಗ್ರೆಸ್  ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
TV9 Web
| Edited By: |

Updated on: Jul 25, 2022 | 7:12 PM

Share

ನೂತನ ರಾಷ್ಟ್ರಪತಿ ಮುರ್ಮು ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ, ಕಾಂಗ್ರೆಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ( Union Minister of Parliamentary Affairs Minister Pralhad Joshi) ಸ್ಪಷ್ಟಪಡಿಸಿದ್ದಾರೆ. ಇಂದು ನಡೆದ ರಾಷ್ಟ್ರಪತಿ ಪದಗ್ರಹಣದ ಕಾರ್ಯಕ್ರಮದಲ್ಲಿ (Draupadi Murmu Oath Taking) ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ (Mallikarjun Kharge) ಸರಿಯಾದ ಆಸನ ವ್ಯವಸ್ಥೆ ಮಾಡಿರಲಿಲ್ಲ ಎಂದು (Seating Row) ಕಾಂಗ್ರೆಸ್ ಆರೋಪಿಸಿತ್ತು. ಈ ಬಗ್ಗೆ ರಾಜ್ಯಸಭಾ ಸಭಾಪತಿ ಅವರಿಗೆ ಕಾಂಗ್ರೆಸ್ ಸಂಸದರು ಪತ್ರ ಬರೆದಿದ್ದರು.

ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಪ್ರಲ್ಹಾದ್ ಜೋಶಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಅವರಿಗೆ ಶಿಷ್ಟಾಚಾರದ ಪ್ರಕಾರ ಅಪಮಾನ ಆಗಿಲ್ಲ ಎಂದಿದ್ದಾರೆ. ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ ಕೇಂದ್ರ ಸರ್ಕಾರದ ಎಲ್ಲ ಕ್ಯಾಬಿನೆಟ್ ಸಚಿವರ ಆಸನದ ಬಳಿಕ ವಿರೋಧ ಪಕ್ಷದ ನಾಯಕರಿಗೆ ಆಸನ ಕಲ್ಪಿಸಬೇಕು ಅಂತಿದೆ. ಆ ಪ್ರಕಾರ ಆಸನ ಕಲ್ಪಿಸುವುದಾದರೆ ಖರ್ಗೆ ಅವರಿಗೆ ಮೂರನೇ ಸಾಲಿನಲ್ಲಿ ಆಸನ ದೊರೆಯುತ್ತಿತ್ತು, ಆದರೆ ಖರ್ಗೆ ಅವರ ಹಿರಿತನ ಮತ್ತು ಅವರ ಸ್ಥಾನವನ್ನ ಪರಿಗಣಿಸಿ ಮೊದಲನೇ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಕಲ್ಪಿಸಿಕೊಡಲಾಗಿತ್ತು.

ಮೊದಲನೇ ಸಾಲಿನಲ್ಲಿಯೂ ಕಾರ್ನರ್ ನಲ್ಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು, ತಕ್ಷಣ ನಮ್ಮ ಅಧಿಕಾರಿಗಳು ಮೊದಲನೇ ಸಾಲಿನ ಸೆಂಟರ್ ನಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು, ಆದರೆ ಖರ್ಗೆ ಅವರು ಅಧಿಕಾರಿಗಳ ಮನವಿಯನ್ನ ನಿರಾಕರಿಸಿದ್ದರು.

ಇನ್ನು ಕಳೆದ ಶನಿವಾರ ಲೋಕಸಭೆ ಹಾಗು ರಾಜ್ಯಸಭೆ ವತಿಯಿಂದ ಸೆರ್ಮನಿಯಲ್ಲಿ ಖರ್ಗೆ ಅವರಿಗೆ ಪ್ರಧಾನಿ ಅವರ ಪಕ್ಕದಲ್ಲಿಯೇ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಬೇರೆಯಾಗಿರುತ್ತೆ, ಏಕೆಂದರೆ ಈ ಕಾರ್ಯಕ್ರಮವನ್ನ ಸಂಸದೀಯ ಇಲಾಖೆ ನಡೆಸುವುದರಿಂದ ಆಸನದ ವ್ಯವಸ್ಥೆ ಕಲ್ಪಿಸುವುದು ನಮ್ಮ ಇಲಾಖೆಗೆ ಬಿಟ್ಟಿದ್ದಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಪಕ್ಕದಲ್ಲಿಯೇ ಆಸನ ಕಲ್ಪಿಸಿದ್ದರು ಖರ್ಗೆ ಅವರು ಅಂದು ಗೈರುಹಾಜರಾಗಿದ್ದರು ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ