AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್

Meri Mati Mera Desh: ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಜಗನ್ನಾಥ ಪುರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್
ನಯನಾ ರಾಜೀವ್
| Edited By: |

Updated on:Aug 17, 2023 | 12:50 PM

Share

ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಪುರಿ ಜಗನ್ನಾಥ  ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದರ್ಶನದ ನಂತರ ನಿರ್ಮಲಾ ಸೀತಾರಾಮನ್ ಮತ್ತು ಧರ್ಮೇಂದ್ರ ಪ್ರಧಾನ್ ಪುರಿಯ ಬ್ಲೂ ಫ್ಲಾಗ್ ಬೀಚ್‌ಗೆ ಆಗಮಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರ ಮರಳು ಕಲೆಯನ್ನು ವೀಕ್ಷಿಸಿದರು. ಇದೇ ವೇಳೆ ಸುದರ್ಶನ್ ಮೇರಿ ಮಾಟಿ ಮೇರಾ ದೇಶ್ ಎಂಬ ವಿಷಯದ ಕುರಿತು ಕಲಾಕೃತಿಯನ್ನು ಸಿದ್ಧಪಡಿಸಿದ್ದರು.

ಮೇರಿ ಮಾಟಿ, ಮೇರಾ ದೇಶ್’ ಕಾರ್ಯಕ್ರಮದಡಿ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ವಿದೇಶಿಯರ ಗುಲಾಮಗಿರಿಯ ಕಾಲದಲ್ಲಿ ನಮ್ಮಲ್ಲಿ ಮೂಡಿರುವ ಮನಸ್ಥಿತಿಯನ್ನು ಹೋಗಲಾಡಿಸುವುದು ಬಹಳ ಮುಖ್ಯ. ಆಗ ಮಾತ್ರ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತದೆ ಮತ್ತು ಭಾರತದ ಬಗ್ಗೆ ಹೆಮ್ಮೆ ಪಡುವ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಪಂಚ ಪ್ರಾಣ ಪ್ರತಿಜ್ಞಾ ಕುರಿತ ಎಎನ್​ಐ ಟ್ವೀಟ್

ಈ ಕಾರ್ಯಕ್ರಮವು ಆಗಸ್ಟ್ 9 ರಿಂದ ಪ್ರಾರಂಭವಾಗಿದೆ ಮತ್ತು ಈ ಅಭಿಯಾನವು ಆಗಸ್ಟ್ 30 ರವರೆಗೆ ನಡೆಯಲಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವೀರಯೋಧರನ್ನು ಗೌರವಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಅಭಿಯಾನದಡಿ ದೇಶದಾದ್ಯಂತ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಮತ್ತಷ್ಟು ಓದಿ: ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಮೇರಿ ಮಾಟಿ ಮೇರಾ ದೇಶ್ ಅಭಿಯಾನದ ಅಡಿಯಲ್ಲಿ, 16 ಆಗಸ್ಟ್ 2023 ರಿಂದ ಬ್ಲಾಕ್, ಪುರಸಭೆ, ಕಾರ್ಪೊರೇಷನ್ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳು ಆರಂಭವಾಗಿವೆ. ಸಮಾರೋಪ ಸಮಾರಂಭವನ್ನು 30 ಆಗಸ್ಟ್ 2023 ರಂದು ನವದೆಹಲಿಯ ಕಧ್ವತಿ ಪಥ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Thu, 17 August 23

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ