AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾ ಬಂದರುಗಳ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಬಂದರುಗಳಿಗೆ ಕೇಂದ್ರದ ಸೂಚನೆ

Mega Ports: ಭಾರತದ ಕಡಲ ಆರ್ಥಿಕತೆಯನ್ನು ತ್ವರಿತವಾಗಿ ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ 2047ರ ವೇಳೆಗೆ ಎಲ್ಲಾ ಬಂದರುಗಳು ಮೆಗಾ ಬಂದರುಗಳನ್ನಾಗಿ ನಿರ್ಮಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಎಲ್ಲಾ ಬಂದರುಗಳಿಗೆ ಕರೆ ನೀಡಿದ್ದಾರೆ.

ಮೆಗಾ ಬಂದರುಗಳ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಬಂದರುಗಳಿಗೆ ಕೇಂದ್ರದ ಸೂಚನೆ
Sarbananda Sonowal
TV9 Web
| Edited By: |

Updated on: Jun 29, 2022 | 11:43 AM

Share

ನವದೆಹಲಿ: ಭಾರತದ ಕಡಲ ಆರ್ಥಿಕತೆಯನ್ನು ತ್ವರಿತವಾಗಿ ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ 2047ರ ವೇಳೆಗೆ ಎಲ್ಲಾ ಬಂದರುಗಳು ಮೆಗಾ ಬಂದರುಗಳನ್ನಾಗಿ ನಿರ್ಮಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಎಲ್ಲಾ ಬಂದರುಗಳಿಗೆ ಕರೆ ನೀಡಿದ್ದಾರೆ.

ಭಾರತದ ಕಡಲ ಆರ್ಥಿಕತೆಯನ್ನು ಹೆಚ್ಚಿಸುವ ಕುರಿತು ಮೂರು ದಿನಗಳ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಡಲ ಆರ್ಥಿಕತೆಯಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವ ಆಲೋಚನೆಗಳು ಮತ್ತು ನಾವೀನ್ಯತೆಗಳ ಕುರಿತು ಚರ್ಚೆ ನಡೆಯಿತು.

ಕಂಟೈನರ್ ಟ್ರೇಲರ್‌ಗಳಿಗೆ ಬಫರ್ ಪಾರ್ಕಿಂಗ್ ಯಾರ್ಡ್, ಸ್ಮಾರ್ಟ್ ವೆಸೆಲ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್, 5ಜಿ ನೆಟ್‌ವರ್ಕ್ ಪೈಲಟ್ ಪ್ರಾಜೆಕ್ಟ್, ಮೇಲ್ವಿಚಾರಣಾ ನಿಯಂತ್ರಣ ಮತ್ತು ಆಯಿಲ್ ಪೈಪ್‌ಲೈನ್ ಕಾರ್ಯಾಚರಣೆಗಾಗಿ ಡೇಟಾ ಸ್ವಾಧೀನ (ಎಸ್‌ಸಿಎಡಿಎ) ವ್ಯವಸ್ಥೆ, ಸ್ವಯಂಚಾಲಿತ ವಾಹನ ವೀಕ್ಷಣೆಗಳ ಕುರಿತು ಚರ್ಚಿಸಲಾಯಿತು.

ಸಿಬ್ಬಂದಿಯ RFID ಸ್ಕ್ಯಾನಿಂಗ್, ಡ್ರೋನ್ ಕಣ್ಗಾವಲು, ಹಸಿರು ಉಗ್ರಾಣ ವ್ಯವಸ್ಥೆ, ಜಲಾಶಯಗಳ ಪುನರುಜ್ಜೀವನ ಇತ್ಯಾದಿ ವಿಚಾರಗಳ ಕುರಿತು ಮಾತುಕತೆ ನಡೆಯಿತು. ಎಲ್ಲಾ ಬಂದರುಗಳು ತಮ್ಮ ಪ್ರಮುಖ ಸ್ಥಳಗಳಲ್ಲಿ VHF ತಂತ್ರಜ್ಞಾನದ ಬಳಕೆಯನ್ನು ಅಳವಡಿಸಿಕೊಳ್ಳಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಲಾಯಿತು. ಮೂರು ದಿನದಲ್ಲಿ ಹಡಗು ಉದ್ಯಮದ ಕುರಿತು ಸಾಕಷ್ಟು ಚರ್ಚೆಗಳು ನಡೆದವು.

ಹಣ ಉಳಿತಾಯ ಹಾಗೂ ಖರ್ಚು ಕಡಿತಕ್ಕೆ ಸಂಬಂಧಿಸಿದಂತೆ ಬಂದರುಗಳನ್ನು ಸುಧಾರಿಸಲು ತೆಗೆದುಕೊಳ್ಳಬಹುದಾದ ನಿರ್ಣಯಗಳ ಬಗ್ಗೆ ಚರ್ಚಿಸಲಾಯಿತು. ಡ್ರೋನ್ ಕಣ್ಗಾವಲು, ಇಂಟರ್ನೆಟ್ ಆಫ್ ಥಿಂಗ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮುಂತಾದ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಭಾರತೀಯ ಬಂದರುಗಳಲ್ಲಿ ಕಾರ್ಯಾಚರಣೆಯನ್ನು ಗಣನೀಯವಾಗಿ ಸುಧಾರಿಸಬಹುದಾದ ಹೊಸ ತಲೆಮಾರಿನ ಸ್ವಯಂಚಾಲಿತ ತಂತ್ರಜ್ಞಾನಗಳ ಕುರಿತು ಸಭೆಯಲ್ಲಿ ಗಮನಹರಿಸಲಾಯಿತು.

ಬಹು-ಮಾದರಿ ಸಂಪರ್ಕದ ಪ್ರಾಮುಖ್ಯತೆ ಮತ್ತು ಡ್ರೆಡ್ಜಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಬಗ್ಗೆ ಒತ್ತು ನೀಡಿದರು.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!