AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ​ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ: ಪ್ರಲ್ಹಾದ್ ಜೋಶಿ

ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯ ಚಕ್ರವ್ಯೂಹ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ಚಕ್ರವ್ಯೂಹ ರಚನೆಯಾಗುತ್ತಿದೆ ಆದರೆ ಕಾಂಗ್ರೆಸ್​ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದ್ದಾರೆ. ಎಎನ್​ಐ ಜತೆ ಮಾತನಾಡಿರುವ ಜೋಶಿ, ಇದನ್ನು ಡ್ರಾಮಾಬಾಜಿ ಎಂದು ಕರೆದಿದ್ದಾರೆ, 60 ವರ್ಷಗಳ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಗಲು ಇದೆಲ್ಲವನ್ನೂ ಹೇಳುತ್ತಿದ್ದಾರೆ.

ಕಾಂಗ್ರೆಸ್​ನ​ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ನಯನಾ ರಾಜೀವ್
|

Updated on: Jul 30, 2024 | 12:30 PM

Share

ಲೋಕಸಭೆಯ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಅವರ ಚಕ್ರವ್ಯೂಹ(Chakravyuh) ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಕ್ರವ್ಯೂಹ ರಚನೆಯಾಗುತ್ತಿದೆ ಆದರೆ ಕಾಂಗ್ರೆಸ್​ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದ್ದಾರೆ. ಎಎನ್​ಐ ಜತೆ ಮಾತನಾಡಿರುವ ಜೋಶಿ, ಇದನ್ನು ಡ್ರಾಮಾಬಾಜಿ ಎಂದು ಕರೆದಿದ್ದಾರೆ, 60 ವರ್ಷಗಳ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಗಲು ಇದೆಲ್ಲವನ್ನೂ ಹೇಳುತ್ತಿದ್ದಾರೆ.

ರಾಹುಲ್ ಗಾಂಧಿ ಹಾಗೂ ಅವರ ತಾಯಿ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ಏಕೆ ಹರಿದುಹಾಕಿದರು, ಈಗ ಏಕೆ ನಾಟಕವಾಡುತ್ತಿದ್ದಾರೆ. ತಮ್ಮ ಸರ್ಕಾರದಲ್ಲಿ ಮಾಡಿದ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಇದು ಎಂದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ, ದೇಶವು ಈಗ ಕಮಲದ ಚಕ್ರವ್ಯೂಹದಲ್ಲಿ ಸಿಲುಕಿದೆ, 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ ಎಂದು ದೂರಿದ್ದರು.

ಮತ್ತಷ್ಟು ಓದಿ: 6 ಜನ ರಚಿಸಿರುವ ‘ಚಕ್ರವ್ಯೂಹ’ದಲ್ಲಿ ಆಧುನಿಕ ಭಾರತ ಸಿಲುಕಿದೆ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಅಭಿಮನ್ಯುವಿಗೆ ಮಾಡಿದ್ದನ್ನು ಇಂದು ಇಡೀ ಭಾರತ- ಯುವಜನರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೂ ಮಾಡಲಾಗುತ್ತಿದೆ. ಅಂದು ದ್ರೋಣಾಚಾರ್ಯ, ಕರ್ಣ, ಕೃಪಾಚಾರ್ಯ, ಕೃತವರ್ಮ, ಅಶ್ವತ್ಥಾಮ ಮತ್ತು ಶಕುನಿ ಇದ್ದಂತೆ, ಇಂದು ಕೂಡ ಚಕ್ರವ್ಯೂಹದ ಕೇಂದ್ರದಲ್ಲಿ ಆರು ವ್ಯಕ್ತಿಗಳಿದ್ದಾರೆ- ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಎಂದು ಹೇಳಿದರು.

ಇದಕ್ಕೆ ಸ್ಪೀಕರ್ ಓಂ ಬಿರ್ಲಾ ಅವರ ಮಧ್ಯಪ್ರವೇಶದ ನಂತರ, ನೀವು ಬಯಸಿದರೆ, ನಾನು ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಅವರ ಹೆಸರನ್ನು ಬಿಟ್ಟುಬಿಡುತ್ತೇನೆ ಮತ್ತು ಕೇವಲ 3 ಹೆಸರುಗಳನ್ನು ತೆಗೆದುಕೊಳ್ಳುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್