AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajeev Chandrasekhar: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವಿಟರ್ ಖಾತೆಯ ಬ್ಲ್ಯೂಟಿಕ್​ ಬ್ಯಾಡ್ಜ್​ ಮಾಯ..; ಕಾರಣ ಸ್ಪಷ್ಟಪಡಿಸಿದ ಟ್ವಿಟರ್​

ಸದ್ಯ ಭಾರತದಲ್ಲಿ ಕೇಂದ್ರ ಸರ್ಕಾರದ ಐಟಿ ನಿಯಮಗಳ ಪಾಲನೆ ಸಂಬಂಧಪಟ್ಟು ಟ್ವಿಟರ್​ ಮತ್ತು ಕೇಂದ್ರದ ನಡುವೆ ಕೆಲವು ತಿಕ್ಕಾಟಗಳು ನಡೆಯುತ್ತಿವೆ. ಟ್ವಿಟರ್ ಇಂಡಿಯಾದ ಕುಂದುಕೊರತೆ ಸ್ಥಾನಿಕ ಅಧಿಕಾರಿಯನ್ನಾಗಿ ಟ್ವಿಟರ್​ ವಿನಯ್​ ಪ್ರಕಾಶ್​ ಅವರನ್ನು ನಿನ್ನೆಯಷ್ಟೇ ನೇಮಕ ಮಾಡಿದೆ.

Rajeev Chandrasekhar: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವಿಟರ್ ಖಾತೆಯ ಬ್ಲ್ಯೂಟಿಕ್​ ಬ್ಯಾಡ್ಜ್​ ಮಾಯ..; ಕಾರಣ ಸ್ಪಷ್ಟಪಡಿಸಿದ ಟ್ವಿಟರ್​
ರಾಜೀವ್ ಚಂದ್ರಶೇಖರ್
TV9 Web
| Edited By: |

Updated on: Jul 12, 2021 | 3:14 PM

Share

ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಆರ್​ಎಸ್​ಎಸ್​ನ ಕೆಲವು ಮುಖಂಡರ ಟ್ವಿಟರ್ (Twitter) ಖಾತೆಯ ದೃಢೀಕರಣ ಬ್ಯಾಡ್ಜ್​ ಬ್ಲ್ಯೂಟಿಕ್​ನ್ನು ತೆಗೆದು ಹಾಕುವ ಮೂಲಕ ಟ್ವಿಟರ್​ ವಿವಾದ ಸೃಷ್ಟಿಸಿತ್ತು. ಇದೀಗ ನೂತನ ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​​ ( Rajeev Chandrasekhar) ಅವರ ಖಾತೆಯ ಬ್ಲ್ಯೂಟಿಕ್ (blue tick) ​ನ್ನು ಟ್ವಿಟರ್​ ತೆಗೆದು ಹಾಕಿದೆ. ವಿದ್ಯುತ್​ – ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ರಾಜ್ಯ ಖಾತೆ ಸಚಿವ ರಾಜೀವ್​ ಚಂದ್ರಶೇಖರ್​ ಅವರ ಟ್ವಿಟರ್​ ಅಕೌಂಟ್​ನಲ್ಲಿ ಹೆಸರು ಬದಲಾವಣೆ ಆಗಿರುವ ಕಾರಣಕ್ಕೆ ನೀಲಿ ಟಿಕ್​​ನ್ನು ತೆಗೆದಿದ್ದಾಗಿ ಟ್ವಿಟರ್​ ಸ್ಪಷ್ಟನೆ ನೀಡಿದೆ.

ಇಷ್ಟುದಿನ ರಾಜ್ಯ ಸಭಾ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್​ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದು ಕೇಂದ್ರ ಮಂತ್ರಿಯಾಗಿದ್ದಾರೆ. ಈ ಹಿಂದೆ ಅವರು Rajeev MP ಹೆಸರಿನಲ್ಲಿ ಟ್ವಿಟರ್​ ಅಕೌಂಟ್​ ಹೊಂದಿದ್ದರು. ಆದರೀಗ Rajeev_GOI ಎಂದು ಹೆಸರು ಬದಲಿಸಿಕೊಂಡಿದ್ದಾರೆ.

ಟ್ವಿಟರ್​ನ ದೃಢೀಕರಣ ನೀತಿ ಅನ್ವಯ ಯಾವುದೇ ಬಳಕೆದಾರ ಬ್ಲ್ಯೂಟಿಕ್​ ಪಡೆಯುವಾಗ ಇರುವ ಹೆಸರನ್ನು ಮಧ್ಯದಲ್ಲಿ ಯಾವಾಗಲಾದರೂ ಬದಲಿಸಿದರೆ ಕೂಡಲೇ ಟ್ವಿಟರ್​ ಅವರಿಗೆ ನೀಡಲಾದ ಬ್ಲ್ಯೂಟಿಕ್​ ಬ್ಯಾಡ್ಜ್​​ನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲ, ಬ್ಲ್ಯೂಟಿಕ್​ ಬ್ಯಾಡ್ಜ್​ ಪಡೆದ ಬಳಕೆದಾರರ ಖಾತೆಗಳು ಸದಾ ಸಕ್ರಿಯವಾಗಿ ಇರಬೇಕಾಗುತ್ತದೆ. ಹಾಗೊಮ್ಮೆ ಆರು ತಿಂಗಳ ಕಾಲ ನಿಷ್ಕ್ರಿಯವಾದರೆ ಅವರ ಅಕೌಂಟ್​​ಗೆ ನೀಡಲಾಗಿದ್ದ ಬ್ಲ್ಯೂಟಿಕ್​​ನ್ನು ತೆಗೆದುಹಾಕುತ್ತದೆ.

ಸದ್ಯ ಭಾರತದಲ್ಲಿ ಕೇಂದ್ರ ಸರ್ಕಾರದ ಐಟಿ ನಿಯಮಗಳ ಪಾಲನೆ ಸಂಬಂಧಪಟ್ಟು ಟ್ವಿಟರ್​ ಮತ್ತು ಕೇಂದ್ರದ ನಡುವೆ ಕೆಲವು ತಿಕ್ಕಾಟಗಳು ನಡೆಯುತ್ತಿವೆ. ಟ್ವಿಟರ್ ಇಂಡಿಯಾದ ಕುಂದುಕೊರತೆ ಸ್ಥಾನಿಕ ಅಧಿಕಾರಿಯನ್ನಾಗಿ ಟ್ವಿಟರ್​ ವಿನಯ್​ ಪ್ರಕಾಶ್​ ಅವರನ್ನು ನಿನ್ನೆಯಷ್ಟೇ ನೇಮಕ ಮಾಡಿದ್ದು, ಸದ್ಯದಲ್ಲಿ ಭಾರತದಲ್ಲಿ ಟ್ವಿಟರ್ ಸಂಪರ್ಕ ಕಚೇರಿಯೊಂದು ನಿರ್ಮಾಣವಾಗಲಿದೆ ಎಂದೂ ತಿಳಿಸಿದೆ.

ಇದನ್ನೂ ಓದಿ: Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​

Union Minister Rajeev Chandrasekhar loses blue tick Of his Twitter Account

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್