AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾ ಬಂದರುಗಳ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಬಂದರುಗಳಿಗೆ ಕೇಂದ್ರದ ಸೂಚನೆ

Mega Ports: ಭಾರತದ ಕಡಲ ಆರ್ಥಿಕತೆಯನ್ನು ತ್ವರಿತವಾಗಿ ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ 2047ರ ವೇಳೆಗೆ ಎಲ್ಲಾ ಬಂದರುಗಳು ಮೆಗಾ ಬಂದರುಗಳನ್ನಾಗಿ ನಿರ್ಮಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಎಲ್ಲಾ ಬಂದರುಗಳಿಗೆ ಕರೆ ನೀಡಿದ್ದಾರೆ.

ಮೆಗಾ ಬಂದರುಗಳ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಬಂದರುಗಳಿಗೆ ಕೇಂದ್ರದ ಸೂಚನೆ
Sarbananda Sonowal
TV9 Web
| Edited By: |

Updated on: Jun 29, 2022 | 11:43 AM

Share

ನವದೆಹಲಿ: ಭಾರತದ ಕಡಲ ಆರ್ಥಿಕತೆಯನ್ನು ತ್ವರಿತವಾಗಿ ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ 2047ರ ವೇಳೆಗೆ ಎಲ್ಲಾ ಬಂದರುಗಳು ಮೆಗಾ ಬಂದರುಗಳನ್ನಾಗಿ ನಿರ್ಮಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಎಲ್ಲಾ ಬಂದರುಗಳಿಗೆ ಕರೆ ನೀಡಿದ್ದಾರೆ.

ಭಾರತದ ಕಡಲ ಆರ್ಥಿಕತೆಯನ್ನು ಹೆಚ್ಚಿಸುವ ಕುರಿತು ಮೂರು ದಿನಗಳ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಡಲ ಆರ್ಥಿಕತೆಯಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವ ಆಲೋಚನೆಗಳು ಮತ್ತು ನಾವೀನ್ಯತೆಗಳ ಕುರಿತು ಚರ್ಚೆ ನಡೆಯಿತು.

ಕಂಟೈನರ್ ಟ್ರೇಲರ್‌ಗಳಿಗೆ ಬಫರ್ ಪಾರ್ಕಿಂಗ್ ಯಾರ್ಡ್, ಸ್ಮಾರ್ಟ್ ವೆಸೆಲ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್, 5ಜಿ ನೆಟ್‌ವರ್ಕ್ ಪೈಲಟ್ ಪ್ರಾಜೆಕ್ಟ್, ಮೇಲ್ವಿಚಾರಣಾ ನಿಯಂತ್ರಣ ಮತ್ತು ಆಯಿಲ್ ಪೈಪ್‌ಲೈನ್ ಕಾರ್ಯಾಚರಣೆಗಾಗಿ ಡೇಟಾ ಸ್ವಾಧೀನ (ಎಸ್‌ಸಿಎಡಿಎ) ವ್ಯವಸ್ಥೆ, ಸ್ವಯಂಚಾಲಿತ ವಾಹನ ವೀಕ್ಷಣೆಗಳ ಕುರಿತು ಚರ್ಚಿಸಲಾಯಿತು.

ಸಿಬ್ಬಂದಿಯ RFID ಸ್ಕ್ಯಾನಿಂಗ್, ಡ್ರೋನ್ ಕಣ್ಗಾವಲು, ಹಸಿರು ಉಗ್ರಾಣ ವ್ಯವಸ್ಥೆ, ಜಲಾಶಯಗಳ ಪುನರುಜ್ಜೀವನ ಇತ್ಯಾದಿ ವಿಚಾರಗಳ ಕುರಿತು ಮಾತುಕತೆ ನಡೆಯಿತು. ಎಲ್ಲಾ ಬಂದರುಗಳು ತಮ್ಮ ಪ್ರಮುಖ ಸ್ಥಳಗಳಲ್ಲಿ VHF ತಂತ್ರಜ್ಞಾನದ ಬಳಕೆಯನ್ನು ಅಳವಡಿಸಿಕೊಳ್ಳಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಲಾಯಿತು. ಮೂರು ದಿನದಲ್ಲಿ ಹಡಗು ಉದ್ಯಮದ ಕುರಿತು ಸಾಕಷ್ಟು ಚರ್ಚೆಗಳು ನಡೆದವು.

ಹಣ ಉಳಿತಾಯ ಹಾಗೂ ಖರ್ಚು ಕಡಿತಕ್ಕೆ ಸಂಬಂಧಿಸಿದಂತೆ ಬಂದರುಗಳನ್ನು ಸುಧಾರಿಸಲು ತೆಗೆದುಕೊಳ್ಳಬಹುದಾದ ನಿರ್ಣಯಗಳ ಬಗ್ಗೆ ಚರ್ಚಿಸಲಾಯಿತು. ಡ್ರೋನ್ ಕಣ್ಗಾವಲು, ಇಂಟರ್ನೆಟ್ ಆಫ್ ಥಿಂಗ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮುಂತಾದ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಭಾರತೀಯ ಬಂದರುಗಳಲ್ಲಿ ಕಾರ್ಯಾಚರಣೆಯನ್ನು ಗಣನೀಯವಾಗಿ ಸುಧಾರಿಸಬಹುದಾದ ಹೊಸ ತಲೆಮಾರಿನ ಸ್ವಯಂಚಾಲಿತ ತಂತ್ರಜ್ಞಾನಗಳ ಕುರಿತು ಸಭೆಯಲ್ಲಿ ಗಮನಹರಿಸಲಾಯಿತು.

ಬಹು-ಮಾದರಿ ಸಂಪರ್ಕದ ಪ್ರಾಮುಖ್ಯತೆ ಮತ್ತು ಡ್ರೆಡ್ಜಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಬಗ್ಗೆ ಒತ್ತು ನೀಡಿದರು.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?