ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಗೆ ಸ್ವಾಗತಿಸಿದ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಇಳಯರಾಜ ಭೇಟಿಯಾಗಿ, ಮಾತುಕತೆ ನಡೆಸಿದರು.

ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಗೆ ಸ್ವಾಗತಿಸಿದ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ
ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಗೆ ಸ್ವಾಗತಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Updated By: ಸಾಧು ಶ್ರೀನಾಥ್​

Updated on: Jul 25, 2022 | 5:05 PM

ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು (Rajya Sabha) ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರನ್ನ ಭೇಟಿಯಾದ ಇಳಯರಾಜ (Musician Ilaiyaraaja) ಮಾತುಕತೆ ನಡೆಸಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.

Also Read: ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ : ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಕೇಂದ್ರ ಸಚಿವ ಜೋಶಿ ಕಾಳಜಿಗೆ ಸಿಎಂ ಬೊಮ್ಮಾಯಿ ಸ್ಪಂದನೆ

ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Published On - 4:34 pm, Mon, 25 July 22