AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲೇಶ್​ ಯಾದವ್​ ಪ್ರತಿಸ್ಪರ್ಧಿ ಕೇಂದ್ರ ಸಚಿವ ಸತ್ಯಪಾಲ್​ ಸಿಂಗ್​ ಬೆಂಗಾವಲು ವಾಹನದ ಮೇಲೆ ಕಲ್ಲು, ಕೋಲುಗಳಿಂದ ದಾಳಿ; ಕರ್ಹಾಲ್​​ನಲ್ಲೇ ನಡೆದ ಘಟನೆ

ಕೇಂದ್ರ ಸಚಿವರ ಬೆಂಗಾವಲು ವಾಹನದ ಮೇಲೆ ಅಟ್ಟಿಕುಲ್ಲಾಪುರ ಗ್ರಾಮದ ಬಳಿ ಕಲ್ಲು ಮತ್ತು ಕೋಲುಗಳಿಂದ ದಾಳಿ ನಡೆದಿದ್ದನ್ನು ಮೇನ್​​ಪುರಿ ಪೊಲೀಸರು ದೃಢಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಖಿಲೇಶ್​ ಯಾದವ್​ ಪ್ರತಿಸ್ಪರ್ಧಿ ಕೇಂದ್ರ ಸಚಿವ ಸತ್ಯಪಾಲ್​ ಸಿಂಗ್​ ಬೆಂಗಾವಲು ವಾಹನದ ಮೇಲೆ ಕಲ್ಲು, ಕೋಲುಗಳಿಂದ ದಾಳಿ; ಕರ್ಹಾಲ್​​ನಲ್ಲೇ ನಡೆದ ಘಟನೆ
ಸತ್ಯಪಾಲ್​ ಸಿಂಗ್​ ಬಾಘೇಲ್​ ಕಾರಿನ ಮೇಲೆ ದಾಳಿ
TV9 Web
| Edited By: |

Updated on: Feb 16, 2022 | 8:34 AM

Share

ಲಖನೌ: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಇಲಾಖೆ ಸಚಿವ ಸತ್ಯಪಾಲ್​ ಸಿಂಗ್​ ಬಾಘೇಲ್ (Satya Pal Singh Baghel)​ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆದಿದೆ. ಉತ್ತರ ಪ್ರದೇಶದ ಮೇನ್​ಪುರಿ ಜಿಲ್ಲೆಯ ಕರ್ಹಾಲ್​(Karhal) ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸತ್ಯಪಾಲ್​ ಸಿಂಗ್​ ನಿನ್ನೆ ತಮ್ಮ ಕ್ಷೇತ್ರಕ್ಕೆ ಹೋದಾಗ ಅವರ ಬೆಂಗಾವಲು ವಾಹನಗಳ ಮೇಲೆ ಸಮಾಜವಾದಿ ಪಕ್ಷದ ಗೂಂಡಾಗಳು ಕಲ್ಲು ತೂರಾಟ, ದಾಳಿ ನಡೆಸಿದ್ದಾರೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್ ಮೌರ್ಯ ಆರೋಪಿಸಿದ್ದಾರೆ. ಸತ್ಯಪಾಲ್​ ಸಿಂಗ್​ ಅವರಿಗೆ ಯಾವುದೇ ಗಾಯವಾಗಿಲ್ಲ. ಅಂದ ಹಾಗೇ, ಈ ಕರ್ಹಾಲ್​​ ವಿಧಾನಸಭಾ ಕ್ಷೇತ್ರದಿಂದ ಅಖಿಲೇಶ್ ಯಾದವ್​ ಸ್ಪರ್ಧಿಸುತ್ತಿದ್ದಾರೆ. ಅವರು ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅಖಿಲೇಶ್​ ಯಾದವ್​ಗೆ ಸತ್ಯಪಾಲ ಸಿಂಗ್​ ಬಾಘೇಲ್​ ಪ್ರತಿಸ್ಪರ್ಧಿ.

ಕೇಂದ್ರ ಸಚಿವರ ಬೆಂಗಾವಲು ವಾಹನದ ಮೇಲೆ ಅಟ್ಟಿಕುಲ್ಲಾಪುರ ಗ್ರಾಮದ ಬಳಿ ಕಲ್ಲು ಮತ್ತು ಕೋಲುಗಳಿಂದ ದಾಳಿ ನಡೆದಿದ್ದನ್ನು ಮೇನ್​​ಪುರಿ ಪೊಲೀಸರು ದೃಢಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಬಾಘೇಲ್​, ನನ್ನ ಕಾರು ಅಟ್ಟಿಕುಲ್ಲಾಪುರ ಮಾರ್ಗವಾಗಿ ಕರ್ಹಾಲ್​ಗೆ ತೆರಳುತ್ತಿತ್ತು. ಅಟ್ಟಿಕುಲ್ಲಾಪುರದ ಬಳಿಕ ಹಲವು ಜನರು ಬಡಿಗೆ ಮತ್ತು ಕಬ್ಬಿಣದ ರಾಡ್​​ಗಳನ್ನು ಹಿಡಿದು ಏಕಾಏಕಿ ಬಂದು ಬೆಂಗಾವಲು ವಾಹನಗಳ ಮೇಲೆ ದಾಳಿ ನಡೆಸಿದರು. ಅವರು ಅಖಿಲೇಶ್​ಬಯ್ಯಾ ಜಿಂದಾಬಾದ್​ ಎಂದು ಘೋಷಣೆ ಕೂಗುತ್ತಿದ್ದರು ಎಂದು ಹೇಳಿದ್ದಾರೆ. ಅದರಲ್ಲಿ ಒಬ್ಬಾತ ತನ್ನನ್ನು ತಾನು ಉಮಾ ಕಾಂತ್​ ಯಾದವ್​ ಎಂದು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲ, ಸಚಿವರನ್ನು ಇಂದು ಬಿಡುವುದಿಲ್ಲ ಎಂದು ಕೂಗಿದ್ದಾಗಿ ಕೂಡ ಸತ್ಯಪಾಲ ಸಿಂಗ್​ ತಿಳಿಸಿದ್ದಾರೆ.

ವೀರಾವೇಶದಿಂದ ಕೂಗುತ್ತ ಬಂದರು. ಅಷ್ಟರಲ್ಲಿ ನನ್ನ ಬೆಂಗಾವಲು ವಾಹನದಲ್ಲಿದ್ದ ಭದ್ರತಾ ಸಿಬ್ಬಂದಿ ಕೆಳಗೆ ಇಳಿಯುತ್ತಿದ್ದಂತೆ ಅವರೆಲ್ಲರೂ ಓಡಿ ಹೋದರು. ಬೆಂಗಾವಲಿಗೆ ಇದ್ದ ಒಂದು ಕಾರಿನ ಮೇಲೆ ಗುಂಡಿನ ದಾಳಿ ಕೂಡ ನಡೆಸಲಾಗಿದೆ ಎಂದೂ ಸಚಿವರು ಆರೋಪಿಸಿದ್ದಾರೆ. ಇನ್ನೊಂದೆಡೆ ಕೇಶವ್​ ಪ್ರಸಾದ್ ಮೌರ್ಯ ಕೂಡ ದಾಳಿ ಕೋರರ ವಿರುದ್ಧ ಕಿಡಿ ಕಾರಿದ್ದಾರೆ. ಖಂಡಿತ ಈ ಬಾರಿ ಅಖಿಲೇಶ್ ಯಾದವ್ ಸೋಲುತ್ತಾರೆ. ಬಿಜೆಪಿ ಸಂಸದೆ ಗೀತಾ ಶಕ್ಯಾ ಅವರ ಮೇಲೆ ಕೂಡ ಫೆ.14ರಂದು ದಾಳಿ ನಡೆದಿತ್ತು. ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್-ಕೇಸರಿ ಶಾಲು ವಿವಾದ; ರಾಜ್ಯಾದ್ಯಂತ ಇಂದಿನಿಂದ ಕಾಲೇಜ್ ಓಪನ್, ಕಾಲೇಜ್​ಗಳಲ್ಲಿ ಖಾಕಿ ಕಣ್ಗಾವಲು

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ