AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್

Meri Mati Mera Desh: ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಜಗನ್ನಾಥ ಪುರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್
ನಯನಾ ರಾಜೀವ್
| Edited By: |

Updated on:Aug 17, 2023 | 12:50 PM

Share

ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಪುರಿ ಜಗನ್ನಾಥ  ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದರ್ಶನದ ನಂತರ ನಿರ್ಮಲಾ ಸೀತಾರಾಮನ್ ಮತ್ತು ಧರ್ಮೇಂದ್ರ ಪ್ರಧಾನ್ ಪುರಿಯ ಬ್ಲೂ ಫ್ಲಾಗ್ ಬೀಚ್‌ಗೆ ಆಗಮಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರ ಮರಳು ಕಲೆಯನ್ನು ವೀಕ್ಷಿಸಿದರು. ಇದೇ ವೇಳೆ ಸುದರ್ಶನ್ ಮೇರಿ ಮಾಟಿ ಮೇರಾ ದೇಶ್ ಎಂಬ ವಿಷಯದ ಕುರಿತು ಕಲಾಕೃತಿಯನ್ನು ಸಿದ್ಧಪಡಿಸಿದ್ದರು.

ಮೇರಿ ಮಾಟಿ, ಮೇರಾ ದೇಶ್’ ಕಾರ್ಯಕ್ರಮದಡಿ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ವಿದೇಶಿಯರ ಗುಲಾಮಗಿರಿಯ ಕಾಲದಲ್ಲಿ ನಮ್ಮಲ್ಲಿ ಮೂಡಿರುವ ಮನಸ್ಥಿತಿಯನ್ನು ಹೋಗಲಾಡಿಸುವುದು ಬಹಳ ಮುಖ್ಯ. ಆಗ ಮಾತ್ರ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತದೆ ಮತ್ತು ಭಾರತದ ಬಗ್ಗೆ ಹೆಮ್ಮೆ ಪಡುವ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಪಂಚ ಪ್ರಾಣ ಪ್ರತಿಜ್ಞಾ ಕುರಿತ ಎಎನ್​ಐ ಟ್ವೀಟ್

ಈ ಕಾರ್ಯಕ್ರಮವು ಆಗಸ್ಟ್ 9 ರಿಂದ ಪ್ರಾರಂಭವಾಗಿದೆ ಮತ್ತು ಈ ಅಭಿಯಾನವು ಆಗಸ್ಟ್ 30 ರವರೆಗೆ ನಡೆಯಲಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವೀರಯೋಧರನ್ನು ಗೌರವಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಅಭಿಯಾನದಡಿ ದೇಶದಾದ್ಯಂತ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಮತ್ತಷ್ಟು ಓದಿ: ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಮೇರಿ ಮಾಟಿ ಮೇರಾ ದೇಶ್ ಅಭಿಯಾನದ ಅಡಿಯಲ್ಲಿ, 16 ಆಗಸ್ಟ್ 2023 ರಿಂದ ಬ್ಲಾಕ್, ಪುರಸಭೆ, ಕಾರ್ಪೊರೇಷನ್ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳು ಆರಂಭವಾಗಿವೆ. ಸಮಾರೋಪ ಸಮಾರಂಭವನ್ನು 30 ಆಗಸ್ಟ್ 2023 ರಂದು ನವದೆಹಲಿಯ ಕಧ್ವತಿ ಪಥ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Thu, 17 August 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ