ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ
ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.

ನವದೆಹಲಿ : ಇಂದು ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣದ (President speech) ಮೇಲಿನ ಚರ್ಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಉತ್ತರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.
ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿಯವರು, ವಿಪಕ್ಷಗಳು ಸದನದಲ್ಲಿ ನಿರಂತರವಾಗಿ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಇದು ಸದನದ ಘನತೆಗೆ ತಕ್ಕುದಲ್ಲ. ಸದನದ ನಿಯಮಾವಳಿ ಪ್ರಕಾರ ವಿಪಕ್ಷಗಳು ಚರ್ಚೆ ನಡೆಸಬೇಕು ಅಂತ ನಿಯಮಗಳನ್ನು ಉಲ್ಲೇಖಿಸುವ ಮೂಲಕವೇ ಪ್ರಲ್ಹಾದ ಜೋಶಿಯವರು ಹೇಳಿದರು.ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.
Watch for PM Shri @narendramodi ji’s blue jacket today in the Parliament. The jacket has been made with recycled PET bottles.
Modi ji doesn’t just walk the talk, he also leads from the front. A superb way to promote climate consciousness. pic.twitter.com/2tFtRWBDV3
— Pralhad Joshi (@JoshiPralhad) February 8, 2023
ಪ್ರತಿಪಕ್ಷದ ನಾಯಕರು ಸಂಸತ್ತಿನಲ್ಲಿ ಮಾಡಿರುವ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಸದನದ ಕಲಾಪದ ಕಡತದಿಂದ ತೆಗೆದುಹಾಕಬೇಕು. ಇದು ರೆಕಾರ್ಡ್ಸ್ ಗೆ ಹೋಗಬಾರದು ಎಂದು ಸಭಾಧ್ಯಕ್ಷರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ಅಲ್ಲದೇ ಸುಳ್ಳು ಆರೋಪ ಮಾಡಿದವರ ವಿರುದ್ಧ, ಸಭಾಧ್ಯಕ್ಷರು ವಿಶೇಷಾಧಿಕಾರ ನಿರ್ಣಯದ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಒತ್ತಾಯಿಸಿದರು.