AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಕಿಸುವ ಭರದಲ್ಲಿ ತಪ್ಪು ಮಾಡಬೇಡಿ; ಶಶಿ ತರೂರ್​ ಇಂಗ್ಲಿಷ್​​ ತಿದ್ದಿದ ಕೇಂದ್ರ ಸಚಿವ ರಾಮದಾಸ್ ಅಠಾವಳೆ

ಸಂಸತ್ತಿನಲ್ಲಿ ಎದ್ದುನಿಂತ ನಿರ್ಮಲಾ ಸೀತಾರಾಮನ್​ ಹಿಂದೆಯೇ ಸಚಿವ ರಾಮದಾಸ್​ ಅಠಾವಳೆ ಕುಳಿತಿದ್ದು, ಅವರು ತಮ್ಮ ಕೈಯಿಂದ ಮೂಗು-ಬಾಯಿ ಮುಚ್ಚಿಕೊಂಡು, ಕಣ್ಣು ದೊಡ್ಡದಾಗಿ ಬಿಟ್ಟಿರುವ ಫೋಟೋವೊಂದನ್ನು ಶಶಿ ತರೂರ್​ ಟ್ವೀಟ್ ಮಾಡಿದ್ದಾರೆ.

ಟೀಕಿಸುವ ಭರದಲ್ಲಿ ತಪ್ಪು ಮಾಡಬೇಡಿ; ಶಶಿ ತರೂರ್​ ಇಂಗ್ಲಿಷ್​​ ತಿದ್ದಿದ ಕೇಂದ್ರ ಸಚಿವ ರಾಮದಾಸ್ ಅಠಾವಳೆ
ಶಶಿ ತರೂರ್ ಮತ್ತು ರಾಮದಾಸ್​ ಅಠಾವಳೆ
TV9 Web
| Edited By: |

Updated on: Feb 13, 2022 | 9:36 AM

Share

ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor)​ ಅವರಿಗೆ ಇಂಗ್ಲಿಷ್ ಭಾಷೆ ಮೇಲೆ ಅಪಾರ ಹಿಡಿತವಿದೆ. ಹೊಸ ಶಬ್ದಗಳನ್ನು ಪರಿಚಯಿಸುತ್ತಾರೆ. ಇಂಗ್ಲಿಷ್​​ನಲ್ಲಿ ಅಗಾಧ ಪಾಂಡಿತ್ಯ ಹೊಂದಿರುವವರು ಎಂದೇ ಖ್ಯಾತರಾಗಿದ್ದಾರೆ.  ಆದರೆ ಅಂಥ ಶಶಿ ತರೂರ್​ ಕೂಡ ಇಂಗ್ಲಿಷ್​ನಲ್ಲಿ ಈಗ ತಪ್ಪು ಮಾಡಿದ್ದಾರೆ ಮತ್ತು ಕೇಂದ್ರ ಸಚಿವ ರಾಮ್​ದಾಸ್ ಅಠಾವಳೆ (Ramdas Athawale)ಅದನ್ನು ತಿದ್ದಿದ್ದಾರೆ.  ಅಷ್ಟಕ್ಕೂ ಇದೆಲ್ಲ ಆಗಿದ್ದು, ರಾಜಕೀಯ ಸಂಘರ್ಷದಲ್ಲಿ.  

ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಿದ್ದರು. ಈ ವೇಳೆ ನಿರ್ಮಲಾ ಸೀತಾರಾಮನ್​ ಭಾರತದ ಆರ್ಥಿಕತೆ ಬಗ್ಗೆ ಹೇಳಿಕೆ ನೀಡುತ್ತಿದ್ದರು. ಸಂಸತ್ತಿನಲ್ಲಿ ಎದ್ದುನಿಂತ ನಿರ್ಮಲಾ ಸೀತಾರಾಮನ್​ ಹಿಂದೆಯೇ ಸಚಿವ ರಾಮದಾಸ್​ ಅಠಾವಳೆ ಕುಳಿತಿದ್ದು, ಅವರು ತಮ್ಮ ಕೈಯಿಂದ ಮೂಗು-ಬಾಯಿ ಮುಚ್ಚಿಕೊಂಡು, ಕಣ್ಣು ದೊಡ್ಡದಾಗಿ ಬಿಟ್ಟಿರುವ ಫೋಟೋವೊಂದನ್ನು ಶಶಿ ತರೂರ್​ ಟ್ವೀಟ್ ಮಾಡಿಕೊಂಡಿದ್ದು, ಅದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಾತುಗಳನ್ನು ಸ್ವತಃ ಅಠಾವಳೆಯವರೇ ನಂಬುತ್ತಿಲ್ಲ ಎಂದು ಕ್ಯಾಪ್ಷನ್​ ಕೊಟ್ಟಿದ್ದರು. Nearly two-hour rely to the Bydget debate. The stunned and incredulous expression on Minister Ramdas Athawale’s face says it all: even the Treasury benches can’t believe FinMin Nirmala Sitharaman’s claims about the economy and her Budget! ಎಂದು ಇಂಗ್ಲಿಷ್​​ನಲ್ಲಿ ಟ್ವೀಟ್​ ಮಾಡಿದ್ದರು. ಇದರ ಅರ್ಥ ಬಜೆಟ್​​ ಡಿಬೇಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಅವರು ಸುಮಾರು ಎರಡು ತಾಸುಗಳ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಅಠಾವಳೆಯವರ ಮುಖದ ಮೇಲೆ ಮೂಡಿದ ದಿಗ್ಭ್ರಮೆ ಮತ್ತು ಅಪನಂಬಿಕೆಯೆಂಬ ಭಾವ ಎಲ್ಲವನ್ನೂ ಹೇಳುತ್ತಿದೆ. ಸಂಸತ್ತಿನಲ್ಲಿ ಮುಂದೆ ಕುಳಿತುಕೊಳ್ಳುವ ಸಚಿವರೂ ಕೂಡ ನಿರ್ಮಲಾ ಸೀತಾರಾಮನ್​​ರ ಬಜೆಟ್​ ಮತ್ತು ಆರ್ಥಿಕತೆಯ ಮೇಲಿನ ಅವರ ಪ್ರತಿಪಾದನೆಯನ್ನು ನಂಬುತ್ತಿಲ್ಲ ಎಂದು ಶಶಿ ತರೂರ್​ ಹೇಳಿದ್ದಾರೆ.

ಆದರೆ ಶಶಿ ತರೂರ್​ ಟ್ವೀಟ್​​ನಲ್ಲಿ ತಪ್ಪಿದೆ ಎಂದು ರಾಮದಾಸ್ ಅಠಾವಳೆ ಹೇಳಿದ್ದಾರೆ. ಅಷ್ಟೇ ಅಲ್ಲ ಅದನ್ನು ತಿದ್ದುವ ಪ್ರಯತ್ನವನ್ನೂ ಮಾಡಿದ್ದಾರೆ. ಶಶಿ ತರೂರ್​ ಜೀ, ಅನಗತ್ಯ ಹೇಳಿಕೆಗಳು, ಪ್ರತಿಪಾದನೆಗಳನ್ನು ಮಾಡುವಾಗ ತಪ್ಪಾಗುವುದು ಹೆಚ್ಚು ಎಂದು ದೊಡ್ಡವರು ಹೇಳುತ್ತಾರೆ. ಹಾಗೇ, ನೀವು ಮಾಡಿದ ಟ್ವೀಟ್​​ನಲ್ಲಿ Bydget ಎಂದು ಬರೆದಿದ್ದೀರಿ, ಆದರೆ ಅದು BUDGET. ಹಾಗೇ, ಇನ್ನೊಂದೆಡೆ rely ಎಂದು ಬರೆದುಕೊಂಡಿದ್ದೀರಿ, ಅದು Reply ಎಂಬುದು ಸರಿಯಾದ ಪ್ರಯೋಗ. ಇರಲಿ ಬಿಡಿ, ನಾವು ಅರ್ಥ ಮಾಡಿಕೊಳ್ಳುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್